Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ದೀಪಾವಳಿ ಹಬ್ಬಕ್ಕೆ `ಆಶಾ ಕಾರ್ಯಕರ್ತೆ’ರಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ 3 ತಿಂಗಳ `ಗೌರವಧನ’ ಬಿಡುಗಡೆ

18/10/2025 9:12 AM

ಸಿನ್ಸಿನಾಟಿಯಲ್ಲಿ 20 ಅಡಿ ಎತ್ತರದ ಬಾಲ್ಕನಿ ಕುಸಿತ : 20 ಕ್ಕೂ ಹೆಚ್ಚು ಮಂದಿಗೆ ಗಾಯ | Balcony collapse

18/10/2025 9:08 AM

ರಾಜ್ಯದ 1 ರಿಂದ 10ನೇ ತರಗತಿ ಮಕ್ಕಳಿಗೆ ‘ಮೌಲ್ಯ ಶಿಕ್ಷಣ’: ನ. 1ರಂದು CM `ಕಲಿಕಾ ಪುಸ್ತಕ’ ಬಿಡುಗಡೆ

18/10/2025 8:56 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ದೆಹಲಿಯಲ್ಲಿ ಸಿಎಂ ಸಿದ್ಧರಾಮಯ್ಯ ಕಾಟಾಚಾರಕ್ಕೆ ಸಂಸದರೊಂದಿಗೆ ಸಭೆ: ಆರ್.ಅಶೋಕ್ ವಾಗ್ಧಾಳಿ
KARNATAKA

ದೆಹಲಿಯಲ್ಲಿ ಸಿಎಂ ಸಿದ್ಧರಾಮಯ್ಯ ಕಾಟಾಚಾರಕ್ಕೆ ಸಂಸದರೊಂದಿಗೆ ಸಭೆ: ಆರ್.ಅಶೋಕ್ ವಾಗ್ಧಾಳಿ

By kannadanewsnow0927/06/2024 5:00 PM

ಬೆಂಗಳೂರು: ಕೇಂದ್ರ ಸರ್ಕಾರದೊಂದಿಗೆ ಯಾವಾಗಲೂ ಸಂಘರ್ಷ ಮಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯಲ್ಲಿ ಸಂಸದರೊಂದಿಗೆ ಕಾಟಾಚಾರದ ಸಭೆ ನಡೆಸುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ ಟೀಕಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಸದರೊಂದಿಗೆ ಕಾಟಾಚಾರದ ಸಭೆ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ಪ್ರತಿ ದಿನ ಟೀಕಿಸಿ ಈಗ ಸಭೆ ಮಾಡುತ್ತಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ನಡುವೆ ಯಾವಾಗಲೂ ಸೌಹಾರ್ದತೆ ಇರಬೇಕು. ಅಧಿಕಾರ ಇಂದು ಬರುತ್ತದೆ, ಮುಂದೆ ಹೋಗುತ್ತದೆ. ಹೀಗೆ ಸಂಘರ್ಷ ಮಾಡಿಕೊಳ್ಳಲು ಇದು ಭಾರತ-ಪಾಕಿಸ್ತಾನ ಅಲ್ಲ. ಕರ್ನಾಟಕದಲ್ಲಿ ಯಾವುದೇ ಪಕ್ಷ ದೀರ್ಘವಾಗಿ ಆಡಳಿತ ನಡೆಸಿಲ್ಲ. ಇದು ಬದಲಾಗುತ್ತಲೇ ಇರುತ್ತದೆ. ಕೇಂದ್ರ ಸರ್ಕಾರ ನೀಡಿರುವ ಹಣವನ್ನೇ ಖರ್ಚು ಮಾಡಲು ರಾಜ್ಯ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಇನ್ನು ಜನರು ಬೆಲೆ ಏರಿಕೆಗಳಿಗೆ ತಯಾರಾಗಿರಬೇಕು. ಈ ಭ್ರಷ್ಟ, ದುಷ್ಟ ಸರ್ಕಾರದ ವಿರುದ್ಧ ನಾವು ಹೋರಾಟ ಮಾಡಿಯೇ ಒಬ್ಬ ಸಚಿವರನ್ನು ಬೀಳಿಸಿದ್ದೇವೆ. ಮುಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೂ ಬೀಳಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಪೆಟ್ರೋಲ್‌ ದರ ಏರಿಕೆ, ಹಾಲಿನ ದರ ಏರಿಕೆ, ಸ್ಟಾಂಪ್‌ ಡ್ಯೂಟಿ, ಹೀಗೆ ಎಲ್ಲ ದರ ಏರಿಕೆಗೂ ಕಾಂಗ್ರೆಸ್‌ ನಾಯಕರು ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ. ಬಡವರು ಕುಡಿಯುವ ಮದ್ಯದ ದರ ಏರಿಸಿ, ಶ್ರೀಮಂತರ ಮದ್ಯಗಳ ದರ ಇಳಿಕೆ ಮಾಡಿದ್ದಾರೆ. ಇದೇ ಸರ್ಕಾರ ಇನ್ನೂ ಅಧಿಕಾರದಲ್ಲಿ ಇದ್ದರೆ ಕರ್ನಾಟಕದ ಹಣ ಕೊಳ್ಳೆ ಹೊಡೆದು ದೆಹಲಿಗೆ ತೆಗೆದುಕೊಂಡು ಹೋಗುತ್ತದೆ. ಇವರೆಲ್ಲರೂ ಆಲಿಬಾಬ ಮತ್ತು ನಲ್ವತ್ತು ಕಳ್ಳರು ಎಂದರು.

ಈಗ ಹಾಲು ದರ ಏರಿಕೆಯಿಂದ ಹಾಲಾಹಲ ಆಗಿದೆ. ದೇಶಕ್ಕೆ ಅರ್ಥಶಾಸ್ತ್ರದ ಪಾಠ ಹೇಳುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು 50 ಮಿಲಿ ಲೀಟರ್‌ ಹಾಲು ಕಡಿಮೆ ನೀಡಿ ಎರಡು ರೂಪಾಯಿ ಕಡಿಮೆ ಮಾಡಲಿ. ಹಾಲು ಜಾಸ್ತಿ ಕೊಡಿ ಎಂದು ಮುಖ್ಯಮಂತ್ರಿಗಳ ಬಳಿ ಯಾರೂ ಅರ್ಜಿ ಕೊಟ್ಟಿಲ್ಲ. ಮಳೆಗಾಲ ಬಂದಾಗ ಮೇವು ಹೆಚ್ಚಾಗಿ ಹಾಲು ಹೆಚ್ಚಳವಾಗುವುದು ಸಹಜ. ಅದನ್ನು ಪುಡಿ ಮಾಡುವುದು, ಅಂಗನವಾಡಿಗೆ ಕೊಡುವುದು, ರಫ್ತು ಮಾಡುವುದು ಮೊದಲಾದ ಕ್ರಮಗಳನ್ನು ಸರ್ಕಾರ ಅನುಸರಿಸಬೇಕಿತ್ತು. ಮುಖ್ಯಮಂತ್ರಿಗೆ ಸಹಾಯ ಮಾಡುವ ಬುದ್ಧಿ ಇಲ್ಲ, ಆದರೆ ದುಡ್ಡು ಹೊಡೆಯುವ ಬುದ್ಧಿ ಇದೆ. ಜನರು ಸರ್ಕಾರಕ್ಕೆ ಕಪಾಳಕ್ಕೆ ಬಾರಿಸಬೇಕಿದೆ. 15 ಬಜೆಟ್‌ ಮಂಡಿಸಿದ ಸಿದ್ದರಾಮಯ್ಯನವರ ಅರ್ಥಶಾಸ್ತ್ರ ಇದೇ ಎಂದು ಟೀಕಿಸಿದರು.

ಕೆಂಪೇಗೌಡರು ಒಬ್ಬರ ಸ್ವತ್ತಲ್ಲ

ನಾಡಪ್ರಭು ಕೆಂಪೇಗೌಡರು ಯಾರೋ ಒಬ್ಬರ ಸ್ವತ್ತಲ್ಲ. ಅವರು ಎಲ್ಲ ಸಮುದಾಯಗಳನ್ನು ಒಟ್ಟಿಗೆ ತೆಗೆದುಕೊಂಡು ಹೋಗಿದ್ದರು. ಆದರೆ ಕಾಂಗ್ರೆಸ್‌ ಕೆಂಪೇಗೌಡರ ಸಮುದಾಯವನ್ನೇ ಒಂದಾಗಿರಲು ಬಿಡುತ್ತಿಲ್ಲ. ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಒಕ್ಕಲಿಗ ಸಮುದಾಯದ ಪ್ರಶ್ನಾತೀತ ನಾಯಕರು. ಕೆಂಪೇಗೌಡ ಜಯಂತಿಗೆ ಅವರನ್ನು ಗೌರವದಿಂದ ಆಹ್ವಾನಿಸಬೇಕಿತ್ತು. ಈ ಜಯಂತಿ ರಾಜಕೀಯಕ್ಕೆ ವೇದಿಕೆಯಾಗಬಾರದು. ಇದು ಕಾಂಗ್ರೆಸ್‌ ಸರ್ಕಾರದ ದ್ವೇಷದ ರಾಜಕಾರಣವಾಗಿದೆ. ಈ ಜಯಂತಿ ಆಚರಣೆಯನ್ನು ಜನರ ದುಡ್ಡಿನಿಂದ ಮಾಡಲಾಗುತ್ತಿದೆ. ಇಂತಹ ಕಾರ್ಯಕ್ರಮಕ್ಕೆ ಸಮುದಾಯದ ಎಲ್ಲ ಹಿರಿಯರನ್ನು ಆಹ್ವಾನಿಸಬೇಕು ಎಂದರು.

ಕೆಂಪೇಗೌಡರನ್ನು ಸ್ಮರಿಸುವ ಕಾರ್ಯ

ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಆರ್.ಅಶೋಕ, ನಾಡಪ್ರಭು ಕೆಂಪೇಗೌಡರು ಬೆಂಗಳೂರು ನಿರ್ಮಿಸಿದ ಮಹಾನ್ ನಾಯಕರು. ಕೆರೆ, ಪೇಟೆಗಳನ್ನು ನಿರ್ಮಿಸಿ ಅಭಿವೃದ್ಧಿಯಿಂದ ಜನರನ್ನು ಗೆದ್ದಿದ್ದರು‌. ಹಿಂದಿನ ಬಿಜೆಪಿ ಸರ್ಕಾರದಲ್ಲಿ ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ ಬೃಹತ್ ಕಂಚಿನ ಪ್ರತಿಮೆ ನಿರ್ಮಿಸಲಾಯಿತು. ವಿಧಾನಸೌಧದ ಮುಂಭಾಗ ಈವರೆಗೆ ಕೆಂಪೇಗೌಡರ ಪ್ರತಿಮೆ ಇರಲಿಲ್ಲ. ನಾನು ಸಚಿವನಾಗಿದ್ದಾಗ, ಅಂದಿನ ಸಚಿವ ಅಶ್ವತ್ಥನಾರಾಯಣ ಅವರೊಂದಿಗೆ ಅಶ್ವಾರೋಹಿ ಕೆಂಪೇಗೌಡರ ಪ್ರತಿಮೆ ಸ್ಥಾಪಿಸಿದೆ. ಪೂರ್ವಜರನ್ನು ನೆನಪಿಸುವ ಕೆಲಸ ಸದಾ ನಡೆಯಬೇಕು ಎಂದರು.

ಶಾಲಾ ಪಠ್ಯಗಳಲ್ಲಿ ಹೆಚ್ಚಾಗಿ ಕೆಂಪೇಗೌಡರ ಚರಿತ್ರೆ ದಾಖಲಾದರೆ ಮಕ್ಕಳಿಗೆ ಹೆಚ್ಚು ಮಾಹಿತಿ ದೊರೆಯುತ್ತದೆ ಎಂದರು.

Good News: 70 ವರ್ಷ ಮೇಲ್ಪಟ್ಟವರಿಗೆ ‘ಆಯುಷ್ಮಾನ್ ಭಾರತ್ ಆರೋಗ್ಯ ಯೋಜನೆ’ಯಡಿ ‘ಉಚಿತ ಚಿಕಿತ್ಸೆ’: ರಾಷ್ಟ್ರಪತಿ ಮುರ್ಮು

‘ಆರ್.ಅಶೋಕ್’ ವಿರುದ್ಧದ ಭೂ ಹಗರಣವನ್ನು ನ್ಯಾಯಾಂಗ ತನಿಖೆಗೆ ವಹಿಸುವಂತೆ ‘ರಮೇಶ್ ಬಾಬು’ ಒತ್ತಾಯ

Share. Facebook Twitter LinkedIn WhatsApp Email

Related Posts

BREAKING : ದೀಪಾವಳಿ ಹಬ್ಬಕ್ಕೆ `ಆಶಾ ಕಾರ್ಯಕರ್ತೆ’ರಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ 3 ತಿಂಗಳ `ಗೌರವಧನ’ ಬಿಡುಗಡೆ

18/10/2025 9:12 AM1 Min Read

ರಾಜ್ಯದ 1 ರಿಂದ 10ನೇ ತರಗತಿ ಮಕ್ಕಳಿಗೆ ‘ಮೌಲ್ಯ ಶಿಕ್ಷಣ’: ನ. 1ರಂದು CM `ಕಲಿಕಾ ಪುಸ್ತಕ’ ಬಿಡುಗಡೆ

18/10/2025 8:56 AM1 Min Read

BREAKING : ರಾಜ್ಯದಲ್ಲಿ ದೀಪಾವಳಿ ಹಬ್ಬಕ್ಕೆ ಪಟಾಕಿ ಸಿಡಿಸಲು ರಾತ್ರಿ 8-10 ಗಂಟೆವರೆಗೆ ಮಾತ್ರ ಅವಕಾಶ : ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ

18/10/2025 8:50 AM2 Mins Read
Recent News

BREAKING : ದೀಪಾವಳಿ ಹಬ್ಬಕ್ಕೆ `ಆಶಾ ಕಾರ್ಯಕರ್ತೆ’ರಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ 3 ತಿಂಗಳ `ಗೌರವಧನ’ ಬಿಡುಗಡೆ

18/10/2025 9:12 AM

ಸಿನ್ಸಿನಾಟಿಯಲ್ಲಿ 20 ಅಡಿ ಎತ್ತರದ ಬಾಲ್ಕನಿ ಕುಸಿತ : 20 ಕ್ಕೂ ಹೆಚ್ಚು ಮಂದಿಗೆ ಗಾಯ | Balcony collapse

18/10/2025 9:08 AM

ರಾಜ್ಯದ 1 ರಿಂದ 10ನೇ ತರಗತಿ ಮಕ್ಕಳಿಗೆ ‘ಮೌಲ್ಯ ಶಿಕ್ಷಣ’: ನ. 1ರಂದು CM `ಕಲಿಕಾ ಪುಸ್ತಕ’ ಬಿಡುಗಡೆ

18/10/2025 8:56 AM

BREAKING : ರಾಜ್ಯದಲ್ಲಿ ದೀಪಾವಳಿ ಹಬ್ಬಕ್ಕೆ ಪಟಾಕಿ ಸಿಡಿಸಲು ರಾತ್ರಿ 8-10 ಗಂಟೆವರೆಗೆ ಮಾತ್ರ ಅವಕಾಶ : ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ

18/10/2025 8:50 AM
State News
KARNATAKA

BREAKING : ದೀಪಾವಳಿ ಹಬ್ಬಕ್ಕೆ `ಆಶಾ ಕಾರ್ಯಕರ್ತೆ’ರಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ 3 ತಿಂಗಳ `ಗೌರವಧನ’ ಬಿಡುಗಡೆ

By kannadanewsnow5718/10/2025 9:12 AM KARNATAKA 1 Min Read

ಬೆಂಗಳೂರು : ದೀಪಾವಳಿ ಹಬ್ಬಕ್ಕೆ ರಾಜ್ಯ ಸರ್ಕಾರವು ಆಶಾ ಕಾರ್ಯಕರ್ತೆಯರಿಗೆ ಸಿಹಿಸುದ್ದಿ ನೀಡಿದ್ದು, ಮೂರು ತಿಂಗಳ ಗೌರವಧನ ಬಿಡುಗಡೆ ಮಾಡಿ…

ರಾಜ್ಯದ 1 ರಿಂದ 10ನೇ ತರಗತಿ ಮಕ್ಕಳಿಗೆ ‘ಮೌಲ್ಯ ಶಿಕ್ಷಣ’: ನ. 1ರಂದು CM `ಕಲಿಕಾ ಪುಸ್ತಕ’ ಬಿಡುಗಡೆ

18/10/2025 8:56 AM

BREAKING : ರಾಜ್ಯದಲ್ಲಿ ದೀಪಾವಳಿ ಹಬ್ಬಕ್ಕೆ ಪಟಾಕಿ ಸಿಡಿಸಲು ರಾತ್ರಿ 8-10 ಗಂಟೆವರೆಗೆ ಮಾತ್ರ ಅವಕಾಶ : ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ

18/10/2025 8:50 AM

ರಾಜ್ಯದ ಗ್ರಾಮಪಂಚಾಯಿತಿ `ರೆವಿನ್ಯೂ ಸೈಟ್’ ಗೂ `ಇ-ಖಾತಾ’ : ಸರ್ಕಾರದಿಂದ ಅಂತಿಮ ಅಧಿಸೂಚನೆ ಪ್ರಕಟ.!

18/10/2025 8:43 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.