ಮಂಡ್ಯ: ಜಿಲ್ಲೆಯಲ್ಲಿ ಇಂದು ಈಜಲು ಕಾವೇರಿ ನದಿಗೆ ಇಳಿದಿದ್ದಂತ ಇಬ್ಬರು ಯುವಕರು ನೀರುಪಾಲಾಗಿರುವಂತ ಘಟನೆ, ಶ್ರೀರಂಗಪಟ್ಟಣದ ಗಂಜಾಮ್ ಸಮೀಪದ ನಿಮಿಷಾಂಭ ದೇಗುಲದ ಬಳಿ ನಡೆದಿದೆ.
ಮಂಡ್ಯ ಜಿಲ್ಲೆಯ ಶ್ರೀರಂಗ ಪಟ್ಟಣದ ನಿಮಿಷಾಂಭ ದೇಗುಲದ ಬಳಿಯಲ್ಲಿ ಕಾವೇರಿ ನದಿಯಲ್ಲಿ ಈಜಲು ತೆರಳಿದ್ದಂತ ಇಬ್ಬರು ಯುವಕರು ನೀರು ಪಾಲಾಗಿರೋದಾಗಿ ತಿಳಿದು ಬಂದಿದೆ.
ಕಾವೇರಿ ನದಿಯಲ್ಲಿ ಈಜಲು ಹೋಗಿ ನೀರುಪಾಲಾದವರನ್ನು ವಿಶಾಲ್(19), ರೋಹಣ್(17) ಎಂಬುದಾಗಿ ಗುರುತಿಸಲಾಗಿದೆ. ಈ ಇಬ್ಬರು ಬೆಂಗಳೂರು ಮತ್ತು ತಮಿಳಉನಾಡು ಮೂಲದ ಯುವಕರಾಗಿದ್ದರು.
ಮೈಸೂರಿನ ಅರ್ಜಿ ಮನೆಗೆ ಬಂದು ಕುಟುಂಬದ ಜೊತೆಗೆ ದೇಗುಲಕ್ಕೆ ಹೋಗಿದ್ದಾಗ, ನಿಮಿಷಾಂಭ ದೇಗುಲದ ಬಳಿಯಲ್ಲಿ ಕಾವೇರಿ ನದಿಯಲ್ಲಿ ಈಜಲು ತೆರಳಿದ್ದರು. ಈ ವೇಳೆ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಈ ಸಂಬಂಧ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ: ಗಿರೀಶ್ ರಾಜ್, ಮಂಡ್ಯ
BIG BREAKING: ‘ನಟ ದುನಿಯಾ ವಿಜಯ್’ ಸಲ್ಲಿಸಿದ್ದ ವಿಚ್ಛೇದನ ಅರ್ಜಿ ವಜಾ: ಕೌಟುಂಬಿಕ ನ್ಯಾಯಾಲಯ ಆದೇಶ