ಬೆಂಗಳೂರು: ಮಂಗಳವಾರ ಜವಾಬ್ದಾರಿ ಸ್ವೀಕರಿಸಿದ್ದು, ಹಲವಾರು ಸಭೆಗಳನ್ನು ಮಾಡುತ್ತಿದ್ದೇನೆ. ನರೇಂದ್ರ ಮೋದಿಜೀ ಅವರು ದೇಶದ ಅಭಿವೃದ್ಧಿಗಾಗಿ ಕರ್ನಾಟಕಕ್ಕೆ 5 ಸ್ಥಾನಗಳನ್ನು ಕೊಟ್ಟಿದ್ದಾರೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಅವರು ತಿಳಿಸಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ರಾಷ್ಟ್ರದ ಅಭಿವೃದ್ಧಿಯ ಹರಿಕಾರರು, ವಿಶ್ವದ ಭೂಪಟದಲ್ಲಿ ಭಾರತವನ್ನು ಮುಂದುವರಿದ ರಾಷ್ಟ್ರವನ್ನಾಗಿ ಮಾಡುವ ಸಂಕಲ್ಪ ತೊಟ್ಟಿರುವ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರು ನನಗೆ ಎರಡು ಜವಾಬ್ದಾರಿ ನೀಡಿದ್ದಾರೆ. ನಾನು ಅದನ್ನು ಸಮನಾಗಿ ಸ್ವೀಕಾರ ಮಾಡುವೆ ಎಂದು ತಿಳಿಸಿದರು.
ಕರ್ನಾಟಕದ ಜನತೆಯ ಪರವಾಗಿ ಪ್ರಧಾನಿಯವರಿಗೆ ಧನ್ಯವಾದಗಳನ್ನು ತಿಳಿಸಿದರು. ಬೆಂಗಳೂರು, ರಾಜ್ಯದ ಅಭಿವೃದ್ಧಿ ಸಂಬಂಧ ಸಮಗ್ರ ಮಾಹಿತಿ ಪಡೆದು ಮತ್ತೆ ಮಾಧ್ಯಮ ಪ್ರತಿನಿಧಿಗಳನ್ನು ಭೇಟಿ ಮಾಡುವುದಾಗಿ ಹೇಳಿದರು. ಕೇಂದ್ರ ಸಚಿವರಾದ ಬಳಿಕ ಜಗನ್ನಾಥ ಭವನಕ್ಕೆ ಭೇಟಿ ಕೊಟ್ಟ ಅವರಿಗೆ ಆತ್ಮೀಯ ಸ್ವಾಗತ ಕೋರಲಾಯಿತು.
ಎತ್ತಿನಹೊಳೆ ಕಾಮಗಾರಿಗೆ 500 ಎಕರೆ ನೀಡಲು ಅರಣ್ಯ ಇಲಾಖೆ ಒಪ್ಪಿಗೆ: ಡಿಸಿಎಂ ಡಿ.ಕೆ ಶಿವಕುಮಾರ್