ಬೆಂಗಳೂರು : ಹೃದಯಾಘಾತದಿಂದ ಇಂದು ನಿಧನರಾದ ಕನ್ನಡದ ಖ್ಯಾತ ಸಾಹಿತಿ ಕಮಲಾ ಹಂಪನಾ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಟ್ವಿಟರ್ ನಲ್ಲಿ ಸಂತಾಪ ಸೂಚಿಸಿರುವ ಸಿಎಂ ಸಿದ್ದರಾಮಯ್ಯ, ಹಿರಿಯ ಸಾಹಿತಿ ಡಾ.ಕಮಲ ಹಂಪನಾ ಅವರ ಅನಿರೀಕ್ಷಿತ ಸಾವಿನಿಂದ ದು:ಖಿತನಾಗಿದ್ದೇನೆ. ಸಾಹಿತ್ಯ ಕೃಷಿಯ ಜೊತೆ ಸಂಶೋಧನೆ ಮತ್ತು ಬೋಧನೆಗಳಿಂದಲೂ ಜನಪ್ರಿಯರಾಗಿದ್ದ ಡಾ.ಕಮಲಾ ಅವರದ್ದು ಸರ್ವರಿಗೂ ಒಳಿತನ್ನು ಬಯಸಿದ ಜೀವ. ಡಾ.ಹಂಪ ನಾಗರಾಜಯ್ಯ ಮತ್ತವರ ಕುಟುಂಬದ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಮೃತರ ಆತ್ಮಕ್ಕೆ ಶಾಂತಿ ಕೋರುವೆ ಎಂದಿದ್ದಾರೆ.