ಚಿತ್ರದುರ್ಗ : ರೇಣುಕಾಸ್ವಾಮಿ ಹತ್ಯೆ ಮಾಡಿದ ದರ್ಶನ್ ಅವರನ್ನು ಚಿತ್ರರಂಗದಿಂದ ಬ್ಯಾನ್ ಮಾಡಬೇಕು ಎಂದು ರೇಣುಕಾಸ್ವಾಮಿ ತಾಯಿ ರತ್ನಮ್ಮ ಆಗ್ರಹಿಸಿದ್ದಾರೆ.
ಮಗನನ್ನು ಕಳೆದುಕೊಂಡ ತಾಯಿ ಆಕ್ರೋಶ ಮುಗಿಲು ಮುಟ್ಟಿದ್ದು ದರ್ಶನ್ ಎಲ್ಲಾ ಫಿಲ್ಮ್ನ ಗಳನ್ನು ಬ್ಯಾಣ್ ಮಾಡಬೇಕು ಅತನನ್ನು ಚಿತ್ರರಂಗದಿಂದ ನಿಷೇಧಿಸಬೇಕು, ದರ್ಶನ್ ಮತ್ತು ಗ್ಯಾಂಗ್ ಕಠಿಣ ಶಿಕ್ಷೆಯಾಗಬೇಕು. ನನ್ನ ಮಗ ವಿಲವಿಲ ಒದ್ದಾಡಿ ಸತ್ತಂತೆ ದರ್ಶನ್ ಸಾಯಬೇಕು. ಪವಿತ್ರಾ ಗೌಡಳನ್ನು ಯಾವುದೇ ಕಾರಣಕ್ಕೂ ಬಿಡಬಾರದು ಎಂದು ಹಿಡಿಶಾಪ ಹಾಕಿದ್ದಾರೆ.
ನನ್ನ ಸೊಸೆಗೆ ಅನ್ಯಾಯ ಆಗಿದೆ, ಪರಿಹಾರ ಕೊಡಬೇಕುಉ. ಅವನ ಹತ್ರ ಎಂತಾ ಕಂತ್ರಿ ಬುದ್ದಿ ಇತ್ತು ಗೊತ್ತಾಗಿದೆ. ಅವನಿಗೆ ಕಠಿಣ ಶಿಕ್ಷೆಯಾಗಬೇಕು, ನಮ್ಮ ವಂಶ ನಿರ್ವಂಶ ಮಾಡಿದ ದರ್ಶನ್ಗೆ ತಕ್ಕ ಶಾಸ್ತಿ ಆಗಲಿ. ನನ್ನ ಮಗನನ್ನು ಕೊಂದಂತೆ ಅವನನ್ನು ಸಾಯಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.