ಬೆಂಗಳೂರು : ಕಾಂಗ್ರೆಸ್ ಕಾರ್ಯಕರ್ತರ ಸಮಸ್ಯೆಗಳ ಪರಿಹಾರಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಮಹತ್ವದ ಕಾರ್ಯಕರ್ತರ ಸ್ಪಂದನಾ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಹೌದು, ಇಂದು ಬೆಂಗಳೂರಿನ ಕಾಂಗ್ರೆಸ್ ಕಚೇರಿಯ ಭಾರತ್ ಜೋಡೋ ಭವನದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಸ್ಯೆಗಳ ಪರಿಹಾರಕ್ಕಾಗಿ ಕಾಂಗ್ರೆಸ್ ಕಾರ್ಯಕರ್ತರ ಸ್ಪಂದನಾ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಈ ಕುರಿತು ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಪಕ್ಷಕ್ಕಾಗಿ ನಿಷ್ಠೆಯಿಂದ ದುಡಿದಿರುವ ನಿಮ್ಮ ಅಹವಾಲು ಆಲಿಸುವುದು ನಮ್ಮ ಸರ್ಕಾರದ ಕರ್ತವ್ಯವಾಗಿದೆ. ಇಂದು ಬೆಂಗಳೂರಿನ ಕಾಂಗ್ರೆಸ್ ಕಾಂಗ್ರೆಸ್ ಕಚೇರಿಯ ಭಾರತ್ ಜೋಡೋ ಭವನದಲ್ಲಿ ನಾನು ನಿಮ್ಮ ಅಹವಾಲುಗಳಿಗೆ ಕಿವಿಯಾಗಲು ಕಾಯುತ್ತಿರುತ್ತೇನೆ. ಕಾಂಗ್ರೆಸ್ ಪಕ್ಷ ಒಂದು ಕುಟುಂಬದಂತೆ, ನಮ್ಮವರ ಕಷ್ಟಕ್ಕೆ ನೆರವಾಗುವುದು ಕುಟುಂಬದ ಸದಸ್ಯನಾದ ನನ್ನ ಕರ್ತವ್ಯ. ನಾಳೆ ಭಾರತ್ ಜೋಡೋ ಭವನದಲ್ಲಿ ಸಿಗೋಣ ಎಂದು ಟ್ವೀಟ್ ಮಾಡಿದ್ದಾರೆ.
ಕಾಂಗ್ರೆಸ್ ಪಕ್ಷಕ್ಕಾಗಿ ನಿಷ್ಠೆಯಿಂದ ದುಡಿದಿರುವ
ನಿಮ್ಮ ಅಹವಾಲು ಆಲಿಸುವುದು ನಮ್ಮ ಸರ್ಕಾರದ ಕರ್ತವ್ಯವಾಗಿದೆ.ನಾಳೆ ಬೆಂಗಳೂರಿನ ಕಾಂಗ್ರೆಸ್
ಕಾಂಗ್ರೆಸ್ ಕಚೇರಿಯ ಭಾರತ್ ಜೋಡೋ ಭವನದಲ್ಲಿ ನಾನು ನಿಮ್ಮ ಅಹವಾಲುಗಳಿಗೆ ಕಿವಿಯಾಗಲು ಕಾಯುತ್ತಿರುತ್ತೇನೆ.ಕಾಂಗ್ರೆಸ್ ಪಕ್ಷ ಒಂದು ಕುಟುಂಬದಂತೆ,
ನಮ್ಮವರ ಕಷ್ಟಕ್ಕೆ ನೆರವಾಗುವುದು ಕುಟುಂಬದ… pic.twitter.com/FkMNgJuei5— Siddaramaiah (@siddaramaiah) July 12, 2024