ಚೆನ್ನೈ: ಬಹುಜನ ಸಮಾಜ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಆರ್ಮ್ ಸ್ಟ್ರಾಂಗ್ ಅವರನ್ನು ಆರು ಮಂದಿ ಅಪರಿಚಿತ ವ್ಯಕ್ತಿಗಳು ಕೊಚ್ಚಿ ಕೊಲೆ ಮಾಡಿರುವ ಘಟನೆ ಚೆನ್ನೈನ ಪೆರಂಬೂರ್ ಪ್ರದೇಶದಲ್ಲಿ ನಡೆದಿದೆ.
ದ್ವಿಚಕ್ರ ವಾಹನದಲ್ಲಿ ಬಂದ ಗುಂಪು ಚೆನ್ನೈ ಕಾರ್ಪೊರೇಷನ್ನ ಮಾಜಿ ಕೌನ್ಸಿಲರ್ ಆರ್ಮ್ಸ್ಟ್ರಾಂಗ್ ಅವರ ಮೇಲೆ ಪೆರಂಬೂರಿನ ಅವರ ಮನೆಯ ಬಳಿ ಹಲ್ಲೆ ನಡೆಸಿ ಗಂಭೀರ ಗಾಯಗೊಳಿಸಿ ಪರಾರಿಯಾಗಿದೆ.
ಪಕ್ಷದ ರಾಜ್ಯ ಅಧ್ಯಕ್ಷರ ಮೇಲೆ ಹಲ್ಲೆ ನಡೆಸಿದ ನಂತರ ಅವರನ್ನು ಚಿಕಿತ್ಸೆಗಾಗಿ ಥೌಸಂಡ್ ಲ್ಯಾಂಪ್ಸ್ ಅಪೊಲೊಗೆ ದಾಖಲಿಸಲಾಗಿದೆ.
ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರು ಪ್ರಸ್ತುತ ಕೊಲೆಯ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
ಬಿಎಸ್ಪಿ ರಾಷ್ಟ್ರೀಯ ಅಧ್ಯಕ್ಷೆ ಮಾಯಾವತಿ ತಮ್ಮ ಎಕ್ಸ್ ಖಾತೆಯಲ್ಲಿ ಈ ಹತ್ಯೆಯನ್ನು ‘ಶೋಚನೀಯ ಮತ್ತು ಖಂಡನೀಯ’ ಎಂದು ಕರೆದಿದ್ದಾರೆ.
ತಮಿಳುನಾಡು ರಾಜ್ಯ ಭಜುನ್ ಸಮಾಜ ಪಕ್ಷದ (ಬಿಎಸ್ಪಿ) ಅಧ್ಯಕ್ಷ ಕೆ.ಆರ್ಮ್ಸ್ಟ್ರಾಂಗ್ ಅವರನ್ನು ಚೆನ್ನೈನ ಅವರ ಮನೆಯ ಹೊರಗೆ ಅವರ ಭೀಕರ ಹತ್ಯೆ ಅತ್ಯಂತ ಶೋಚನೀಯ ಮತ್ತು ಖಂಡನೀಯ. ವೃತ್ತಿಯಲ್ಲಿ ವಕೀಲರಾಗಿದ್ದ ಅವರು ರಾಜ್ಯದಲ್ಲಿ ಪ್ರಬಲ ದಲಿತ ಧ್ವನಿ ಎಂದು ಹೆಸರುವಾಸಿಯಾಗಿದ್ದರು. ರಾಜ್ಯ ಸರ್ಕಾರ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು.” ಎಂದು ಮಾಯಾವತಿ ಹೇಳಿದ್ದಾರೆ.
ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಪಳನಿಸ್ವಾಮಿ ಹತ್ಯೆ ಖಂಡಿಸಿದ್ದಾರೆ.