ನವದೆಹಲಿ : ಲೋಕಸಭಾ ಚುನಾವಣೆಯ ಫಲಿತಾಂಶದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ರಾಜೀನಾಮೆಯನ್ನು ಅಧ್ಯಕ್ಷ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ರಾಜೀನಾಮೆಯನ್ನು ರಾಷ್ಟ್ರಪತಿಗಳಿಗೆ ಸಲ್ಲಿಸಿದ್ದು, ಅದನ್ನು ರಾಷ್ಟ್ರಪತಿಗಳು ಅಂಗೀಕರಿಸಿದ್ದಾರೆ. ಅದೇ ಸಮಯದಲ್ಲಿ, ರಾಷ್ಟ್ರಪತಿಗಳು ಹೊಸ ಸರ್ಕಾರ ರಚನೆಯಾಗುವವರೆಗೆ ಉಸ್ತುವಾರಿ ವಹಿಸುವಂತೆ ಪ್ರಧಾನಿ ಮತ್ತು ಅವರ ಮಂತ್ರಿಮಂಡಲವನ್ನು ವಿನಂತಿಸಿದ್ದಾರೆ.
ಈ ನಡುವೆ ಹೊಸ ಸರ್ಕಾರ ರಚನೆಗಾಗಿ ದೆಹಲಿಯ ಲೋಕಕಲ್ಯಾಣ ರಸ್ತೆಯರುವ ನರೇಂದ್ರ ಮೋದಿ ಅವರ ನಿವಾಸದಲ್ಲಿ ಮತ್ತೊಂದು ಹೈವೋಲ್ಟೇಜ್ ಸಭೆ ನಡೆಸಲು ನಿರ್ಧರಿಸಿದ್ದಾರೆ. ಸಭೆಯಲ್ಲಿ ಚಂದ್ರಬಾಬು ನಾಯ್ಡು, ನಿತೀಶ್ ಕುಮಾರ್, ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ ಹಲವು ಎನ್ ಡಿಎ ಮಿತ್ರಪಕ್ಷಗಳ ನಾಯಕರು ಭಾಗಿಯಾಗಲಿದ್ದಾರೆ.
ಇನ್ನು 17 ನೇ ಲೋಕಸಭೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿಸರ್ಜಿಸುವ ಕ್ಯಾಬಿನೆಟ್ನ ಸಲಹೆಯನ್ನು ಅಧ್ಯಕ್ಷ ದ್ರೌಪದಿ ಮುರ್ಮು ಸ್ವೀಕರಿಸಿದ್ದಾರೆ” ಎಂದು ರಾಷ್ಟ್ರಪತಿ ಭವನದ ಸಾಮಾಜಿಕ ಮಾಧ್ಯಮ ಖಾತೆ ತಿಳಿಸಿದೆ. ಸಂವಿಧಾನದ 85ನೇ ಪರಿಚ್ಛೇದದ ಕಲಂ (2)ರ ಅಡಿಯಲ್ಲಿ ಅಧಿಕಾರವನ್ನು ಚಲಾಯಿಸಿ 17ನೇ ಲೋಕಸಭೆಯನ್ನು ವಿಸರ್ಜಿಸುವ ಆದೇಶಕ್ಕೆ ರಾಷ್ಟ್ರಪತಿಗಳು ಸಹಿ ಹಾಕಿದರು.
President Droupadi Murmu has accepted advice of the Cabinet to dissolve the 17th Lok Sabha with immediate effect. The President signed the Order dissolving the 17th Lok Sabha in exercise of the powers conferred upon her by Sub-clause (b) of Clause (2) of Article 85 of the…
— President of India (@rashtrapatibhvn) June 5, 2024