Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಿಂಡ್ ಸರ್ಫ್ ತಂತ್ರಜ್ಞಾನಕ್ಕೆ ಪರವಾನಗಿ ನೀಡಲು ಗೂಗಲ್ $2.4 ಬಿಲಿಯನ್ ಪಾವತಿಸಲಿದೆ : ವರದಿ

12/07/2025 3:30 PM

ಮಹಾರಾಷ್ಟ್ರ ಎನ್‌ಸಿಪಿ-ಎಸ್‌ಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಜಯಂತ್ ಪಾಟೀಲ್ ರಾಜೀನಾಮೆ | Jayant Patil Resigns

12/07/2025 3:26 PM

5 ವರ್ಷದೊಳಗಿನ ಭಾರತೀಯ ಮಕ್ಕಳು ‘ಸ್ಕ್ರೀನ್ ಸಮಯ’ವನ್ನ ಸುರಕ್ಷಿತಕ್ಕಿಂತ 2 ಪಟ್ಟು ಹೆಚ್ಚು ಕಳೆಯುತ್ತಾರೆ ; ಅಧ್ಯಯನ

12/07/2025 3:20 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ; ED ದಾಳಿ ಮಾಡುವ ಅವಶ್ಯಕತೆ ಇರಲಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್
KARNATAKA

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ; ED ದಾಳಿ ಮಾಡುವ ಅವಶ್ಯಕತೆ ಇರಲಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

By kannadanewsnow0910/07/2024 9:14 PM

ತುಮಕೂರು : “ರಾಜ್ಯ ಸರ್ಕಾರ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ತನಿಖೆ ನಡೆಸಲು ಎಸ್ಐಟಿ ರಚನೆ ಮಾಡಿದೆ. ಹೀಗಾಗಿ ಇ.ಡಿ ( ಜಾರಿ ನಿರ್ದೇಶನಾಲಯ) ದಾಳಿ ಮಾಡುವ ಅವಶ್ಯಕತೆ ಇರಲಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

ಮಾಜಿ ಸಚಿವ ನಾಗೇಂದ್ರ ಮನೆ ಸೇರಿ ಹಲವು ಕಡೆ ಇ.ಡಿ ದಾಳಿ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗಳಿಗೆ ನೊಣವಿನಕೆರೆ ಕಾಡಸಿದ್ದೇಶ್ವರ ಮಠದಲ್ಲಿ ಉತ್ತರಿಸಿದ ಅವರು “ಇಷ್ಟು ದೊಡ್ಡ ಮೊತ್ತದ ಹಗರಣ ಎಂದ ಮೇಲೆ ಬ್ಯಾಂಕ್ ನವರು ತನಿಖೆ ನಡೆಸುವ ಅಧಿಕಾರವಿದೆ. ಇ.ಡಿ ಅವರು ಅವಶ್ಯಕತೆ ಇರದಿದ್ದರೂ ಬಂದಿದ್ದಾರೆ” ಎಂದು ಹೇಳಿದರು.

ಎಸ್ ಐಟಿ ರಚನೆ ಮಾಡಿದರೂ ಇ.ಡಿ ತನಿಖೆ ನಡೆಸಲು ಮುಂದುವರೆಯುತ್ತಿದೆ ಎಂದು ಕೇಳಿದಾಗ “ಇದರ ಬಗ್ಗೆ ಮಾತನಾಡಲು ಹೋಗುವುದಿಲ್ಲ. ನಾಗೇಂದ್ರ ಅವರದ್ದು ಯಾವುದೇ ತರದ ತಪ್ಪಿಲ್ಲ. ಕಳಂಕರಹಿತರಾಗಿ ಪ್ರಕರಣದಿಂದ ಹೊರಗಡೆ ಬರುತ್ತಾರೆ ಎನ್ನುವ ನಂಬಿಕೆ ಇದೆ” ಎಂದು ಹೇಳಿದರು.

“ಈ ಹಿಂದೆ ಬಿಜೆಪಿ ಕಾಲದಲ್ಲಿಯೂ ಇಂತಹ ಪ್ರಕರಣ ನಡೆದಿರುವ ಉದಾಹರಣೆಗಳಿವೆ. ಬಹಳ ವ್ಯವಸ್ಥಿತವಾಗಿ ವಂಚನೆ ಮಾಡಿದ್ದಾರೆ. ವಂಚನೆ ಮಾಡಿದವರಿಗೆ ಶಿಕ್ಷೆ ಆಗಲೇಬೇಕು. ಅಧಿಕಾರಿಗಳು ದುರುಪಯೋಗ ಪಡಿಸಿಕೊಂಡಿರುವುದರಲ್ಲಿ ಯಾವುದೇ ಅನುಮಾನ ಇಲ್ಲ. ಪ್ರಕರಣ ಆಗಬಾರದಾಗಿತ್ತು, ನಡೆದು ಹೋಗಿದೆ” ಎಂದು ಹೇಳಿದರು.

ನಾಗೇಂದ್ರ ಅವರ ಮನೆ ಸೇರಿದಂತೆ ನಾಲ್ಕೈದು ಕಡೆ ಇಡೀ ದಾಳಿ ಮಾಡಿದೆ ಎನ್ನುವ ಪ್ರಶ್ನೆಗೆ “ಇದರ ಬಗ್ಗೆ ನನಗೆ ಸರಿಯಾದ ಮಾಹಿತಿ ಇಲ್ಲ. ನಾಗೇಂದ್ರ ಅವರು ಹಾಗೂ ದದ್ದಲ್ ಅವರಿಗೆ ಎಸ್ ಐಟಿ ನೋಟಿಸ್ ನೀಡಿದೆ. ನಾವು ಆಂತರಿಕವಾಗಿ ಎಲ್ಲಾ ರೀತಿಯಲ್ಲಿ ತನಿಖೆ ಮಾಡಿದ್ದೇವೆ. ಹಗರಣದಲ್ಲಿ ನಮ್ಮ ಶಾಸಕರ, ಸಚಿವರ ಕೈವಾಡ ಇಲ್ಲ ಎಂಬುದನ್ನ ಅವರು ನಮಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಅವರು ಏನೇ ಕೇಳಿದರೂ ಉತ್ತರ ಕೊಡುತ್ತಾರೆ” ಎಂದು ತಿಳಿಸಿದರು.

BIG NEWS: ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ: ಡಿಸಿಎಂ ಡಿ.ಕೆ ಶಿವಕುಮಾರ್ | DCM DK Shivakumar

BREAKING: ಸಿಎಂ ಸಿದ್ಧರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಕೆ | CM Siddaramaiah

Share. Facebook Twitter LinkedIn WhatsApp Email

Related Posts

ಜೆಡಿಎಸ್ ಪಕ್ಷಕ್ಕೆ ಸೇವಾದಳ ಆತ್ಮವಿದ್ದಂತೆ: ಬೆಂಗಳೂರು ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ

12/07/2025 3:02 PM1 Min Read

ನೀವು SSLC ಪರೀಕ್ಷೆಯಲ್ಲಿ ಶೇ.95ಕ್ಕೂ ಹೆಚ್ಚು ಅಂಕ ಪಡೆದಿದ್ದೀರಾ? ಈಗಲೇ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ

12/07/2025 3:00 PM1 Min Read

BIG NEWS: ತುಂಬಿದ ಕೊಡ ತುಳಿಕಿತಲೇ ಪರಾಕ್: ವರ್ಷದ ಭವಿಷ್ಯವಾಣಿ ‘ಮೈಲಾರದ ಕಾರ್ಣಿಕ ನುಡಿ’

12/07/2025 2:47 PM1 Min Read
Recent News

ವಿಂಡ್ ಸರ್ಫ್ ತಂತ್ರಜ್ಞಾನಕ್ಕೆ ಪರವಾನಗಿ ನೀಡಲು ಗೂಗಲ್ $2.4 ಬಿಲಿಯನ್ ಪಾವತಿಸಲಿದೆ : ವರದಿ

12/07/2025 3:30 PM

ಮಹಾರಾಷ್ಟ್ರ ಎನ್‌ಸಿಪಿ-ಎಸ್‌ಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಜಯಂತ್ ಪಾಟೀಲ್ ರಾಜೀನಾಮೆ | Jayant Patil Resigns

12/07/2025 3:26 PM

5 ವರ್ಷದೊಳಗಿನ ಭಾರತೀಯ ಮಕ್ಕಳು ‘ಸ್ಕ್ರೀನ್ ಸಮಯ’ವನ್ನ ಸುರಕ್ಷಿತಕ್ಕಿಂತ 2 ಪಟ್ಟು ಹೆಚ್ಚು ಕಳೆಯುತ್ತಾರೆ ; ಅಧ್ಯಯನ

12/07/2025 3:20 PM

ಜೆಡಿಎಸ್ ಪಕ್ಷಕ್ಕೆ ಸೇವಾದಳ ಆತ್ಮವಿದ್ದಂತೆ: ಬೆಂಗಳೂರು ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ

12/07/2025 3:02 PM
State News
KARNATAKA

ಜೆಡಿಎಸ್ ಪಕ್ಷಕ್ಕೆ ಸೇವಾದಳ ಆತ್ಮವಿದ್ದಂತೆ: ಬೆಂಗಳೂರು ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ

By kannadanewsnow0912/07/2025 3:02 PM KARNATAKA 1 Min Read

ಬೆಂಗಳೂರು: ಜಾತ್ಯತೀತ ಜನತಾದಳ ಆತ್ಮದಂತೆ ಸೇವಾದಳ ಕೆಲಸ ಮಾಡಬೇಕು ಎಂದು ನಗರ ಜೆಡಿಎಸ್ ಘಟಕದ ಅಧ್ಯಕ್ಷ ಹೆಚ್.ಎಂ. ರಮೇಶ್ ಗೌಡ…

ನೀವು SSLC ಪರೀಕ್ಷೆಯಲ್ಲಿ ಶೇ.95ಕ್ಕೂ ಹೆಚ್ಚು ಅಂಕ ಪಡೆದಿದ್ದೀರಾ? ಈಗಲೇ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ

12/07/2025 3:00 PM

BIG NEWS: ತುಂಬಿದ ಕೊಡ ತುಳಿಕಿತಲೇ ಪರಾಕ್: ವರ್ಷದ ಭವಿಷ್ಯವಾಣಿ ‘ಮೈಲಾರದ ಕಾರ್ಣಿಕ ನುಡಿ’

12/07/2025 2:47 PM

BREAKING: ಕಾಂಗ್ರೆಸ್ ಶಾಸಕರ ಮನಸ್ಸುಗಳು ಕದಲಿದರೆ ಸಿಎಂ ಬದಲಾವಣೆ ಖಚಿತ: ಮೈಲಾರಲಿಂಗೇಶ್ವರ ಕಾರ್ಣಿಕ ನುಡಿ

12/07/2025 2:40 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.