Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ರಾತ್ರಿ ತಾಯಿ ಜೊತೆ `ಟೆರೇಸ್’ ಮೇಲೆ ಮಲಗಿದ್ದ ವೇಳೆ ಹಾವು ಕಚ್ಚಿ 7 ವರ್ಷದ ಬಾಲಕಿ ಸಾವು.!

28/08/2025 1:30 PM

ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ನಾನು ಮಾತನಾಡದಿರುವುದೇ ಉತ್ತಮ: ಡಿಸಿಎಂ ಡಿ.ಕೆ. ಶಿವಕುಮಾರ್

28/08/2025 1:28 PM

BREAKING: ರಷ್ಯಾದ ಕ್ಷಿಪಣಿ, ಡ್ರೋನ್ ದಾಳಿ : ಉಕ್ರೇನ್ ನ ಐರೋಪ್ಯ ಒಕ್ಕೂಟದ ಮಿಷನ್ ಕಟ್ಟಡಕ್ಕೆ ಹಾನಿ

28/08/2025 1:26 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಾಲ್ಮೀಕಿ ನಿಗಮ ಕೇಸ್: ಹಗರಣದಲ್ಲಿ ಸಚಿವರ ಹೆಸರು ಬರಬಾರದೆಂದು ಆರೋಪಿಗೆ ನಾಗೇಂದ್ರ ಆಪ್ತರ ಧಮ್ಕಿ!
KARNATAKA

ವಾಲ್ಮೀಕಿ ನಿಗಮ ಕೇಸ್: ಹಗರಣದಲ್ಲಿ ಸಚಿವರ ಹೆಸರು ಬರಬಾರದೆಂದು ಆರೋಪಿಗೆ ನಾಗೇಂದ್ರ ಆಪ್ತರ ಧಮ್ಕಿ!

By kannadanewsnow0527/06/2024 5:47 AM

ಬೆಂಗಳೂರು : ರಾಜ್ಯ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗ ಡಗಳ ಅಭಿವೃದ್ಧಿ ನಿಗಮದ 187 ಕೋಟಿ ರು. ಅಕ್ರಮ ವರ್ಗಾವಣೆ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರು ಈಗಾಗಲೇ ರಾಜೀನಾಮೆ ಸಲ್ಲಿಸಿದ್ದಾರೆ.ಈ ಒಂದು ಹಗರಣದಲ್ಲಿ ಸಚಿವರ ಹೆಸರು ಬರಬಾರದೆಂದು ನಾಗೇಂದ್ರ ಅವರ ಆಪ್ತರು ನನಗೆ ಧಮ್ಕಿ ಹಾಕಿದ್ದಾರೆಂದು ಆರೋಪಿ ಸತ್ಯ ನಾರಾಯಣ ವರ್ಮಾ ಕೋರ್ಟ್ ಮುಂದೆ ಹೇಳಿಕೆ ನೀಡಿದ್ದಾನೆ.

ಹೌದು ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ಹಣ ಅವ್ಯವಹಾರ ಆಗಿರುವ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಬಿ.ನಾಗೇಂದ್ರ ವಿರುದ್ಧ ಈಗ ಹೈದರಾಬಾದ್ ಮೂಲದ ಆರೋಪಿಯೊಬ್ಬನಿಗೆ ಜೀವ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ತನ್ನ ಹೈದರಾಬಾದ್ ಮನೆಗೇ ಬಂದು ನಾಗೇಂದ್ರ ಕಡೆಯವರು ಹಗರಣದಲ್ಲಿ ಸಚಿವರ ಹೆಸರು ಹೊರಬರದಂತೆ ನೋಡಿಕೊಳ್ಳಬೇಕೆಂದು ಬೆದರಿಸಿದ್ದರು ಎಂದು ಆರೋಪಿ ಸತ್ಯ ನಾರಾಯಣ ವರ್ಮಾ ಕೋರ್ಟ್ ಮುಂದೆ ಹೇಳಿಕೆ ನೀಡಿದ್ದಾನೆ.

ನಾನು ಬಂಧನಕ್ಕೆ ಒಳಗಾಗುವ ಮುನ್ನ ಮಾಜಿ ಸಚಿವ ಬಿ.ನಾಗೇಂದ್ರ ಅವರ ಆಪ್ತರು ಹೈದರಾಬಾದ್‌ನ ನನ್ನ ಮನೆಗೆ ಬಂದಿದ್ದರು. ಹಗರಣದಲ್ಲಿ ಸಚಿವರ ಹೆಸರು ಹೊರಬಂದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿ ನನಗೆ ಹಾಗೂ ಕುಟುಂಬದ ಸದಸ್ಯರಿಗೆ ಜೀವ ಬೆದರಿಕೆ ಹಾಕಿದರು.

ಇದಾದ ನಂತರ ಪೊಲೀಸರು ನನ್ನನ್ನು ಬಂಧಿಸಿ ಕೋರ್ಟ್ ಮುಂದೆ ಹಾಜರುಪಡಿಸಿದಾಗ, ಕೋರ್ಟ್ ಬಳಿ ನಾಗೇಂದ್ರ ಅವರ ಆಪ್ತ ಸಹಾಯಕ ನೆಕ್ಕುಂಡಿ ನಾಗರಾಜ್ ಆಪ್ತರು ನನ್ನ ಮೇಲೆ ಹಲ್ಲೆ ನಡೆಸಲು ಯತ್ನಿಸಿದ್ದಾರೆ. ಹೀಗಾಗಿ, ನನ್ನ ಕುಟುಂಬದವರಿಗೆ ರಕ್ಷಣೆ ನೀಡಬೇಕು ಎಂದು ವರ್ಮಾ ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಿದ್ದಾನೆ.

ಈ ಆರೋಪವನ್ನು ಗಂಭೀರವಾಗಿ ಪರಿಗಣಿಸಿದ ನಗರದ 3ನೇ ಹೆಚ್ಚುವರಿ ಎಸಿಎಂಎಂ ನ್ಯಾಯಾಲಯವು, ಪ್ರಕರಣ ದಲ್ಲಿ 13ನೇ ಆರೋಪಿಯಾಗಿರುವ ಹೈದರಾಬಾದಿನ ವರ್ಮಾ ನಿಗೆ, ನಾಗೇಂದ್ರ ಅವರಿಂದ ಜೀವ ಬೆದರಿಕೆ ಇರುವ ಆರೋಪ ಕುರಿತಂತೆ ತನಿಖೆ ನಡೆಸಿ ವರದಿ ಸಲ್ಲಿಸಬೇಕು ಎಂದು ಹಲಸೂರು ಗೇಟ್ ಠಾಣೆ ಪೊಲೀಸರಿಗೆ ನಿರ್ದೇಶನ ನೀಡಿದೆ.

ಘಟನೆ ಹಿನ್ನೆಲೆ?

ಆರೋಪಿ ವರ್ಮಾ ಹೈದರಾಬಾದ್ ಬಂಜಾರ ಹಿಲ್ಸ್‌ ನಲ್ಲಿ ರತ್ನಾಕರ ಬ್ಯಾಂಕಿನ ಶಾಖೆಯಲ್ಲಿ ನಕಲಿ ಕಂಪನಿಗಳ ಹೆಸರಿನಲ್ಲಿ ಖಾತೆ ಮಾಡಿಸಿದ್ದ. ಅವುಗಳಿಗೆ ಕರ್ನಾಟಕ ಮಹರ್ಷಿ ವಾಲ್ಮೀಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿನಿಗಮದಿಂದ ಅನಧಿಕೃತವಾಗಿ ಕೋಟ್ಯಂತರ ಹಣ ವರ್ಗಾವಣೆಯಾಗಿತ್ತು. ನಂತರ ಆ ಹಣವನ್ನು ವರ್ಮಾ ವಿವಿಧ ಉದ್ದೇಶಗಳಿಗೆ ಬಳಸಿ ಲಾಭ ಮಾಡಿಕೊಂಡಿದ್ದಾನೆ ಎಂಬ ಆರೋಪವಿತ್ತು.

ಈ ಹಿನ್ನೆಲೆಯಲ್ಲಿ ವರ್ಮಾನ ಹೈದರಾಬಾದ್ ಮನೆ ಮೇಲೆ ಸಿಐಡಿ ಪೊಲೀಸರು ದಾಳಿ ನಡೆಸಿ, 8.21 ಕೋಟಿ ನಗದು ಮತ್ತು ಲಕ್ಷಾಂತರ ಬೆಲೆಬಾಳುವ ಚಿನ್ನಾಭರಣ ಜಪ್ತಿ ಮಾಡಿದ್ದರು. ನಂತರ ಹೈದರಬಾದ್‌ನಿಂದ ಆರೋಪಿಯನ್ನು ಕರೆತಂದು, ನಗರದ 3ನೇ ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು.ಈ ವೇಳೆ ಆರೋಪಿ ಸತ್ಯನಾರಾಯಣ ವರ್ಮಾ, ಮಾಜಿ ಸಚಿವ ನಾಗೇಂದ್ರ ಮತ್ತವರ ಆಪ್ತರ ವಿರುದ್ಧ ಜೀವ ಬೆದರಿಕೆ ಹಾಕಿರುವ ಆರೋಪ ಮಾಡಿದ್ದಾನೆ.

Share. Facebook Twitter LinkedIn WhatsApp Email

Related Posts

ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ನಾನು ಮಾತನಾಡದಿರುವುದೇ ಉತ್ತಮ: ಡಿಸಿಎಂ ಡಿ.ಕೆ. ಶಿವಕುಮಾರ್

28/08/2025 1:28 PM1 Min Read

BREAKING : ರಜೆ ಕೊಡದಿದ್ದಕ್ಕೆ ಬೀದರ್ ನಲ್ಲಿ ‘KKRTC’ ಬಸ್ ನಲ್ಲೇ ಡ್ರೈವರ್ ಆತ್ಮಹತ್ಯೆ.!

28/08/2025 1:21 PM1 Min Read

ರೈಲು ಪ್ರಯಾಣಿಕರೇ ಗಮನಿಸಿ : ಸೆ.3ರಂದು ರಾಜ್ಯದ ಈ 9 ಮಾರ್ಗದ ರೈಲುಗಳ ಸಂಚಾರ ವ್ಯತ್ಯಯ.!

28/08/2025 12:59 PM1 Min Read
Recent News

SHOCKING : ರಾತ್ರಿ ತಾಯಿ ಜೊತೆ `ಟೆರೇಸ್’ ಮೇಲೆ ಮಲಗಿದ್ದ ವೇಳೆ ಹಾವು ಕಚ್ಚಿ 7 ವರ್ಷದ ಬಾಲಕಿ ಸಾವು.!

28/08/2025 1:30 PM

ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ನಾನು ಮಾತನಾಡದಿರುವುದೇ ಉತ್ತಮ: ಡಿಸಿಎಂ ಡಿ.ಕೆ. ಶಿವಕುಮಾರ್

28/08/2025 1:28 PM

BREAKING: ರಷ್ಯಾದ ಕ್ಷಿಪಣಿ, ಡ್ರೋನ್ ದಾಳಿ : ಉಕ್ರೇನ್ ನ ಐರೋಪ್ಯ ಒಕ್ಕೂಟದ ಮಿಷನ್ ಕಟ್ಟಡಕ್ಕೆ ಹಾನಿ

28/08/2025 1:26 PM

BREAKING : ರಜೆ ಕೊಡದಿದ್ದಕ್ಕೆ ಬೀದರ್ ನಲ್ಲಿ ‘KKRTC’ ಬಸ್ ನಲ್ಲೇ ಡ್ರೈವರ್ ಆತ್ಮಹತ್ಯೆ.!

28/08/2025 1:21 PM
State News
KARNATAKA

ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ನಾನು ಮಾತನಾಡದಿರುವುದೇ ಉತ್ತಮ: ಡಿಸಿಎಂ ಡಿ.ಕೆ. ಶಿವಕುಮಾರ್

By kannadanewsnow0528/08/2025 1:28 PM KARNATAKA 1 Min Read

ಬೆಂಗಳೂರು : ಈ ಬಾರಿ ದಸರಾವನ್ನು ಬಾನು ಮುಷ್ತಾಕ್ ಉದ್ಘಾಟಿಸಲಿದ್ದು, ಈ ವಿಚಾರವಾಗಿ ವಿಪಕ್ಷಗಳು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದವು.…

BREAKING : ರಜೆ ಕೊಡದಿದ್ದಕ್ಕೆ ಬೀದರ್ ನಲ್ಲಿ ‘KKRTC’ ಬಸ್ ನಲ್ಲೇ ಡ್ರೈವರ್ ಆತ್ಮಹತ್ಯೆ.!

28/08/2025 1:21 PM

ರೈಲು ಪ್ರಯಾಣಿಕರೇ ಗಮನಿಸಿ : ಸೆ.3ರಂದು ರಾಜ್ಯದ ಈ 9 ಮಾರ್ಗದ ರೈಲುಗಳ ಸಂಚಾರ ವ್ಯತ್ಯಯ.!

28/08/2025 12:59 PM

ಹೋಟೆಲ್, ಪಬ್, ಬಾರ್, ರೆಸ್ಟೋರೆಂಟ್ ಗಳಿಗೆ ಬಿಗ್ ಶಾಕ್ : `ಸ್ಮೋಕಿಂಗ್ ಝೋನ್’ ಇಲ್ಲದಿದ್ದರೆ `ಲೈಸನ್ಸ್’ ರದ್ದು.!

28/08/2025 12:43 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.