ಬೆಂಗಳೂರು: ಕೊರೋನಾ ( Corona ) ಸಂದರ್ಭದಲ್ಲಿ ರಾಜ್ಯಾಧ್ಯಂತ 3,800 ರೂಟ್ ಗಳಲ್ಲಿ ಸಾರಿಗೆ ಬಸ್ ( KSRTC Bus ) ಸಂಚಾರ ಸ್ಥಗಿತಗೊಳಿಸಲಾಗಿತ್ತು. ಹೀಗೆ ಸ್ಥಗಿತಗೊಂಡಿದ್ದರಿಂದ ರಾಜ್ಯದ ಜನರು ತೊಂದರೆಗೆ ಸಿಲುಕುವಂತಾಗಿದೆ. ಇಂತಹ ರೂಟ್ ಗಳಲ್ಲಿ ಶೀಘ್ರವೇ ಬಸ್ ಸಂಚಾರ ಆರಂಭಗೊಳಿಸಲಾಗುತ್ತಿದೆ.
ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ( Minister Ramalingareddy ) ಅವರು, ಕೋವಿಡ್ ವೇಳೆ ರಾಜ್ಯಾದ್ಯಂತ 3,800 ಸರ್ಕಾರಿ ಬಸ್ ರೂಟ್ಗಳನ್ನು ಸ್ಥಗಿತಗೊಳಿಸಲಾಗಿತ್ತು. ಈ ಪೈಕಿ ಬಹುತೇಕ ಕಡೆಗೆ ರೂಟ್ ಬಸ್ಗಳ ಓಡಾಟ ಆರಂಭವಾಗದೆ ಜನರು ಪರದಾಡುವಂತಾಗಿತ್ತು. ಈಗ ಸಾರಿಗೆ ಇಲಾಖೆ ಸ್ಥಗಿತಗೊಳಿಸಿದ್ದ ಬಸ್ ರೂಟ್ಗಳ ಪುನರಾರಂಭಕ್ಕೆ ಚಿಂತನೆ ನಡೆಸಿದೆ ಎಂದಿದ್ದಾರೆ.
“ಕೋವಿಡ್ ವೇಳೆ ಸ್ಥಗಿತಗೊಳಿಸಲಾಗಿದ್ದ ಬಸ್ ಸೇವೆ ಪುನರಾರಂಭಿಸಲು ಕ್ರಮ ವಹಿಸಲಾಗುತ್ತಿದೆ. ಹಿಂದಿನ ಸರ್ಕಾರದ ಅವಧಿಯಲ್ಲಿ ನೂತನ ಬಸ್ಗಳನ್ನು ಖರೀದಿಸಿಲ್ಲ. ಇದರಿಂದ ಬಸ್ ಕೊರತೆ ಇದ್ದು, ಈಗ ಖರೀದಿಗೆ ಕ್ರಮವಹಿಸಲಾಗುತ್ತಿದೆ. ಆದಷ್ಟು ಬೇಗ ಸಮಸ್ಯೆ ಬಗೆಹರಿಸಲಾಗುತ್ತದೆ” ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಕೋವಿಡ್ ವೇಳೆ ರಾಜ್ಯಾದ್ಯಂತ 3,800 ಸರ್ಕಾರಿ ಬಸ್ ರೂಟ್ಗಳನ್ನು ಸ್ಥಗಿತಗೊಳಿಸಲಾಗಿತ್ತು. ಈ ಪೈಕಿ ಬಹುತೇಕ ಕಡೆಗೆ ರೂಟ್ ಬಸ್ಗಳ ಓಡಾಟ ಆರಂಭವಾಗದೆ ಜನರು ಪರದಾಡುವಂತಾಗಿತ್ತು. ಈಗ ಸಾರಿಗೆ ಇಲಾಖೆ ಸ್ಥಗಿತಗೊಳಿಸಿದ್ದ ಬಸ್ ರೂಟ್ಗಳ ಪುನರಾರಂಭಕ್ಕೆ ಚಿಂತನೆ ನಡೆಸಿದೆ.
"ಕೋವಿಡ್ ವೇಳೆ ಸ್ಥಗಿತಗೊಳಿಸಲಾಗಿದ್ದ ಬಸ್ ಸೇವೆ ಪುನರಾರಂಭಿಸಲು… pic.twitter.com/Q51g6juph9
— DIPR Karnataka (@KarnatakaVarthe) June 22, 2024
ರಷ್ಯಾಕ್ಕೆ ಶರಣಾಗುವ ಮುನ್ನ ತನ್ನದೇ ಸೈನಿಕನ ಮೇಲೆ ಬಾಂಬ್ ದಾಳಿ ನಡೆಸಿದ ಉಕ್ರೇನ್, ಡ್ರೋನ್ ದಾಳಿಯ ವಿಡಿಯೋ ವೈರಲ್
BREAKING: ಬೆಂಗಳೂರಲ್ಲಿ ‘ಅಕ್ರಮ ಸರ್ಕಾರಿ ಭೂಮಿ’ ಒತ್ತುವರಿದಾರರ ವಿರುದ್ಧ ‘FIR’ ದಾಖಲು