Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಉಡುಪಿಯಲ್ಲಿ ಮನಕಲಕುವ ಘಟನೆ: ಬಾವಿಗೆ ಹಾರಿದ ತಂದೆ ರಕ್ಷಣೆಗೆ ಹೋದ ಮಗನೂ ಸಾವು

15/05/2025 6:08 PM

ಜೆಎನ್‌ಯು ನಂತರ, ಜಾಮಿಯಾ ಮಿಲಿಯಾ ಇಸ್ಲಾಮಿಯಾ ಟರ್ಕಿಶ್ ಅಂಗಸಂಸ್ಥೆಗಳೊಂದಿಗಿನ ಒಪ್ಪಂದ ಸ್ಥಗಿತ | Boycott Turkey

15/05/2025 5:51 PM

Watch Video: ಭಾರತೀಯ ಸೇನೆಗೆ ತನ್ನ ಉಳಿತಾಯದ ಹುಂಡಿ ಹಣವನ್ನು ದೇಣಿಗೆ ನೀಡಿದ ವಿದ್ಯಾರ್ಥಿ

15/05/2025 5:44 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ದಿನವೊಂದಕ್ಕೆ 1 ಕೋಟಿ ಲೀ.ಹಾಲು ಉತ್ಪಾದನೆ: ಇದು KMF ಇತಿಹಾಸದಲ್ಲಿಯೇ ಮೈಲಿಗಲ್ಲು: CM ಸಿದ್ದರಾಮಯ್ಯ
KARNATAKA

ದಿನವೊಂದಕ್ಕೆ 1 ಕೋಟಿ ಲೀ.ಹಾಲು ಉತ್ಪಾದನೆ: ಇದು KMF ಇತಿಹಾಸದಲ್ಲಿಯೇ ಮೈಲಿಗಲ್ಲು: CM ಸಿದ್ದರಾಮಯ್ಯ

By kannadanewsnow0902/07/2024 4:03 PM

ಬೆಂಗಳೂರು: ಕೆಎಂಎಫ್ ವತಿಯಿಂದ ಪ್ರತಿದಿನ 1 ಕೋಟಿ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ಕೆಎಂಎಫ್ ಇತಿಹಾಸದಲ್ಲಿಯೇ ಇದೊಂದು ಮೈಲಿಗಲ್ಲು ಎಂದು
ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ಸೂಚಿಸಿದರು.

ಅವರು ಇಂದು KMF ವತಿಯಿಂದ ಒಂದು ಕೋಟಿ ಲೀಟರ್ ಹಾಲಿನ ಸಂಗ್ರಹದ ಸಂಭ್ರಮಾಚರಣೆಯ ಅಂಗವಾಗಿ ಗೋ ಮಾತೆಗೆ ಪೂಜೆ ಸಲ್ಲಿಸಿ ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾಧ್ಯಮ ದವರೊಂದಿಗೆ ಮಾತನಾಡಿದರು.

ಕರ್ನಾಟಕದಲ್ಲಿ ಹಾಲಿನ ಉತ್ಪಾದನೆ ಕಳೆದ ವರ್ಷ ಜೂನ್ ಮಾಹೆಯಲ್ಲಿ ದಿನವೊಂದಕ್ಕೆ 90 ಲಕ್ಷ ಲೀ.ಇತ್ತು ಎಂದರು.

ಹಾಲಿನ ಸೊಸೈಟಿಗಳು ರೈತರ ಸಂಘಟನೆ

ಹಿಂದೆ ಅವರು ಪಶುಸಂಗೋಪನಾ ಇಲಾಖೆ ಸಚಿವರಾಗಿದ್ದ ಸಂದರ್ಭದಲ್ಲಿ ಹಾಲು ಒಕ್ಕೂಟಗಳಿಗೆ ಡೈರಿಯನ್ನು ಹಸ್ತಾಂತರ ಮಾಡಿಕೊಟ್ಟಿದ್ದನ್ನು ಸ್ಮರಿಸಿದ ಮುಖ್ಯಮಂತ್ರಿಗಳು ಅಲ್ಲಿಯವರೆಗೂ ಡೈರಿಗಳು ಹಾಗೂ ಹಾಲು ಒಕ್ಕೂಟಗಳು ಪ್ರತ್ಯೇಕವಾಗಿದ್ದವು. ಹಾಲಿನ ಸೊಸೈಟಿಗಳೂ ಕೂಡ ರೈತರ ಸಂಘಟನೆಗಳೇ ಆಗಿವೆ ಎಂದರು.

ರೈತರಿಗೆ ನೆರವು

ರಾಜ್ಯದಲ್ಲಿ ಸುಮಾರು 16000 ಸೊಸೈಟಿಗಳಿದ್ದು, 15 ಹಾಲು ಒಕ್ಕೂಟಗಳಿವೆ. ಕೆಲವೆಡೆ ಎರಡು ಮೂರು ಜಿಲ್ಲೆ ಸೇರಿ ಒಕ್ಕೂಟ ಮಾಡಿಕೊಂಡಿದ್ದಾರೆ. 15 ಮದರ್ ಡೈರಿಗಳಿವೆ. ಒಂದು ಕೋಟಿ ಹಾಲು ಉತ್ಪಾದನೆಯಾಗುತ್ತಿರುವುದರಿಂದ ಅರ್ಧ ಲೀ ಹಾಲಿನ ಪ್ಯಾಕೆಟ್ ನಲ್ಲಿ 50 ಮೀ.ಲೀ ಹಾಲು ಹೆಚ್ಚು ಮಾಡಲಾಗಿದೆ. ಇಷ್ಟು ಹಾಲನ್ನು ಮಾರಾಟ ಮಾಡಬೇಕಿದೆ. ನಾವು ರೈತರಿಗೆ ಹಾಗೂ ಸೊಸೈಟಿಗಳಿಗೆ ಹಾಲು ಬೇಡ ಎನ್ನಲಾಗುವುದಿಲ್ಲ. ರೈತರಿಗೆ ಸಹಾಯ ಮಾಡಲು ನಂದಿನಿ ಹಾಲಿನ ಪ್ರಮಾಣವನ್ನು ಹೆಚ್ಚಿಸಲಾಗಿದೆ. ಹೆಚ್ಚಾಗಿರುವ ಪ್ರಮಾಣಕ್ಕೆ 2.00 ರೂಪಾಯಿ ಹೆಚ್ಚಿಸಲಾಗಿದೆ ಎಂದರು.

ವಿಪಕ್ಷದ ಅಪಪ್ರಚಾರ

ವಿರೋಧ ಪಕ್ಷದವರು ಇದನ್ನು ಅರ್ಥ ಮಾಡಿಕೊಳ್ಳದೆ ಹಾಲಿನ ಬೆಲೆ ಜಾಸ್ತಿ ಮಾಡಿದ್ದಾರೆ ಎಂದು ಹೇಳಿ ಅಪಪ್ರಚಾರ ಮಾಡುತ್ತಿದ್ದಾರೆ. ರೈತರ ಬಗ್ಗೆ ಅವರಿಗೆ ಕಾಳಜಿ ಇಲ್ಲ ಎಂದು ಅನಿಸುತ್ತಿದೆ. ಹಾಲು ಉತ್ಪಾದನೆ ಹೆಚ್ಚಾದರೆ ಹೆಚ್ಚು ಆದಾಯ ಬರಲಿದೆ. ಒಂದು ಕೋಟಿ ಲೀ. ಉತ್ಪಾದನೆಯಾದರೆ ಒಂದು ದಿನಕ್ಕೆ 5 ಕೋಟಿ ಪ್ರೋತ್ಸಾಹ ಧನವನ್ನು ಸರ್ಕಾರ ಕೊಡುತ್ತದೆ. ಒಂದು ತಿಂಗಳಿಗೆ 150 ಕೋಟಿ, ವರ್ಷಕ್ಕೆ 1800ಕೋಟಿ ರೂ.ಗಳನ್ನು ನೀಡಿ ರೈತರಿಗೆ ಸಹಾಯ ಮಾಡಲಾಗುತ್ತಿದೆ ಎಂದರು.

2.00 ರೂ.ಇದ್ದ ಪ್ರೋತ್ಸಾಹಧನವನ್ನು 5 ರೂ. ಮಾಡಿದವನು ನಾನು. ವಿರೋಧಪಕ್ಷದ ನಾಯಕ ಆರ್.ಅಶೋಕ್ ಅವರಿಗೆ ಈ ಬಗ್ಗೆ ತಿಳಿಯದೆ ಮಾತನಾಡುತ್ತಾರೆ ಎಂದರು.

ಹಾಲಿನ ದರ ಹೆಚ್ಚಳವಾಗಿಲ್ಲ

ಒಂದು ವೇಳೆ ಹಾಲಿನ ಬೆಲೆ ಹೆಚ್ಚಾದರೂ ಕೊಳ್ಳುವವರಿಗೆ ಅದು ಭಾರವಾಗುತ್ತದೆ. ರೈತರಿಗೆ ಭಾರವಾಗುವುದಿಲ್ಲ, ಸಹಾಯವಾಗುತ್ತದೆ. ಹಾಲಿನ ಬೆಲೆ ಹೆಚ್ಚು ಮಾಡಿಲ್ಲ ಎಂದು ಪುನರುಚ್ಚರಿಸಿದ ಮುಖ್ಯಮಂತ್ರಿಗಳು.

ಗ್ರಾಹಕರಿಗೆ ಪ್ರಮಾಣ ಹೆಚ್ಚು ಮಾಡಿ ಬೆಲೆ ನಿಗದಿ ಮಾಡಿದ್ದರೂ ಕೂಡ ನೆರೆಯ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದ ಹಾಲಿನ ಬೆಲೆ ಕಡಿಮೆ ಇದೆ. ಎಲ್ಲಾ ರಾಜ್ಯಗಳಿಗೆ ಹೋಲಿಸಿದರೆ ಗ್ರಾಹಕರಿಗೆ ಕಡಿಮೆ ದರದಲ್ಲಿ ಹಾಲು ಕೊಡುತ್ತಿರುವುದು ಕರ್ನಾಟಕ ಮಾತ್ರ ಎಂದರು.

ಈ ಸಂದರ್ಭದಲ್ಲಿ ಸಚಿವರಾದ ಕೆ.ಎನ್ ರಾಜಣ್ಣ, ಜಮೀರ್ ಅಹ್ಮದ್, ವೆಂಕಟೇಶ್, ಶಾಸಕ ಬೇಳೂರು ಗೋಪಾಲಕೃಷ್ಣ, ಮಾಜಿ ಸಚಿವರಾದ ಸೀತಾರಾಮ್, ನಜೀರ್ ಅಹ್ಮದ್ ರವರು, ಕೆ.ಎಂ.ಎಫ್ ಅಧ್ಯಕ್ಷರಾದ ಭೀಮ ನಾಯ್ಕ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ನನಗೆ ಜಾಮೀನು ಕೊಡಿಸಿ: ಜೈಲಿನಿಂದಲೇ ನಿರ್ಮಾಪಕರು, ನಿರ್ದೇಶಕರಿಗೆ ‘ನಟ ದರ್ಶನ್’ ಕರೆ ಮಾಡಿ ದುಂಬಾಲು | Actor Darshan

ಮುಡಾದಲ್ಲಿ 4,000 ಕೋಟಿ ರೂ. ಗುಳುಂ ಮಾಡಿದ ʻಗೋಲ್ಮಾಲ್‌ CMʼ : ಆರ್.‌ ಅಶೋಕ್‌ ಗಂಭೀರ ಆರೋಪ

Share. Facebook Twitter LinkedIn WhatsApp Email

Related Posts

ಉಡುಪಿಯಲ್ಲಿ ಮನಕಲಕುವ ಘಟನೆ: ಬಾವಿಗೆ ಹಾರಿದ ತಂದೆ ರಕ್ಷಣೆಗೆ ಹೋದ ಮಗನೂ ಸಾವು

15/05/2025 6:08 PM1 Min Read

ಬೆಂಗಳೂರಿನ ಪೌರಕಾರ್ಮಿಕರಿಗೆ ಬಿಬಿಎಂಪಿಯಿಂದ ಗುಡ್ ನ್ಯೂಸ್

15/05/2025 5:37 PM1 Min Read

BREAKING : 60% ಪೇಮೆಂಟ್ ಬಿದ್ದರೆ ಮಾತ್ರ ಬಿಲ್ ಮಾಡ್ತಾರೆ : ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

15/05/2025 5:37 PM2 Mins Read
Recent News

ಉಡುಪಿಯಲ್ಲಿ ಮನಕಲಕುವ ಘಟನೆ: ಬಾವಿಗೆ ಹಾರಿದ ತಂದೆ ರಕ್ಷಣೆಗೆ ಹೋದ ಮಗನೂ ಸಾವು

15/05/2025 6:08 PM

ಜೆಎನ್‌ಯು ನಂತರ, ಜಾಮಿಯಾ ಮಿಲಿಯಾ ಇಸ್ಲಾಮಿಯಾ ಟರ್ಕಿಶ್ ಅಂಗಸಂಸ್ಥೆಗಳೊಂದಿಗಿನ ಒಪ್ಪಂದ ಸ್ಥಗಿತ | Boycott Turkey

15/05/2025 5:51 PM

Watch Video: ಭಾರತೀಯ ಸೇನೆಗೆ ತನ್ನ ಉಳಿತಾಯದ ಹುಂಡಿ ಹಣವನ್ನು ದೇಣಿಗೆ ನೀಡಿದ ವಿದ್ಯಾರ್ಥಿ

15/05/2025 5:44 PM

ಬೆಂಗಳೂರಿನ ಪೌರಕಾರ್ಮಿಕರಿಗೆ ಬಿಬಿಎಂಪಿಯಿಂದ ಗುಡ್ ನ್ಯೂಸ್

15/05/2025 5:37 PM
State News
KARNATAKA

ಉಡುಪಿಯಲ್ಲಿ ಮನಕಲಕುವ ಘಟನೆ: ಬಾವಿಗೆ ಹಾರಿದ ತಂದೆ ರಕ್ಷಣೆಗೆ ಹೋದ ಮಗನೂ ಸಾವು

By kannadanewsnow0915/05/2025 6:08 PM KARNATAKA 1 Min Read

ಉಡುಪಿ: ಸಾಲ, ಬಡತದ ಸುಳಿಗೆ ಸಿಲುಕಿದಂತ ತಂದೆಯೊಬ್ಬ, ಬಾವಿಗೆ ಹಾರಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ತಂದೆ ಬಾವಿಗೆ ಹಾರಿದ್ದನ್ನು ಕಂಡಂತ ಪುತ್ರ,…

ಬೆಂಗಳೂರಿನ ಪೌರಕಾರ್ಮಿಕರಿಗೆ ಬಿಬಿಎಂಪಿಯಿಂದ ಗುಡ್ ನ್ಯೂಸ್

15/05/2025 5:37 PM

BREAKING : 60% ಪೇಮೆಂಟ್ ಬಿದ್ದರೆ ಮಾತ್ರ ಬಿಲ್ ಮಾಡ್ತಾರೆ : ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

15/05/2025 5:37 PM

GOOD NEWS: ರಾಜ್ಯದ ಅನಧಿಕೃತ ಕಟ್ಟಡ, ನಿವೇಶನ ಮಾಲೀಕರಿಗೆ ಗುಡ್ ನ್ಯೂಸ್: ಬಿ-ಖಾತಾ ಅವಧಿ 3 ತಿಂಗಳು ವಿಸ್ತರಣೆ

15/05/2025 5:33 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.