ನವದೆಹಲಿ : ಟಿ20 ವಿಶ್ವಕಪ್ ಗೆದ್ದಿರುವ ಟೀಂ ಇಂಡಿಯಾಕ್ಕೆ ಹೃದಯ ಪೂರ್ವಕ ಸ್ವಾಗತ ಎಂದು ಕೇಂದ್ರ ಕ್ರೀಡಾ ಸಚಿವ ಮನ್ಸುಖ್ ಮಾಂಡವೀಯಾ ಶುಭ ಕೋರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, “ಬಾರ್ಬಡೋಸ್ ನೆಲದಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಿದ ನಮ್ಮ ಟಿ 20 ವಿಶ್ವಕಪ್ ವಿಜೇತ ಭಾರತೀಯ ತಂಡಕ್ಕೆ ಹೃತ್ಪೂರ್ವಕ ಸ್ವಾಗತ. ನಿಮ್ಮನ್ನು ಸ್ವಾಗತಿಸಲು ಇಡೀ ದೇಶ ಉತ್ಸುಕವಾಗಿದೆ ಎಂದು ಹೇಳಿದ್ದಾರೆ.
ಇನ್ನು ಬಾರ್ಬಡೋಸ್ ನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ಎರಡನೇ ಬಾರಿಗೆ ಟಿ೨೦ ವಿಶ್ವಕಪ್ ಗೆದ್ದ ಟೀಂ ಇಂಡಿಯಾ ಆಟಗಾರರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದಿಸಲಿದ್ದಾರೆ.
#WATCH | Union Sports Minister Mansukh Mandaviya tweets "A hearty welcome to our T20 World Cup winning Indian team, who hoisted the tricolour on the soil of Barbados. The whole country is eager to welcome you."
(Source: Mansukh Mandaviya's social media) pic.twitter.com/ib98BwlSEs
— ANI (@ANI) July 4, 2024