ಬೆಂಗಳೂರು : ಹಿರಿಯ ರಂಗಕರ್ಮಿ ಮತ್ತು ವಾಕ್ಶ್ರವಣ ಶಿಕ್ಷಣ ತಜ್ಞ ಡಾ.ನ.ರತ್ನ ಅವರು ನಿಧನರಾಗಿದ್ದು, ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಂಯ್ಯ, ಹಿರಿಯ ರಂಗಕರ್ಮಿ ಮತ್ತು ವಾಕ್ಶ್ರವಣ ಶಿಕ್ಷಣ ತಜ್ಞ ಡಾ.ನ.ರತ್ನ ಅವರ ಅಗಲಿಕೆ ಎಂದೆಂದೂ ತುಂಬಲಾರದ ನಷ್ಟ. ಅಧ್ಯಾಪನ ಮತ್ತು ರಂಗಚಟುವಟಿಗಳ ಜೊತೆಗೆ ಮೈಸೂರಿನ ಪ್ರಖ್ಯಾತ ವಾಕ್ ಶ್ರವಣ ಚಿಕಿತ್ಸಾ ಸಂಸ್ಥೆಯನ್ನು ಕಟ್ಟಿ ಬೆಳೆಸಿದ ಡಾ.ನ.ರತ್ನ ಅವರು ದೈಹಿಕ ನ್ಯೂನತೆ ಹೊಂದಿರುವ ಸಾವಿರಾರು ಜನರ ಪಾಲಿನ ಜೀವದಾತರಾಗಿದ್ದರು ಎಂದು ಹೇಳಿದ್ದಾರೆ.
ಈ ಪುಣ್ಯಪುರುಷನ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಹಾರೈಸುತ್ತೇನೆ. ಅವರ ಕುಟುಂಬದ ಸದಸ್ಯರು ಮತ್ತು ಅಭಿಮಾನಿಗಳ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ಸಂತಾಪ ಸೂಚಿಸಿದ್ದಾರೆ.
ಹಿರಿಯ ರಂಗಕರ್ಮಿ ಮತ್ತು ವಾಕ್ಶ್ರವಣ ಶಿಕ್ಷಣ ತಜ್ಞ ಡಾ.ನ.ರತ್ನ ಅವರ ಅಗಲಿಕೆ ಎಂದೆಂದೂ ತುಂಬಲಾರದ ನಷ್ಟ.
ಅಧ್ಯಾಪನ ಮತ್ತು ರಂಗಚಟುವಟಿಗಳ ಜೊತೆಗೆ ಮೈಸೂರಿನ ಪ್ರಖ್ಯಾತ ವಾಕ್ ಶ್ರವಣ ಚಿಕಿತ್ಸಾ ಸಂಸ್ಥೆಯನ್ನು ಕಟ್ಟಿ ಬೆಳೆಸಿದ ಡಾ.ನ.ರತ್ನ ಅವರು ದೈಹಿಕ ನ್ಯೂನತೆ ಹೊಂದಿರುವ ಸಾವಿರಾರು ಜನರ ಪಾಲಿನ ಜೀವದಾತರಾಗಿದ್ದರು.
ಈ ಪುಣ್ಯಪುರುಷನ… pic.twitter.com/2niYMQtOA1
— CM of Karnataka (@CMofKarnataka) June 19, 2024