ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ಲೈಂಗಿಕ ದೌರ್ಜನ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಂತ್ರಸ್ತೆಯ ಸಹೋದರ ಹೈಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸಿದ್ದು ಯಡಿಯೂರಪ್ಪ ಅವರನ್ನು ಬಂಧಿಸುವಂತೆ ನಿರ್ದೇಶನ ಕೋರಿ ಹೈಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ.
ಹೌದು ಬಿಎಸ್ ಯಡಿಯೂರಪ್ಪ ಬಂಧಿಸುವಂತೆ ನಿರ್ದೇಶನ ಕೋರಿ ಸಂತ್ರಸಸ್ತೆಯ ಸಹೋದರ ಇದೀಗ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ. ಪೋಕ್ಸೋ ಕೇಸ್ ಸಂತ್ರಸ್ತೆಯ ಸಹೋದರನಿಂದ ಇದೀಗ ಹೈಕೋರ್ಟಿಗೆ ಅರ್ಜಿ ಸಲ್ಲಿಸಲಾಗಿದೆ. ಲೈಂಗಿಕ ದೌರ್ಜನ್ಯ ಘಟನೆ ನಡೆದು ಹಲವು ತಿಂಗಳು ಆದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಇದುವರೆಗೂ ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಬಂಧಿಸಿ ಪೊಲೀಸರು ವಿಚಾರಣೆಗೆ ಒಳಪಡಿಸಿಲ್ಲ.
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಮನೆಯ ಸಿಸಿಟಿವಿ ದೃಶ್ಯಾವಳಿ ಸೀಸ್ ಮಾಡಿಲ್ಲ ಕನಿಷ್ಠ 41 ಅಡಿ ನೋಟಿಸ್ ನೀಡಿ ಬಿ ಎಸ್ ವೈ ಅವರನ್ನು ವಿಚಾರಣೆಗೆ ಕರೆಸಬಹುದಾಗಿತ್ತು. ಈ ಮಧ್ಯೆ ದೂರು ನೀಡಿದ ನಂತರ ತಾಯಿ ಕೂಡ ಮೃತಪಟ್ಟಿದ್ದಾರೆ. ಲೈಂಗಿಕ ದೌರ್ಜನ ನಡೆದು ಹಲವು ತಿಂಗಳು ಆದರೂ ನಮಗೆ ನ್ಯಾಯ ಸಿಕ್ಕಿಲ್ಲ ಹೀಗಾಗಿ ಬಿಎಸ್ ಯಡಿಯೂರಪ್ಪ ಅವರನ್ನು ಬಂಧಿಸುವಂತೆ ನಿರ್ದೇಶನ ಕೋರಿ ಸಹೋದರ ಮನವಿ ಮಾಡಿದ್ದಾರೆ.
ಪೋಕ್ಸೋ ಪ್ರಕರಣ ಸಂಬಂಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪಗೆ ಸಿಐಡಿ ಅಧಿಕಾರಿಗಳು ನೋಟಿಸ್ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಆದರೆ ಯಡಿಯೂರಪ್ಪ ದೆಹಲಿ ಇರುವ ಕಾರಣ ವಿಚಾರಣೆಗೆ ಹಾಜರಾಗಿಲ್ಲ. ಯಡಿಯೂರಪ್ಪನವರ ಬಳಿ ಸಹಾಯ ಕೋರಿ ಹೋಗಿದ್ದಾಗ ತಮ್ಮ ಪುತ್ರಿಯ ಜೊತೆಗೆ ಯಡಿಯೂರಪ್ಪನವರು ಅಸಭ್ಯವಾಗಿ ವರ್ತಿಸಿದ್ದರೆಂದು ಮಹಿಳೆಯೊಬ್ಬರು ಮಾರ್ಚ್ 14ರಂದು ದೂರು ದಾಖಲಿಸಿದ್ದರು. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪನವರ ನಿವಾಸದಲ್ಲಿ ಈ ಘಟನೆ ನಡೆದಿದ್ದಾಗಿ ಮಹಿಳೆ ದೂರಿನಲ್ಲಿ ತಿಳಿಸಿದ್ದಳು.
ಯಡಿಯೂರಪ್ಪನವರ ವಿರುದ್ಧ ಈ ಮಹಿಳೆ ಮಾರ್ಚ್ 14ರಂದು ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿದ್ದಳು. ಅದರ ಮರುದಿನ, ಈ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ, ಸಿಐಡಿಗೆ ವರ್ಗಾಯಿಸಿತ್ತು. ಸಿಐಡಿ ತಂಡದ ವತಿಯಿಂದ ತನಿಖೆಗೊಳಪಟ್ಟಿರುವ ಈ ಪ್ರಕರಣದಲ್ಲಿ ಅಧಿಕಾರಿಗಳು ಸಂತ್ರಸ್ತೆ ಹೇಳಿಕೆಗಳನ್ನು ಈಗಾಗಲೇ ದಾಖಲಿಸಿಕೊಂಡಿದ್ದಾರೆ.