ಬೆಂಗಳೂರು : ಉತ್ತರಾಖಂಡದ ಸಹಸ್ರತಲ್ಗೆ ಚಾರಣಕ್ಕೆ ತೆರಳಿದ ವೇಳೆ ಹವಾಮಾನ ವೈಪರಿತ್ಯದಿಂದಾಗಿ ಸಂಕಷ್ಟಕ್ಕೆ ಸಿಲುಕಿರುವವರನ್ನು ರಕ್ಷಣೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದು, ಉತ್ತರಾಖಂಡದ ಸಹಸ್ರತಲ್ಗೆ ಚಾರಣಕ್ಕೆ ತೆರಳಿದ ವೇಳೆ ಹವಾಮಾನ ವೈಪರಿತ್ಯದಿಂದಾಗಿ ಸಂಕಷ್ಟಕ್ಕೆ ಸಿಲುಕಿರುವವರ ರಕ್ಷಣಾಕಾರ್ಯ ಮತ್ತು ಅವಘಡದಲ್ಲಿ ಮೃತಪಟ್ಟವರ ಶವಗಳನ್ನು ಮರಳಿ ತರಲು ನಮ್ಮ ಸರ್ಕಾರವು ಪ್ರಾಮಾಣಿಕ ಪ್ರಯತ್ನ ನಡೆಸಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ರಕ್ಷಣಾ ಕಾರ್ಯಕ್ಕೆ ಪ್ರತಿಕೂಲ ಹವಾಮಾನವು ಸವಾಲೊಡ್ಡಿದರೂ ಅದನ್ನು ಮೆಟ್ಟಿನಿಂತು ಪ್ರಾಣಾಪಾಯದಲ್ಲಿದ್ದ ಚಾರಣಿಗರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ಹೇಳಿದ್ದಾರೆ.
ಉತ್ತರಾಖಂಡದ ಸಹಸ್ರತಲ್ಗೆ ಚಾರಣಕ್ಕೆ ತೆರಳಿದ್ದ ಕರ್ನಾಟಕದ ೯ ಮಂದಿ ಹವಾಮಾನ ವೈಪರಿತ್ಯದಿಂದಾಗಿ ಸಾವನ್ನಪ್ಪಿದ್ದು, ಇಂದು ಸಂಜೆ ವೇಳೆಗೆ ಮೃತದೇಹಗಳನ್ನು ಬೆಂಗಳೂರಿಗೆ ಏರ್ ಲಿಫ್ಟ್ ಮಾಡಲು ಸಿದ್ದತೆ ನಡೆಸಲಾಗಿದೆ ಎಂದು ಸಚಿವ ಕೃಷ್ಣಬೈರೇಗೌಡ ಹೇಳಿದ್ದಾರೆ.