ಬೆಂಗಳೂರು : ಬೆಂಗಳೂರಿನಲ್ಲಿ ಕಾಡಾನೆ ದಾಳಿಗೆ ಫಾರೆಸ್ಟ್ ವಾಚರ್ ಚಿಕ್ಕಮಾದಯ್ಯ ಎಂಬುವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಬನ್ನೇರುಘಟ್ಟದಲ್ಲಿ ಕಾಡಾನೆ ದಾಳಿಗೆ ಫಾರೆಸ್ಟ್ ವಾಚರ್ ಚಿಕ್ಕಮಾದಯ್ಯ ಸಾವನ್ನಪ್ಪಿದ್ದಾರೆ.
ಕಳೆದ 20 ವರ್ಷಗಳಿಂದ ಫಾರೆಸ್ಟ್ ವಾಚರ್ ಆಗಿ ಚಿಕ್ಕಮಾದಯ್ಯ ಕೆಲಸ ಮಾಡುತ್ತಿದ್ದರು. ತಡರಾತ್ರಿ ೧೨.೩೦ ರ ಸುಮಾರಿಗೆ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ಸಾಕಾನೆಗಳ ಗುಂಪಿನ ಜೊತೆಗೆ ಸೇರಿಕೊಂಡಿದ್ದ ಕಾಡನೆ, ನೈಟ್ ಬೀಟ್ ನಲ್ಲಿದ್ದ ಚಿಕ್ಕಮಾದಯ್ಯ ಮೇಲೆ ಏಕಾಏಕಿ ದಾಳಿ ಮಾಡಿದ್ದು, ಚಿಕ್ಕಮಾದಯ್ಯ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.