ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ 12 ಕ್ಷೇತ್ರಗಳಿಗೆ ಜೂನ್ 28 ರಂದು ಬೆಳಗ್ಗೆ 9.00 ರಿಂದ ಸಂಜೆ 4.00 ರ ವರೆಗೆ ಮತದಾನ ನೆಡೆಯಲಿದೆ. 2028-29 ನೇ ಸಾಲಿನ 05 ವರ್ಷಗಳ ಅವಧಿಯಲ್ಲಿನ ಚುನಾವಣೆಗೆ ಉದೇದುವಾರಿಕೆ ವಾಪಸ್ಸು ಪಡೆದ ನಂತರ ಅಂತಿವಾಗಿ ಚುನಾವಣಾ ಕಣದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಸೇರಿದಂತೆ ಒಟ್ಟು 27 ಅಭ್ಯರ್ಥಿಗಳು ಅಂತಿಮ ಉಳಿದಿದ್ದಾರೆ.
ಶಿವಮೊಗ್ಗ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಯಾರೆಲ್ಲ ಕಣದಲ್ಲಿ ಇದ್ದಾರೆ.?
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ.ಶಿವಮೊಗ್ಗ ತಾಲ್ಲೂಕು ಕ್ಷೇತ್ರದಿಂದ ಕೆ.ಪಿ ದುಗ್ಗಪ್ಪಗೌಡ, ಶಿವನಂಜಪ್ಪ.ಜೆ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ. ಭದ್ರಾವತಿ ತಾಲ್ಲೂಕು ಕ್ಷೇತ್ರದಿಂದ ಹೆಚ್.ಎಲ್. ಷಡಾಕ್ಷರಿ, ಸಿ.ಹನುಮಂತಪ್ಪ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ, ತೀರ್ಥಹಳ್ಳಿ ತಾ. ಕ್ಷೇತ್ರದಿಂದ ಬಸವಾನಿ ವಿಜಯದೇವ್, ಕೆ.ಎಸ್.ಶಿವಕುಮಾರ್, ಪ್ರಾ ಕೃ ಪ ಸ ಸಂಘ ನಿ ಸಾಗರ ತಾಲ್ಲೂಕು ಕ್ಷೇತ್ರದಿಂದ ಶಾಸಕ ಗೋಪಾಲಕೃಷ್ಣ ಬೇಳೂರು, ರತ್ನಾಕರ ಹೊನಗೋಡು, ಪ್ರಾ ಕೃ ಪ ಸ ಸಂಘ ನಿ ಶಿಕಾರಿಪುರ ತಾಲ್ಲೂಕು ಕ್ಷೇತ್ರದಿಂದ ಅಗಡಿ ಅಶೋಕ ಕಣದಲ್ಲಿದ್ದಾರೆ.
ಎಸ್.ಪಿ ಚಂದ್ರಶೇಖರಗೌಡ, ಪ್ರಾ ಕೃ ಪ ಸ ಸಂಘ ನಿ ಸೊರಬ ತಾಲ್ಲೂಕು ಕ್ಷೇತ್ರದಿಂದ ಕೆ.ಪಿ. ರುದ್ರಗೌಡ, ಶಿವಮೂರ್ತಿಗೌಡ, ತಾಲ್ಲೂಕು ಕೃಷಿ ಉತ್ಪನ್ನ ಮಾರಾಟ ಸಹಕಾರ ಸಂಘ ಹಾಘೂ ಇತರೆ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘಗಳು ಶಿವಮೊಗ್ಗ ಉಪ ವಿಭಾಗದಿಂದ ಆರ್.ಎಂ. ಮಂಜುನಾಥಗೌಡ, ವಿರೂಪಾಕ್ಷಪ್ಪ ಜಿ.ಈ, ತಾಲ್ಲೂಕು ಕೃಷಿ ಉತ್ಪನ್ನ ಮಾರಾಟ ಸಹಕಾರ ಸಂಘ ಹಾಘೂ ಇತರೆ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘಗಳು ಸಾಗರ ಉಪ ವಿಭಾಗದಿಂದ ಬಿ.ಡಿ ಭೂಕಾಂತ್, ಜಿ.ಎಸ್.ಸುಧೀರ್ ಕಣದಲ್ಲಿದ್ದಾರೆ.
ಪಟ್ಟಣ ಸಹಕಾರ ಬ್ಯಾಂಕುಗಳ ಹಾಗೂ ವ್ಯವಸಾಯೇತರ ಪತ್ತಿನ ಸಹಕಾರ ಸಂಘಗಳು ಶಿವಮೊಗ್ಗ ಉಪವಿಭಾಗದಿಂದ ಎಸ್.ಪಿ.ದಿನೇಶ, ಮರಿಯಪ,್ಪ ಪಟ್ಟಣ ಸಹಕಾರ ಬ್ಯಾಂಕುಗಳ ಹಾಗೂ ವ್ಯವಸಾಯೇತರ ಪತ್ತಿನ ಸಹಕಾರ ಸಂಘಗಳು ಸಾಗರ ಉಪವಿಭಾಗದಿಂದ ಎಸ್.ಕೆ, ಬಸವರಾಜ್ ಡಿ.ಎಲ್, ರವೀಂದ್ರ ಹೆಚ್.ಎಸ್, ಬ್ಯಾಂಕಿನ ಕಾರ್ಯ ವ್ಯಾಪ್ತಿಯಲ್ಲಿ ಬರುವ ಇನ್ನಿತರ ಸಹಕಾರ ಸಂಘಗಳು ಶಿವಮೊಗ್ಗ ಉಪವಿಭಾಗದಿಂದ ಆನಂದ ಡಿ, ಕೆ.ಎಲ್.ಜಗದೀಶ್ವರ್, ಹೆಚ್.ಬಿ ದಿನೇಶ್, ವiಹಾಲಿಂಗಯ್ಯ ಶಾಸ್ತ್ರಿ ಎಸ್.ಎನ್, ಜೆ.ಪಿ ಯೋಗೇಶ್, ಟಿ. ಶಿವಶಂಕರಪ್ಪ, ಹರೀಶ್ ಎನ್.ಡಿ ಇವರುಗಳು ಅಂತಿಮ ಕಣದಲ್ಲಿದ್ದಾರೆ ಎಂದು ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ರಿಟರ್ನಿಂಗ್ ಅಧಿಕಾರಿ ಹಾಗೂ ಶಿವಮೊಗ್ಗ ಉಪವಿಭಾಗಾಧಿಕಾರಿಗಳಾದ ಸತ್ಯನಾರಾಯಣ ಬಿ.ಹೆಚ್ ತಿಳಿಸಿದ್ದಾರೆ.
‘ರಂಗಭೂಮಿ’ಯ ಅವಿಭಾಗ್ಯ ಅಂಗವೇ ‘ಹೆಣ್ಣು’: ಖ್ಯಾತ ರಂಗ ನಿರ್ದೇಶಕ ‘ನಟರಾಜ್ ಹೊನ್ನವಳ್ಳಿ’
BREAKING : ಲೋಕಸಭೆ ಸ್ಪೀಕರ್ ಆಗಿ ʻಓಂ ಬಿರ್ಲಾʼ ಆಯ್ಕೆ : ಪ್ರಧಾನಿ ಮೋದಿ ಅಭಿನಂದನೆ