Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೇಕೆದಾಟು ಅಣೆಕಟ್ಟು ಯೋಜನೆ ವಿರೋಧಿಸಿ ಪ್ರಧಾನಿ ಮೋದಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್

​’ಭಾರತದ ಆಂತರಿಕ ವಿಚಾರದಲ್ಲಿ ಹಸ್ತಕ್ಷೇಪ ಬೇಡ’: ಚೀನಾ-ಪಾಕಿಸ್ತಾನದ ಜಂಟಿ ಹೇಳಿಕೆಗೆ ಭಾರತದ ತೀಕ್ಷ್ಣ ತಿರುಗೇಟು

ಏರ್ ಇಂಡಿಯಾ AI 171 ಅಪಘಾತ ತನಿಖೆ: ಮಧ್ಯಂತರ ವರದಿಯಿಲ್ಲ, ಜೂನ್ 12ರ ನಂತರವೇ ಅಂತಿಮ ತೀರ್ಪು!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಹೀಗಿದೆ ಸಿಎಂ ಸಿದ್ಧರಾಮಯ್ಯ ನಡೆಸಿದ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಹೈಲೈಟ್ಸ್
KARNATAKA

ಹೀಗಿದೆ ಸಿಎಂ ಸಿದ್ಧರಾಮಯ್ಯ ನಡೆಸಿದ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಹೈಲೈಟ್ಸ್

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಲಾಯಿತು. ಆ ಸಭೆಯ ಮುಖ್ಯಾಂಶಗಳ ಬಗ್ಗೆ ಮುಂದೆ ಓದಿ.

• ಇಲಾಖೆಯ ಒಟ್ಟಾರೆ ಆಯವ್ಯಯದಲ್ಲಿ ಬಿಡುಗಡೆಯಾದ ಮೊತ್ತ 1884.01 ಕೋಟಿ ರೂ. ನಲ್ಲಿ 1879.35 ಕೋಟಿ ವೆಚ್ಚವಾಗಿದ್ದು, 99.75 % ಸಾಧನೆಯಾಗಿದೆ.

• ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಡಿ 389 ವಿದ್ಯಾರ್ಥಿ ನಿಲಯಗಳು, ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗಳು – 39,541 ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶ ಒದಗಿಸಿದ್ದು, 194.71 ಕೋಟಿ ರೂ. ಒದಗಿಸಲಾಗಿದೆ. ಎಸ್‌.ಎಸ್‌.ಎಲ್‌.ಸಿ. ಯಲ್ಲಿ ಶೇ. 77 ರಷ್ಟು ಫಲಿತಾಂಶ ಬಂದಿದ್ದು, ಫಲಿತಾಂಶ ಉತ್ತಮ ಪಡಿಸಲು ಸೂಚನೆ ನೀಡಿದರು.
• 2,90,546 ವಿದ್ಯಾರ್ಥಿಗಳಿಗೆ 50.47 ಕೋಟಿ ರೂ. ಮೆಟ್ರಿಕ್‌ ಪೂರ್ವ ವಿದ್ಯಾರ್ಥಿ ವೇತನ ಪಾವತಿ ಮಾಡಲಾಗಿದೆ. 2,48,887 ವಿದ್ಯಾರ್ಥಿಗಳಿಗೆ 302.64 ಕೋಟಿ ರೂ. ಮೆಟ್ರಿಕ್‌ ನಂತರದ ವಿದ್ಯಾರ್ಥಿ ವೇತನ ಪಾವತಿ ಮಾಡಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
• ಹಾಸ್ಟೆಲ್‌ಗಳಿಗೆ ಸಂಜೆ ವೇಳೆಗೆ ಭೇಟಿ ನೀಡಿ, ಶುಚಿ ಕಿಟ್‌ಗಳು, ಆಹಾರ ಪದಾರ್ಥ ವಿತರಣೆ ಸಮರ್ಪಕವಾಗಿ ಆಗುತ್ತಿದೆಯೇ ಎಂದು ಪರಿಶೀಲಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
• ಕೆಲವು ಆದಿವಾಸಿ ಬುಡಕಟ್ಟು ವಸತಿ ಶಾಲೆಗಳಲ್ಲಿ ರಾತ್ರಿ ವೇಳೆ ಮಕ್ಕಳು ಇರುವುದಿಲ್ಲ. ಮಕ್ಕಳು ರಾತ್ರಿ ಊಟವಾದ ನಂತರ ಮನೆಗೆ ಕರೆದುಕೊಂಡು ಹೋಗುತ್ತಾರೆ. ಚಿಕ್ಕ ಮಕ್ಕಳು ಎಂದು ಮನೆಗೆ ಕರೆದುಕೊಂಡು ಹೋಗುತ್ತಾರೆ. ಎಲ್ಲ ಸೌಲಭ್ಯ ಇದ್ದೂ, ಯಾಕೆ ಮನೆಗೆ ಕರೆದುಕೊಂಡು ಹೋಗುತ್ತಾರೆ. ಈ ಕುರಿತು ಪರಾಮರ್ಶೆ ನಡೆಸಲು ಸೂಚಿಸಿದರು. ಆದಿವಾಸಿ ಬುಡಕಟ್ಟು ವಸತಿ ಶಾಲೆಗಳ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಸೂಚಿಸಿದರು. ಇದಕ್ಕಾಗಿ ಶಿಕ್ಷಕರ ನೇಮಕಕ್ಕೆ ಕ್ರಮ ವಹಿಸಲು ಆರ್ಥಿಕ ಇಲಾಖೆಗೆ ಸೂಚಿಸಿದರು. ಈ ಆದಿವಾಸಿ ಬುಡಕಟ್ಟು ವಸತಿ ಶಾಲೆಯ ಮಕ್ಕಳು ಇತರ ವಿದ್ಯಾರ್ಥಿಗಳೊಂದಿಗೆ ಸಮರ್ಥವಾಗಿ ಸ್ಪರ್ಧಿಸುವಂತಾಗಬೇಕು ಎಂದು ಸೂಚಿಸಿದರು. ಸ್ಮಾರ್ಟ್‌ ಕ್ಲಾಸ್‌ಗಳ ವ್ಯವಸ್ಥೆ ಸದ್ಬಳಕೆ ಮಾಡುವಂತೆ ಸೂಚಿಸಿದರು.
• ಅನುದಾನ ಲಭ್ಯವಿದೆ ಎಂಬ ಕಾರಣಕ್ಕೆ ಬೇಡಿಕೆ ಇಲ್ಲದೆ ಇದ್ದರೂ, ಹಾಸಿಗೆ, ಬೆಡ್‌ಶೀಟ್‌ ಮತ್ತಿತರ ವಸ್ತುಗಳನ್ನು ಅನಗತ್ಯವಾಗಿ ಖರೀದಿಸುವುದನ್ನು ಸಹಿಸಲಾಗದು. ಅನಗತ್ಯವಾಗಿ 4 ಜಿ ವಿನಾಯಿತಿ ಪಡೆಯುವ ಬದಲು ನೇರವಾಗಿ ಟೆಂಡರ್‌ ಕರೆದು ಖರೀದಿ, ಸೇವೆಗಳನ್ನು ಪಡೆಯಬೇಕೆಂದು ಎಂದು ಮುಖ್ಯಮಂತ್ರಿಗಳು ಸೂಚನೆ ನೀಡಿದರು.
• ನೀವು ಬಡವರು, ದಲಿತರ ಮಕ್ಕಳನ್ನು ಸರಿಯಾಗಿ ನೋಡಿಕೊಳ್ಳಲು ಆಗದಿದ್ದರೆ ನೀವು ಸೇವೆಯಲ್ಲಿರಲು unfit ಎಂದು ಎಚ್ಚರಿಕೆ ನೀಡಿದರು.
• ವಸತಿ ಶಾಲೆಗಳು ಬಡ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಬೇಕು. ಕೇವಲ ಬುದ್ಧಿವಂತರನ್ನು ಇನ್ನಷ್ಟು ಬುದ್ಧಿವಂತರಾಗಿಸುವುದು ಮಾತ್ರವಲ್ಲ; ಕಲಿಕೆಯಲ್ಲಿ ಹಿಂದುಳಿದವರನ್ನೂ ಬುದ್ಧಿವಂತರಾಗಿಸಬೇಕು ಎಂದು ತಿಳಿಸಿದರು.
• 1994-95 ರಲ್ಲಿ ಹಣಕಾಸು ಸಚಿವನಾಗಿದ್ದಾಗ, ದಲಿತ ಸಂಘರ್ಷ ಸಮಿತಿಯವರು ಸಾರಾಯಿ ಬೇಡ; ವಸತಿ ಶಾಲೆಗಳು ಬೇಕು ಎಂಬ ಬೇಡಿಕೆಯಿಟ್ಟಿದ್ದರು. ಅವಕಾಶ ವಂಚಿತರಿಗೆ ಶಿಕ್ಷಣ ನೀಡುವ ಉದ್ದೇಶದಿಂದ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಸ್ಥಾಪಿಸಲಾಗಿದೆ ಎಂದು ಸ್ಮರಿಸಿದರು.
• ಪರಿಶಿಷ್ಟ ಪಂಗಡದ ವಸತಿ ಶಾಲೆಗಳಲ್ಲಿ 108 ಸ್ವಂತ ಕಟ್ಟಡ ಹೊಂದಿದ್ದು, 30 ಬಾಡಿಗೆ ಕಟ್ಟಡಗಳಲ್ಲಿ ಹಾಗೂ 6 ಬಾಡಿಗೆ ರಹಿತ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿವೆ. ಸ್ವಂತ ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳೊಂದಿಗೆ ಖುದ್ದಾಗಿ ಅನುಸರಣೆ ಮಾಡುವಂತೆ ಸೂಚಿಸಿದರು.
• ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ಹಣಕಾಸು ಇಲಾಖೆಯ ಸೂಚನೆಯಂತೆ 2023-24 ರಲ್ಲಿ ಲಭ್ಯವಿದ್ದ 263 ಕೋಟಿ ರೂ. ಖಜಾನೆಗೆ ಜಮಾ ಮಾಡಲಾಗಿದೆ. ಯಾವುದೇ ಯೋಜನೆಯಡಿ ಫಲಾನುಭವಿಗಳ ಆಯ್ಕೆಯಾಗಿಲ್ಲ. ಪ್ರತಿ ವರ್ಷ ಮಾಡಬೇಕಲ್ಲ. ಯಾಕೆ ಮಾಡಿಲ್ಲ ಎಂದು ಪ್ರಶ್ನಿಸಿದಾಗ, ಶಾಸಕರು ಫಲಾನುಭವಿಗಳ ಪಟ್ಟಿ ನೀಡಿಲ್ಲ. ಆಯ್ಕೆ ಮಾಡಬೇಕಾದ ಫಲಾನುಭವಿಗಳ ಸಂಖ್ಯೆ ಅತ್ಯಂತ ಕಡಿಮೆ ಇರುವುದರಿಂದ ಸಂದಿಗ್ಧ ಪರಿಸ್ಥಿತಿ ಎದುರಾಗುವ ಹಿನ್ನೆಲೆಯಲ್ಲಿ ಶಾಸಕರು ಆಯ್ಕೆ ಮಾಡಲು ಆಸಕ್ತಿ ತೋರಿಸುತ್ತಿಲ್ಲ ಎಂದು ತಿಳಿಸಿದರು. ಫಲಾನುಭವಿಗಳ ಸಂಖ್ಯೆ ಹೆಚ್ಚಿಸುವ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.
• 22 ಪ್ರಕರಣಗಳಲ್ಲಿ ಸಿಂಧುತ್ವ ಪ್ರಮಾಣ ಪತ್ರ ಹಲವು ವರ್ಷಗಳಿಂದ ಇತ್ಯರ್ಥಕ್ಕೆ ಬಾಕಿ ಇದ್ದು, ಇವುಗಳಲ್ಲಿ ಎಲ್ಲ ಪ್ರಕರಣಗಳನ್ನು ಸಿ.ಆರ್.ಇ. ಸೆಲ್‌ಗೆ ಕಳುಹಿಸದಂತೆ, ಗೊಂದಲವಿದ್ದಲ್ಲಿ ಮಾತ್ರ ಕಳುಹಿಸುವಂತೆ ಸುತ್ತೋಲೆ ಹೊರಡಿಸಲು ಸೂಚಿಸಿದರು.
• ಮೈಸೂರಿನ ಬುಡಕಟ್ಟು ಸಂಶೋಧನಾ ಸಂಸ್ಥೆಗೆ ಹಿರಿಯ ಕೆ.ಎ.ಎಸ್. ಅಧಿಕಾರಿಯನ್ನು ನಿರ್ದೇಶಕರಾಗಿ ನೇಮಕ ಮಾಡುವುದು ಸೂಕ್ತ ಎಂದು ಅಪರ ಮುಖ್ಯ ಕಾರ್ಯದರ್ಶಿಗಳು ಅಭಿಪ್ರಾಯಪಟ್ಟರು. ಹಿರಿಯ ಕೆ.ಎ.ಎಸ್. ಅಧಿಕಾರಿಯನ್ನು ನಿರ್ದೇಶಕರನ್ನಾಗಿ ನೇಮಕ ಮಾಡಿ, ಮಾನವಶಾಸ್ತ್ರಜ್ಞರನ್ನು ಅವರ ಅಧೀನದಲ್ಲಿ ನೇಮಕಗೊಳಿಸುವ ಬಗ್ಗೆ ಪರಿಶೀಲನೆ ನಡೆಸಿ, ಪ್ರಸ್ತಾವನೆ ಸಲ್ಲಿಸಲು ಸೂಚಿಸಿದರು. ಕೇರಳ ಮಾದರಿಯಲ್ಲಿ ಆಡಳಿತ ಮತ್ತು ಸಂಶೋಧನಾ ವಿಭಾಗಗಳನ್ನು ಪ್ರತ್ಯೇಕವಾಗಿ ರಚಿಸುವ ಬಗ್ಗೆ ಅಥವಾ ಒಡಿಶಾ ರಾಜ್ಯದ ಮಾದರಿ ಏನು ಎಂದು ಮಾಹಿತಿ ತರಿಸಿ, ಪರಿಶೀಲಿಸುವಂತೆ ಸೂಚಿಸಿದರು.
• ಆಶ್ರಮ ಶಾಲೆಗಳಲ್ಲಿ ಆಯಾ ಸಮುದಾಯದವರನ್ನೇ ಕೇರ್‌ ಟೇಕರ್‌ ಆಗಿ ನೇಮಕ ಮಾಡಿದರೆ, ಈ ಶಾಲೆಗಳು ಸಮುದಾಯಗಳಿಗೆ ಹತ್ತಿರವಾಗುವ ಸಾಧ್ಯತೆ ಇದೆ ಎಂದು ಬುಡಕಟ್ಟು ಸಂಶೋಧನಾ ಸಂಸ್ಥೆಯ ಸಂಶೋಧನಾ ಅಧಿಕಾರಿ, ಸ್ವತಃ ಇರುಳಿಗ ಬುಡಕಟ್ಟು ಸಮುದಾಯದವರಾದ ಡಾ. ಕೆ.ವಿ. ಕೃಷ್ಣಮೂರ್ತಿ ಅವರು ವಿವರಿಸಿದರು.
• ಬುಡಕಟ್ಟು ಸಮುದಾಯಗಳಿಗೆ ಸರ್ಕಾರದ ಸೌಲಭ್ಯಗಳು ಸಮರ್ಪಕವಾಗಿ ತಲುಪಿಸುವಂತೆ ಸೂಚಿಸಿದರು.

ಈ ಸಭೆಯಲ್ಲಿ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹಮದ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎನ್. ಮಂಜುನಾಥ್‌ ಪ್ರಸಾದ್‌ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

‘ನಟ ದರ್ಶನ್ ಅರೆಸ್ಟ್’ ಬಗ್ಗೆ ಮೌನ ಮುರಿದ ‘ನಟಿ ರಚಿತಾ ರಾಮ್’ ಹೇಳಿದ್ದೇನು ಗೊತ್ತಾ? | Actress Rachita Ram

ಮೋದಿ ಪ್ರಧಾನಿಯಾದ ಬೆನ್ನಲ್ಲೇ ಷೇರು ಮಾರುಕಟ್ಟೆ ಸಂಚಲನ : 5 ಟ್ರಿಲಿಯನ್ ಡಾಲರ್ ದಾಟಿದ ಮಾರುಕಟ್ಟೆ ಕ್ಯಾಪ್ | PM Modi

Share. Facebook Twitter LinkedIn WhatsApp Email

Related Posts

ಕಾರ್ಮಿಕರ ಕನಿಷ್ಠ ವೇತನ ಶೇ.60 ರಷ್ಟು ಹೆಚ್ಚಳ: ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

1 Min Read

ಸರ್ಕಾರಿ, ಗೋಮಾಳ ಒತ್ತುವರಿ ತೆರವುಗೊಳಿಸದಿದ್ದರೆ ಅಧಿಕಾರಿಗಳ ತಲೆದಂಡ: ಮದ್ದೂರು ಶಾಸಕ ಕೆ.ಎಂ.ಉದಯ್ ಎಚ್ಚರಿಕೆ

2 Mins Read

ಶಿಂಷಾ ನದಿಗೆ ಅಡ್ಡಲಾಗಿ 4.50 ಕೋಟಿ ರೂ ವೆಚ್ಚದಲ್ಲಿ ಚೆಕ್ ಡ್ಯಾಂ ನಿರ್ಮಾಣ: ಮದ್ದೂರು ಶಾಸಕ ಕೆ.ಎಂ.ಉದಯ್ ಚಾಲನೆ

2 Mins Read
Recent News

ಮೇಕೆದಾಟು ಅಣೆಕಟ್ಟು ಯೋಜನೆ ವಿರೋಧಿಸಿ ಪ್ರಧಾನಿ ಮೋದಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್

​’ಭಾರತದ ಆಂತರಿಕ ವಿಚಾರದಲ್ಲಿ ಹಸ್ತಕ್ಷೇಪ ಬೇಡ’: ಚೀನಾ-ಪಾಕಿಸ್ತಾನದ ಜಂಟಿ ಹೇಳಿಕೆಗೆ ಭಾರತದ ತೀಕ್ಷ್ಣ ತಿರುಗೇಟು

ಏರ್ ಇಂಡಿಯಾ AI 171 ಅಪಘಾತ ತನಿಖೆ: ಮಧ್ಯಂತರ ವರದಿಯಿಲ್ಲ, ಜೂನ್ 12ರ ನಂತರವೇ ಅಂತಿಮ ತೀರ್ಪು!

​ಧೂಮಪಾನದಷ್ಟೇ ಅಪಾಯಕಾರಿ ಮಕ್ಕಳ ಮೇಲೆ ಸಾಮಾಜಿಕ ಜಾಲತಾಣಗಳ ಪ್ರಭಾವ: ಬ್ರಿಟಿಷ್ ವೈದ್ಯರ ಎಚ್ಚರಿಕೆ

State News
KARNATAKA

ಕಾರ್ಮಿಕರ ಕನಿಷ್ಠ ವೇತನ ಶೇ.60 ರಷ್ಟು ಹೆಚ್ಚಳ: ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: ರಾಷ್ಟ್ರ ನಿರ್ಮಾಣದಲ್ಲಿ ಹಗಲಿರುಳು ಶ್ರಮಿಸುತ್ತಿರುವ ಕಾರ್ಮಿಕ ವರ್ಗದ ಕಲ್ಯಾಣಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಘೋಷಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾರ್ಮಿಕರ…

ಸರ್ಕಾರಿ, ಗೋಮಾಳ ಒತ್ತುವರಿ ತೆರವುಗೊಳಿಸದಿದ್ದರೆ ಅಧಿಕಾರಿಗಳ ತಲೆದಂಡ: ಮದ್ದೂರು ಶಾಸಕ ಕೆ.ಎಂ.ಉದಯ್ ಎಚ್ಚರಿಕೆ

ಶಿಂಷಾ ನದಿಗೆ ಅಡ್ಡಲಾಗಿ 4.50 ಕೋಟಿ ರೂ ವೆಚ್ಚದಲ್ಲಿ ಚೆಕ್ ಡ್ಯಾಂ ನಿರ್ಮಾಣ: ಮದ್ದೂರು ಶಾಸಕ ಕೆ.ಎಂ.ಉದಯ್ ಚಾಲನೆ

ಹೆಂಡತಿ ಮುಂದೆ ‘ಶ್ರೀಮಂತಿಕೆ’ ಬಿಲ್ಡಪ್ ಕೊಡಲು ಸರಗಳ್ಳನಾದ ಪತಿರಾಯ: ಮಂಡ್ಯದಲ್ಲಿ ₹70 ಲಕ್ಷದ ಚಿನ್ನದೊಂದಿಗೆ ನಾಲ್ವರು ಅಂದರ್!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.