ಬೆಂಗಳೂರು: ರಾಮನಗರದಲ್ಲಿ ‘ರಾಮ’ನಿದ್ದಾನೆ ಎಂಬ ದ್ವೇಷವೂ ಅಥವಾ ರಿಯಲ್ ಎಸ್ಟೇಟ್ ಕುಬೇರರಾಗುವ ದುರಾಸೆಯೋ? ರಾಮನಗರದಲ್ಲೂ ರಿಯಲ್ ಎಸ್ಟೇಟ್ ದಂಧೆ ಶುರು ಮಾಡಲು ಹೊರಟಿದ್ದೀರಾ ಅಂತ ವಿಪಕ್ಷ ನಾಯಕ ಆರ್.ಅಶೋಕ್ ವಾಗ್ಧಾಳಿ ನಡೆಸಿದ್ದಾರೆ.
ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ರಾಮನಗರ ಜಿಲ್ಲೆಯ ಹೆಸರು ಬದಲಾವಣೆ ಮಾಡುವ ಕಾಂಗ್ರೆಸ್ ಸರ್ಕಾರದ ಸಂಚಿನ ಹಿಂದೆ ರಾಮ ದ್ವೇಷ, ರಿಯಲ್ ಎಸ್ಟೇಟ್ ಲಾಲಸೆ ಅಡಗಿರುವುದು ಸುಸ್ಪಷ್ಟವಾಗಿದೆ ಅಂತ ಕಿಡಿಕಾರಿದ್ದಾರೆ.
ಡಿಸಿಎಂ ಡಿ.ಕೆ ಶಿವಕುಮಾರ್ ಅವರೇ, ಬ್ರ್ಯಾಂಡ್ ಬೆಂಗಳೂರು ಮಾಡುತ್ತೇವೆ ಎಂದು ಬೆಂಗಳೂರಿನ ಜನತೆಗೆ ಮೋಸ ಮಾಡಿದ್ದಾಯ್ತು. ಈಗ ಹೆಸರು ಬದಲಾವಣೆ ಮಾಡುವ ಮೂಲಕ ರಾಮನಗರದ ಜನತೆಯ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತೀದ್ದೀರಲ್ಲ ಇನ್ನೆಷ್ಟು ದಿನ ಹೀಗೆ ಜನರ ದಿಕ್ಕು ತಪ್ಪಿಸಿ ಕಾಲಹರಣ ಮಾಡುತ್ತೀರಿ? ಹೆಸರು ಬದಲಾವಣೆ ಮಾಡಿದ ಮಾತ್ರಕ್ಕೆ ಅಭಿವೃದ್ಧಿ ಆಗಿಬಿಡುತ್ತಾ? ಅಂತ ಪ್ರಶ್ನಿಸಿದ್ದಾರೆ.
2007ರಲ್ಲಿ ರಾಮನಗರವನ್ನ ಪ್ರತ್ಯೇಕ ಜಿಲ್ಲೆ ಮಾಡಿದ್ದು ಅಂದಿನ ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ. ತಮ್ಮ ತಮ್ಮನನ್ನ ಸೋಲಿಸಿದ ಬಿಜೆಪಿ – ಜೆಡಿಎಸ್ ಮೈತ್ರಿ ವಿರುದ್ಧ ದ್ವೇಷ ಸಾಧಿಸಲು ಹೆಸರು ಬದಲಾವಣೆ ಮಾಡುತ್ತಿದ್ದೀರಾ? ಎಂದು ಕೇಳಿದ್ದಾರೆ.
ಸಿಎಂ ಸಿದ್ಧರಾಮಯ್ಯ ಅವರೇ, ರಾಮನಗರದಲ್ಲಿ ರಾಮನ ಹೆಸರು ಇರಬಾರದೆಂದು ತಮ್ಮ ನಾಯಕ ರಾಹುಲ್ ಗಾಂಧಿ ಅವರು ಆದೇಶ ಮಾಡಿದ್ದಾರೆಯೇ? ಅಥವಾ ಮೈಸೂರಿನಲ್ಲಿ ಭೂಕಬಳಿಕೆ ಮಾಡಿದ್ದು ಸಾಲದು ಅಂತ ಈಗ ರಾಮಾನಗರದಲ್ಲೂ ರಿಯಲ್ ಎಸ್ಟೇಟ್ ದಂಧೆ ಶುರು ಮಾಡಲು ಹೊರಟಿದ್ದೀರಾ? ಅಂತ ಪ್ರಶ್ನಿಸಿದ್ದಾರೆ.
ರಾಮನಗರದಲ್ಲಿ 'ರಾಮ'ನಿದ್ದಾನೆ ಎಂಬ ದ್ವೇಷವೂ ಅಥವಾ ರಿಯಲ್ ಎಸ್ಟೇಟ್ ಕುಬೇರರಾಗುವ ದುರಾಸೆಯೋ?
ರಾಮನಗರ ಜಿಲ್ಲೆಯ ಹೆಸರು ಬದಲಾವಣೆ ಮಾಡುವ @INCKarnataka ಸರ್ಕಾರದ ಸಂಚಿನ ಹಿಂದೆ ರಾಮ ದ್ವೇಷ, ರಿಯಲ್ ಎಸ್ಟೇಟ್ ಲಾಲಸೆ ಅಡಗಿರುವುದು ಸುಸ್ಪಷ್ಟವಾಗಿದೆ.
ಡಿಸಿಎಂ @DKShivakumar ಅವರೇ, ಬ್ರ್ಯಾಂಡ್ ಬೆಂಗಳೂರು ಮಾಡುತ್ತೇವೆ ಎಂದು ಬೆಂಗಳೂರಿನ… pic.twitter.com/sGAggYDnnt
— R. Ashoka (ಮೋದಿ ಅವರ ಕುಟುಂಬ) (@RAshokaBJP) July 9, 2024
ಸಿಎಂ ರಾಜೀನಾಮೆ, ನಿವೇಶನಗಳ ಹಂಚಿಕೆ ರದ್ದು, ಸಿಬಿಐ ತನಿಖೆಗೆ ‘B.Y ವಿಜಯೇಂದ್ರ ಆಗ್ರಹ’
BREAKING : ವಾಲ್ಮೀಕಿ ಹಗರಣ ಕೇಸ್ : ಯಾವುದೇ ಕ್ಷಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರ ಬಂಧನ ಸಾಧ್ಯತೆ!