Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಸಲಿಂಗಕಾಮಕ್ಕೆ ಅಡ್ಡಿಯೆಂದು 5 ತಿಂಗಳ ಹೆತ್ತ ಮಗುವನ್ನೇ ಕೊಂದ ಪಾಪಿ ತಾಯಿ.!

09/11/2025 6:19 AM

ದೇಶದ ಇತಿಹಾಸದಲ್ಲೇ ಇದೇ ಮೊದಲು: ಪ್ರತಿಯೊಬ್ಬ ರಾಜ್ಯ ಸರ್ಕಾರಿ ನೌಕರರಿಗೂ ಸಂಘದ ಕ್ಯಾಲೆಂಡರ್ ವಿತರಣೆ

09/11/2025 6:18 AM

ಗಮನಿಸಿ : ಪದವೀಧರ, ಶಿಕ್ಷಕರ ಕ್ಷೇತ್ರಗಳ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ದಿನಾಂಕ ವಿಸ್ತರಣೆ.!

09/11/2025 6:15 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಕಲಿ ವೈದ್ಯರ ಹಾವಳಿಗೆ ಕಟ್ಟುನಿಟ್ಟಿನ ಕ್ರಮ: ಸಚಿವ ಡಾ‌.ಶರಣಪ್ರಕಾಶ್‌ ಪಾಟೀಲ್‌
KARNATAKA

ನಕಲಿ ವೈದ್ಯರ ಹಾವಳಿಗೆ ಕಟ್ಟುನಿಟ್ಟಿನ ಕ್ರಮ: ಸಚಿವ ಡಾ‌.ಶರಣಪ್ರಕಾಶ್‌ ಪಾಟೀಲ್‌

By kannadanewsnow0912/06/2024 6:24 PM

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ನಕಲಿ ವೈದ್ಯರ ಹಾವಳಿಯನ್ನು ತಡೆಗಟ್ಟಲು ಸರ್ಕಾರ ಕಟ್ಟುನಿಟ್ಟಿನ ಬಿಗಿಯಾದ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಹಾಗು ಜೀವನೋಪಾಯ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌ ಎಚ್ಚರಿಕೆ ನೀಡಿದ್ದಾರೆ.

ಬುಧವಾರ ಕರ್ನಾಟಕ ಖಾಸಗಿ ಹೋಮಿಯೋಪಥಿಕ್‌ ವೈದ್ಯಕೀಯ ಮಹಾ ವಿದ್ಯಾಲಯಗಳ ಆಡಳಿತ ಸಂಘದ ವತಿಯಿಂದ ಡಾ.ಬಿಆರ್‌.ಅಂಬೇಡ್ಕರ್‌ ಭವನದಲ್ಲಿ ಹಮಿಕೊಂಡಿದ್ದ ವಿಶ್ವ ಹೋಮಿಯೋಪತಿ ದಿನಾಚರಣೆ ಮತ್ತು ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ನಕಲಿ ವೈದ್ಯರ ಹಾವಳಿ ವ್ಯಾಪಕವಾಗಿ ಕೇಳಿಬರುತ್ತಿದೆ. ಯಾವುದೇ ವೈದ್ಯಕೀಯ ಕೋರ್ಸ್‌ ಮುಗಿಸದೆ ಇರುವವರು ಎಲ್ಲೆಂದರಲ್ಲಿ ಕ್ಲಿನಿಕ್‌ಗಳನ್ನು ತೆರೆದು ಚಿಕಿತ್ಸೆ ನೀಡುತ್ತಾರೆ. ಇದರ ಬಗ್ಗೆ ಸರ್ಕಾರಕ್ಕೆ ಸಾಕಷ್ಟು ದೂರುಗಳು ಬಂದಿವೆ ಎಂದು ಹೇಳಿದರು.

ಗ್ರಾಮೀಣ ಭಾಗದ ಜನರ ಅಮಾಯಕತೆಯನ್ನು ಕೆಲವರು ದುರುಪಯೋಗಪಡಿಸಿಕೊಂಡು ನಕಲಿ ಚಿಕಿತ್ಸೆ ನೀಡುತ್ತಾರೆ. ಇದು ಕಾನೂನು ಬಾಹಿರ ಎಂದು ಗೊತ್ತಿದ್ದರೂ ಕೆಲವರು ಚಿಕಿತ್ಸೆ ನೀಡುತ್ತಿದ್ದಾರೆ. ಇನ್ನು ಮುಂದೆ ಇದಕ್ಕೆ ಶಾಶ್ವತವಾದ ಕಡಿವಾಣ ಬೀಳಲಿದೆ ಎಂದರು. ಕೇವಲ ಸರ್ಕಾರದಿಂದ ಮಾತ್ರ ನಕಲಿ ವೈದ್ಯರ ಹಾವಳಿಯನ್ನು ತಡೆಗಟ್ಟಲು ಸಾಧ್ಯವಿಲ್ಲ. ಇದಕ್ಕೆ ಹೋಮಿಯೋಪಥಿಕ್‌ ವೈದ್ಯಕೀಯ ಮಹಾ ವಿದ್ಯಾಲಯಗಳ ಸಂಘದ ಸಹಭಾಗಿತ್ವವೂ ಅಷ್ಟೇ ಮುಖ್ಯ ಎಂದು ಪಾಟೀಲ್ ಹೇಳಿದರು. ಹೋಮಿಯೋಪತಿ ವೈದ್ಯರು ನಮ್ಮ ಜೊತೆ ಕೈ ಜೋಡಿಸಿದರೆ ಇಂಥ ದಂಧೆಯನ್ನು ತಡೆಗಟ್ಟಬಹುದು. ಕೆಲವು ಸಂದರ್ಭಗಳಲ್ಲಿ ನಕಲಿ ವೈದ್ಯರುಗಳಿಂದ ಅಮಾಯಕರ ಪ್ರಾಣಕ್ಕೂ ಕುತ್ತು ಬಂದಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಹೋಮಿಯೋಪತಿ ಹಾಗು ಅಲೋಪತಿ ಬ್ರಿಜ್ ಕೋರ್ಸ್ (bridge course) ಮಾಡಲು ಸರ್ಕಾರ ಅವಕಾಶ ಮಾಡಿಕೊಡಬೇಕೆಂದು ಇದೇ ಸಂದರ್ಭದಲ್ಲಿ ಸಚಿವರಿಗೆ ಸಂಘದ ವತಿಯಿಂದ ಮನವಿ ಮಾಡಲಾಯಿತು.

ಇದಕ್ಕೆ ಸಚಿವರು ಈ ಸಮಸ್ಯೆ ಇತ್ಯರ್ಥವಾಗಬೇಕಾದರೆ ಹೋಮಿಯೋಪತಿ ವೈದ್ಯರ ಸಂಘದವರು ರಾಷ್ಟ್ರೀಯ ವೈದ್ಯಕೀಯ ಆಯೋಗ ಹಾಗು ಕೇಂದ್ರ ಸರ್ಕಾರ ಸರ್ಕಾರಕ್ಕೆ ಮನವಿ ಕೊಡಬೇಕು ಎಂದು ಸಲಹೆ ಮಾಡಿದರು. ಅಂತಿಮವಾಗಿ ಇದನ್ನು ಕೇಂದ್ರವೇ ನಿರ್ಧರಿಸಬೇಕಾಗಿರುವುದರಿಂದ ರಾಜ್ಯ ಸರ್ಕಾರದ ಪಾತ್ರ ಇದರಲ್ಲಿ ಏನೂ ಇಲ್ಲ ಎಂದು ಪಾಟೀಲ್ ಪುನರುಚ್ಚರಿಸಿದರು.

ರಾಜೀವ್‌ ಗಾಂಧಿ ಆರೋಗ್ಯ ವಿವಿಗೆ ಹೋಮಿಯೋಪತಿಯ ಪ್ರತಿನಿಧಿಯೊಬ್ಬರನ್ನು ಸಿಂಡಿಕೇಟ್ ಸದಸ್ಯನಾಗಿ ನೇಮಿಸಬೇಕೆಂದು ಸಂಘದ ಪ್ರತಿನಿಧಿಗಳು ಮನವಿ ಮಾಡಿದರು. ಇದಕ್ಕೂ ಸಕಾರಾತವಾಗಿ ಸ್ಪಂದಿಸಿದ ಶರಣಪ್ರಕಾಶ್‌ ಪಾಟೀಲ್‌ ಅವರು ಈ ಕುರಿತು ವಿಶ್ವವಿದ್ಯಾನಿಲಯದ ಕುಲಪತಿಗಳ ಜೊತೆ ಮಾತುಕತೆ ನಡೆಸುವ ಆಶ್ವಾಸನೆಯನ್ನು ನೀಡಿದರು.

ಕಾರ್ಯಕ್ರಮದಲ್ಲಿ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್‌, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌, ಹೋಮಿಯೋಪಥಿಕ್‌ ವೈದ್ಯಕೀಯ ಮಹಾ ವಿದ್ಯಾಲಯಗಳ ಆಡಳಿತ ಸಂಘದ ಪ್ರಮುಖರಾದ ವಿನೋದ್‌ ದೊಡ್ಡಣ್ಣನವರ್‌, ಕೆ.ಚಂದ್ರಶೇಖರ್‌ ಮತ್ತಿತರರು ಉಪಸ್ಥಿತರಿದ್ದರು.

‘ವಸತಿ ನಿರೀಕ್ಷೆ’ಯಲ್ಲಿದ್ದವರಿಗೆ ಗುಡ್ ನ್ಯೂಸ್: ಶೀಘ್ರವೇ ‘11,400 ಮನೆ’ ಹಂಚಿಕೆ- ಸಚಿವ ಜಮೀರ್ ಅಹ್ಮದ್

ನಟ ದರ್ಶನ್ ಪ್ರಕರಣದಲ್ಲಿ ಕಾನೂನು ವ್ಯಾಪ್ತಿಯಲ್ಲಿ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Share. Facebook Twitter LinkedIn WhatsApp Email

Related Posts

ದೇಶದ ಇತಿಹಾಸದಲ್ಲೇ ಇದೇ ಮೊದಲು: ಪ್ರತಿಯೊಬ್ಬ ರಾಜ್ಯ ಸರ್ಕಾರಿ ನೌಕರರಿಗೂ ಸಂಘದ ಕ್ಯಾಲೆಂಡರ್ ವಿತರಣೆ

09/11/2025 6:18 AM1 Min Read

ಗಮನಿಸಿ : ಪದವೀಧರ, ಶಿಕ್ಷಕರ ಕ್ಷೇತ್ರಗಳ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ದಿನಾಂಕ ವಿಸ್ತರಣೆ.!

09/11/2025 6:15 AM1 Min Read

ರಾಜ್ಯದ ಪಡಿತರ ಚೀಟಿದಾರರಿಗೆ ಶಾಕ್ : 6 ತಿಂಗಳಿಂದ ಸಿಗದ ಕಮಿಷನ್, ನವೆಂಬರ್ ನಲ್ಲಿ `ಪಡಿತರ ವಿತರಣೆ’ ಬಂದ್.!

09/11/2025 6:01 AM1 Min Read
Recent News

SHOCKING : ಸಲಿಂಗಕಾಮಕ್ಕೆ ಅಡ್ಡಿಯೆಂದು 5 ತಿಂಗಳ ಹೆತ್ತ ಮಗುವನ್ನೇ ಕೊಂದ ಪಾಪಿ ತಾಯಿ.!

09/11/2025 6:19 AM

ದೇಶದ ಇತಿಹಾಸದಲ್ಲೇ ಇದೇ ಮೊದಲು: ಪ್ರತಿಯೊಬ್ಬ ರಾಜ್ಯ ಸರ್ಕಾರಿ ನೌಕರರಿಗೂ ಸಂಘದ ಕ್ಯಾಲೆಂಡರ್ ವಿತರಣೆ

09/11/2025 6:18 AM

ಗಮನಿಸಿ : ಪದವೀಧರ, ಶಿಕ್ಷಕರ ಕ್ಷೇತ್ರಗಳ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ದಿನಾಂಕ ವಿಸ್ತರಣೆ.!

09/11/2025 6:15 AM

ಸಾಲದ ನಿರೀಕ್ಷೆಯಲ್ಲಿರುವವರಿಗೆ ಗುಡ್ ನ್ಯೂಸ್ : ಇನ್ಮುಂದೆ ಚಿನ್ನದಂತೆ ‘ಬೆಳ್ಳಿ ಸಾಲ’ ಪಡೆಯಬಹುದು, ‘RBI’ ಹೊಸ ಸುತ್ತೋಲೆ.!

09/11/2025 6:06 AM
State News
KARNATAKA

ದೇಶದ ಇತಿಹಾಸದಲ್ಲೇ ಇದೇ ಮೊದಲು: ಪ್ರತಿಯೊಬ್ಬ ರಾಜ್ಯ ಸರ್ಕಾರಿ ನೌಕರರಿಗೂ ಸಂಘದ ಕ್ಯಾಲೆಂಡರ್ ವಿತರಣೆ

By kannadanewsnow0909/11/2025 6:18 AM KARNATAKA 1 Min Read

ಬೆಂಗಳೂರು: ದೇಶದ ಇತಿಹಾಸದಲ್ಲೇ ಇದೇ ಮೊದಲು ಎನ್ನುವಂತೆ ಪ್ರತಿಯೊಬ್ಬ ರಾಜ್ಯ ಸರ್ಕಾರಿ ನೌಕರರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ…

ಗಮನಿಸಿ : ಪದವೀಧರ, ಶಿಕ್ಷಕರ ಕ್ಷೇತ್ರಗಳ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ದಿನಾಂಕ ವಿಸ್ತರಣೆ.!

09/11/2025 6:15 AM

ರಾಜ್ಯದ ಪಡಿತರ ಚೀಟಿದಾರರಿಗೆ ಶಾಕ್ : 6 ತಿಂಗಳಿಂದ ಸಿಗದ ಕಮಿಷನ್, ನವೆಂಬರ್ ನಲ್ಲಿ `ಪಡಿತರ ವಿತರಣೆ’ ಬಂದ್.!

09/11/2025 6:01 AM

ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ಆರೋಗ್ಯ ಸಂಜೀವಿನಿ’ ಮಾಹಿತಿಗಾಗಿ ಜಸ್ಟ್ ಈ ಸಂಖ್ಯೆಗೆ ಕರೆ ಮಾಡಿ

09/11/2025 5:53 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.