ಬೆಂಗಳೂರು: ನಟ ದರ್ಶನ್ ವಿರುದ್ದ ಮಾತನಾಡುವವರಿಗೆ ದರ್ಶನ್ ಅಭಿಮಾನಿಗಳಿಂದ ಧಮ್ಕಿ ಶುರುವಾಗುತ್ತಿದ್ದು ಈ ನಡುವೆ ಅಂತಹವರಿಗೆ ಪೊಲೀಸ್ ಇಲಾಖೆ ಬಿಗ್ ಶಾಕ್ ನೀಡಲು ಮುಂದಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ದರ್ಶನ್ ವಿರುದ್ದ ಮಾತನಾಡುತ್ತಿರುವರಿಗೆ ದರ್ಶನ್ ಅಭಿಮಾನಿಗಳು ಬೆದರಿಕೆ ಹಾಕುತ್ತಿದ್ದಾರೆ ಎನ್ನಲಾಗುತ್ತಿದ್ದು, ಇದರಿಂದ ಹಲವು ಮಂದಿ ಆತಂಕವನ್ನು ಹೊರ ಹಾಕುತ್ತಿದ್ದಾರೆ. ಇವೆಲ್ಲದರ ನಡುವೆ ಪೊಲೀಸ್ ಇಲಾಖೆ ಕೂಡ ಸಾಮಾಜಿಕ ಜಾಲತಾಣದ ಮೇಲೆ ಕಣ್ಣು ಇಟ್ಟಿದ್ದು,. ಅಂತಹವರ ಹೆಡೆಮುರಿ ಕಟ್ಟುವುದಕ್ಕೆ ಮುಂದಾಗಿದೆ ಎನ್ನಲಾಗಿದೆ. ಅಭಿವ್ಯಕ್ತಿ ಸ್ವಾತಂತ್ಯ್ರದ ಹೆಸರಿನಲ್ಲಿ ಇನ್ನೊಬ್ಬರ ಹಕ್ಕನ್ನು ಕಸಿದುಕೊಳ್ಳಬಾರದು, ಅಲ್ಲದೇ ಧಮ್ಕಿ. ಹೆದರಿಕೆ ಹಾಕುವುದು ಕಾನೂನು ಪ್ರಕಾರ ತಪ್ಪು ಅಂತ ಪೊಲೀಸ್ ಇಲಾಖೆ ಕಠಿಣ ಕ್ರಮಕ್ಕೆ ಮುಂದಾಗಿದೆ ಎನ್ನಲಾಗಿದೆ.