ಹೈದರಾಬಾದ್: ಸಾಂಗ್ಲಿಯ ಸ್ವತಂತ್ರ ಸಂಸದ ವಿಶಾಲ್ ಪಾಟೀಲ್ ಗುರುವಾರ ಕಾಂಗ್ರೆಸ್ ಗೆ ಬೆಂಬಲ ನೀಡಿದ್ದು, INDIA ಮೈತ್ರಿಕೂಟದ ಸಂಖ್ಯೆ 233 ಕ್ಕೆ ಏರಿದೆ.
ಪಾಟೀಲ್ ಅವರ ಬೆಂಬಲವನ್ನು ಸ್ವಾಗತಿಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, “ಮಹಾರಾಷ್ಟ್ರದ ಜನರು ದ್ರೋಹ, ಅಹಂಕಾರ ಮತ್ತು ವಿಭಜನೆಯ ರಾಜಕೀಯವನ್ನು ಸೋಲಿಸಿದ್ದಾರೆ. ಸಾಮಾಜಿಕ ನ್ಯಾಯ, ಸಮಾನತೆ ಮತ್ತು ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜ್, ಮಹಾತ್ಮ ಜ್ಯೋತಿಬಾ ಫುಲೆ ಮತ್ತು ಬಾಬಾ ಸಾಹೇಬ್ ಡಾ.ಅಂಬೇಡ್ಕರ್ ಅವರಂತಹ ನಮ್ಮ ಸ್ಪೂರ್ತಿದಾಯಕ ದಿಗ್ಗಜರಿಗೆ ಇದು ಸೂಕ್ತ ಗೌರವವಾಗಿದೆ. ಸಾಂಗ್ಲಿಯ ಚುನಾಯಿತ ಸಂಸದ ವಿಶಾಲ್ ಪಾಟೀಲ್ ಅವರು ಕಾಂಗ್ರೆಸ್ ಪಕ್ಷಕ್ಕೆ ನೀಡಿದ ಬೆಂಬಲವನ್ನು ಸ್ವಾಗತಿಸುತ್ತೇನೆ. ಸಂವಿಧಾನ ದೀರ್ಘಕಾಲ ಬಾಳಲಿ ಅಂತ ಹೇಳಿದರು.