Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶ್ರಾವಣ ಮಾಸದಲ್ಲಿ ಮನೆಯ ಗೃಹಪ್ರವೇಶದ ಮುಹೂರ್ತ ನಿಗದಿಪಡಿಸೋ ಮೊದಲು, ತಪ್ಪದೆ ಈ ವಿಧಾನವನ್ನು ಅನುಸರಿಸಿ

30/07/2025 10:21 AM

Breaking: ಸೆನ್ಸೆಕ್ಸ್ 60 ಅಂಕಗಳ ಜಿಗಿತ, 24,800 ಪಾಯಿಂಟ್ ಮೇಲೇರಿದ ನಿಫ್ಟಿ: ಎಲ್ ಅಂಡ್ ಟಿ ಶೇ.3ರಷ್ಟು ಏರಿಕೆ

30/07/2025 10:16 AM

BREAKING : ಪಿಒಕೆ ಮೂಲಕ ಅಕ್ರಮವಾಗಿ ಭಾರತಕ್ಕೆ ನುಸುಳಲು ಯತ್ನಿಸಿದ, ಉಗ್ರನನ್ನು ಹತ್ಯೆಗೈದ ಭಾರತೀಯ ಸೇನೆ

30/07/2025 10:09 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಆರ್ಥಿಕ ಸ್ಥಿತಿ ಉತ್ತಮವಾಗಿದೆ, ಗ್ಯಾರಂಟಿಯಿಂದ ಜನರಿಗೆ ಆರ್ಥಿಕ ಬಲ: MLC ದಿನೇಶ್ ಗೂಳಿಗೌಡ
KARNATAKA

ರಾಜ್ಯದ ಆರ್ಥಿಕ ಸ್ಥಿತಿ ಉತ್ತಮವಾಗಿದೆ, ಗ್ಯಾರಂಟಿಯಿಂದ ಜನರಿಗೆ ಆರ್ಥಿಕ ಬಲ: MLC ದಿನೇಶ್ ಗೂಳಿಗೌಡ

By kannadanewsnow0913/07/2024 5:43 PM

ಬೆಂಗಳೂರು: ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಆರ್ಥಿಕ ಪರಿಸ್ಥಿತಿ ಸಂಕಷ್ಟದಲ್ಲಿದೆ ಎಂಬ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಶ್ರೀ ಬಸವರಾಜ್ ರಾಯರೆಡ್ಡಿ ಅವರು ನೀಡಿದ ಹೇಳಿಕೆ ಆಕ್ಷೇಪಾರ್ಹವಾಗಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಕಳೆದ ಫೆಬ್ರವರಿಯಲ್ಲಿ ಮಂಡಿಸಿದ ಆಯವ್ಯಯವು 3 ಲಕ್ಷ 73 ಸಾವಿರ ಕೋಟಿ ರೂಪಾಯಿ ಇದೆ. ಇದರಲ್ಲಿ ಅಭಿವೃದ್ಧಿ ಕಾರ್ಯಗಳಿಗೆ 1 ಲಕ್ಷ 20 ಸಾವಿರ ಕೋಟಿ ರೂಪಾಯಿಯನ್ನು ಮೀಸಲಿಟ್ಟಿದೆ. ಇನ್ನು ಗ್ಯಾರಂಟಿ ಯೋಜನೆಗಳಿಗೆ 58,000 ಕೋಟಿ ರೂಪಾಯಿಯನ್ನು ಮೀಸಲಿಡಲಾಗಿದೆ. ಇನ್ನು ಸಾಮಾಜಿಕ ಪಿಂಚಣಿ, ಸರ್ಕಾರಿ ನೌಕರರ ವೇತನ, ವಿವಿಧ ಇಲಾಖೆಗಳಿಗೆ ಅನುದಾನ ಹಂಚಿಕೆಯು ಸಹ ಸಮರ್ಪಕವಾಗಿದೆ. ಹೀಗಾಗಿ ಅಭಿವೃದ್ಧಿ ಕಾರ್ಯಗಳಿಗೆ ಅನುದಾನವನ್ನು ಮೀಸಲಿಟ್ಟೇ ಎಲ್ಲ ಚಟುವಟಿಕೆಯನ್ನು ನಡೆಸಲಾಗುತ್ತಿದೆ ಎಂದು ಶಾಸಕರಾದ ದಿನೇಶ್ ಗೂಳಿಗೌಡ ಅವರು ತಿಳಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಪ್ರಕಟಣೆ ನೀಡಿರುವ ಶಾಸಕರಾದ ದಿನೇಶ್ ಗೂಳಿಗೌಡ, ಇಷ್ಟು ಮಾತ್ರವಲ್ಲದೆ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬರುವ ಮೊದಲು ಹೊರಡಿಸಿದ್ದ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಪಕ್ಷವು ಘೋಷಿಸಿದ್ದ 5 ಪ್ರಮುಖ ಗ್ಯಾರಂಟಿ ಯೋಜನೆಗಳ ಸಹಿತ ಇನ್ನಿತರ ಆಶ್ವಾಸನೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯರವರು ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈಡೇರಿಸುತ್ತಾ ಬರುತ್ತಿದ್ದಾರೆ. ಹೀಗೆ ಅಭಿವೃದ್ಧಿ ಕಾರ್ಯಗಳ ಸಹಿತ ಗ್ಯಾರಂಟಿ ಯೋಜನೆಗಳನ್ನು ಸಹ ನಿಲ್ಲಿಸದೇ ರಾಜ್ಯದಲ್ಲಿ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಿಕೊಂಡು ಬರಲಾಗುತ್ತಿದೆ. ಹೀಗಿರುವಾಗ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಸರಿಯಾದ ಮಾಹಿತಿಯನ್ನು ಪಡೆದು ಮಾತನಾಡಬೇಕು ಎಂದು ಸಲಹೆ ನೀಡಿದ್ದಾರೆ.

ರಾಜ್ಯದಲ್ಲಿ ಎಲ್ಲ ಅಭಿವೃದ್ಧಿ ಕಾರ್ಯಗಳು ಸುಗಮವಾಗಿ ನಡೆಯುತ್ತಿರಬೇಕಾದರೆ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಬಸವರಾಜ ರಾಯರೆಡ್ಡಿ ಅವರು ಇಂತಹ ಹೇಳಿಕೆಗಳನ್ನು ನೀಡಬಾರದು. ಈಗಾಗಲೇ ರಾಜ್ಯದಲ್ಲಿ 5 ಗ್ಯಾರಂಟಿಗಳಾದ ಗೃಹಲಕ್ಷ್ಮಿ, ಗೃಹ ಜ್ಯೋತಿ, ಅನ್ನಭಾಗ್ಯ, ಶಕ್ತಿ ಹಾಗೂ ಯುವ ನಿಧಿ ಫಲಾನುಭವಿಗಳಿದ್ದಾರೆ. ಅವರೆಲ್ಲರಿಗೂ ಗ್ಯಾರಂಟಿ ಯೋಜನೆಗಳಿಂದ ಸಂತುಷ್ಟರಾಗಿದ್ದಾರೆ ಎಂದು ಶಾಸಕರು ತಿಳಿಸಿದ್ದಾರೆ.

4 ಕೋಟಿಗೂ ಅಧಿಕ ಜನರಿಗೆ ಲಾಭ

ಗೃಹಲಕ್ಷ್ಮೀ ಯೋಜನೆಯಲ್ಲಿ ಇದುವರೆಗೆ ಪ್ರತಿ ತಿಂಗಳು 1 ಕೋಟಿ, 21 ಲಕ್ಷ 56 ಸಾವಿರ ಕುಟುಂಬಗಳ ಯಜಮಾನಿಯರಿಗೆ ತಲಾ 2 ಸಾವಿರ ರೂ.ನಂತೆ ಈವರೆಗೆ 23 ಸಾವಿರ ಕೋಟಿ ರೂ.‌ಪಾವತಿಸಲಾಗಿದೆ.

ಶಕ್ತಿ ಯೋಜನೆಯಡಿ ರಾಜ್ಯದಲ್ಲಿ ಮಹಿಳೆಯರು 247 ಕೋಟಿ ಬಾರಿಯ ಪ್ರಯಾಣದ ಉಚಿತ ಟಿಕೆಟ್ ಪಡೆದು ರಾಜ್ಯ ಸಾರಿಗೆ ಸಂಸ್ಥೆ ಬಸ್ ಗಳಲ್ಲಿ ಪ್ರಯಾಣಿಸಿದ್ದಾರೆ. ಅದರ ಮೊತ್ತ 6005 ಕೋಟಿ ರೂ.ಗಳಾಗಿವೆ.

ಗೃಹ ಜ್ಯೋತಿ ಯೋಜನೆಯಡಿ 1 ಕೋಟಿ 62 ಲಕ್ಷ ಮನೆಗಳಿಗೆ ತಲಾ 200 ಯೂನಿಟ್ ವಿದ್ಯುತ್ ಉಚಿತವಾಗಿ ನೀಡಲಾಗಿದೆ. ಪ್ರತಿ ತಿಂಗಳು ಸುಮಾರು 900 ಕೋಟಿಯಂತೆ ಇದುವರೆಗೆ 10500 ಕೋಟಿ ರೂ.ಗಳನ್ನು ಇದಕ್ಕಾಗಿ ವ್ಯಯಿಸಲಾಗಿದೆ.

ಅನ್ನಭಾಗ್ಯ ಯೋಜನೆಯಲ್ಲಿ 4 ಕೋಟಿ ಜನರಿಗೆ ತಲಾ 5 ಕೆಜಿ ಅಕ್ಕಿಯ ಮೌಲ್ಯವನ್ನು ಹಣದ ರೂಪದಲ್ಲಿ ನೀಡಲಾಗುತ್ತಿದೆ. ಇದುವರೆಗೆ 6800 ಕೋಟಿ ರೂ.ಗಳನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ಜಮಾ ಮಾಡಲಾಗಿದೆ.

ಯುವ ನಿಧಿ ಯೋಜನೆಯಡಿ ಪ್ರತಿ ತಿಂಗಳು 1 ಲಕ್ಷ 45 ಸಾವಿರ ಪದವಿ ಹಾಗೂ ಡಿಪ್ಲೊಮಾ ಮುಗಿಸಿದ ಅಭ್ಯರ್ಥಿಗಳಿಗೆ ಸಹಾಯಧನ ಮಂಜೂರು ಮಾಡಲಾಗುತ್ತಿದೆ ಎಂದು ದಿನೇಶ್ ಗೂಳಿಗೌಡ ಅವರು ವಿವರಿಸಿದ್ದಾರೆ.

ಇಂಥ ಹೇಳಿಕೆಗೆ ಕಡಿವಾಣ ಹಾಕಲು ಮನವಿ

ರಾಜ್ಯದ 223 ತಾಲೂಕುಗಳಲ್ಲಿ ತೀವ್ರತರದ ಬರ ಪರಿಸ್ಥಿತಿ ಇತ್ತು. ಆದರೆ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಜನರಿಗೆ ಬರೆದ ಬಿಸಿ ಅಷ್ಟಾಗಿ ತಟ್ಟಲಿಲ್ಲ. ಗ್ಯಾರಂಟಿ ಯೋಜನೆಗಳ ಬಗ್ಗೆ ರಾಜ್ಯದ ಜನತೆಯೇ ಕೊಂಡಾಡುತ್ತಿರುವಾಗ ಇಂತಹ ಗೊಂದಲಮಯ ಹೇಳಿಕೆಯನ್ನು ಯಾರೂ ಸಹ ನೀಡಬಾರದು. ಇಂತಹ ಹೇಳಿಕೆಗಳನ್ನು ಮುಂದೆ ಯಾರೂ ನೀಡದಂತೆ ಕೂಡಲೇ ಸಿಎಂ ಸಿದ್ದರಾಮಯ್ಯ ಅವರು ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕಡಿವಾಣ ಹಾಕಬೇಕು ಎಂದು ಮನವಿ ಮಾಡಿದ್ದಾರೆ.

2011ರಲ್ಲಿ ‘ಮೂಡಾ ನಿವೇಶನ ಅಕ್ರಮ’ ಹಂಚಿಕೆ ಕುರಿತು ಬಿಜೆಪಿಯಿಂದ ‘ಜೆಡಿಎಸ್’ ಮೇಲೆ ಗುರುತರ ಆರೋಪ

KPCC ಕಚೇರಿಯ ಸ್ವಚ್ಛತಾ ಸಿಬ್ಬಂದಿಗಳಿಗೆ ಗುಡ್ ನ್ಯೂಸ್: ಮನೆ ನೀಡಲು ಸಿಎಂ ಸಿದ್ಧರಾಮಯ್ಯ ಸೂಚನೆ

Share. Facebook Twitter LinkedIn WhatsApp Email

Related Posts

ಶ್ರಾವಣ ಮಾಸದಲ್ಲಿ ಮನೆಯ ಗೃಹಪ್ರವೇಶದ ಮುಹೂರ್ತ ನಿಗದಿಪಡಿಸೋ ಮೊದಲು, ತಪ್ಪದೆ ಈ ವಿಧಾನವನ್ನು ಅನುಸರಿಸಿ

30/07/2025 10:21 AM4 Mins Read

BIG NEWS : ಧರ್ಮಸ್ಥಳದಲ್ಲಿ ಅಸ್ತಿಪಂಜರಗಳ ಶೋಧ ಕಾರ್ಯ ಇಂದೂ ಕೂಡ ಮುಂದುವರಿಕೆ : ಮತ್ತೆ 3 ತಂಡ ರಚಿಸಿದ ‘SIT

30/07/2025 10:02 AM1 Min Read

BREAKING : ನಟ ಪ್ರಥಮ್ ಗೆ ಕೊಲೆ ಬೆದರಿಕೆ ಆರೋಪ ಕೇಸ್ : `ಬೇಕರಿ ರಘು’ ಸೇರಿ ಇತರರ ವಿರುದ್ಧ `FIR’ ದಾಖಲು.!

30/07/2025 9:27 AM1 Min Read
Recent News

ಶ್ರಾವಣ ಮಾಸದಲ್ಲಿ ಮನೆಯ ಗೃಹಪ್ರವೇಶದ ಮುಹೂರ್ತ ನಿಗದಿಪಡಿಸೋ ಮೊದಲು, ತಪ್ಪದೆ ಈ ವಿಧಾನವನ್ನು ಅನುಸರಿಸಿ

30/07/2025 10:21 AM

Breaking: ಸೆನ್ಸೆಕ್ಸ್ 60 ಅಂಕಗಳ ಜಿಗಿತ, 24,800 ಪಾಯಿಂಟ್ ಮೇಲೇರಿದ ನಿಫ್ಟಿ: ಎಲ್ ಅಂಡ್ ಟಿ ಶೇ.3ರಷ್ಟು ಏರಿಕೆ

30/07/2025 10:16 AM

BREAKING : ಪಿಒಕೆ ಮೂಲಕ ಅಕ್ರಮವಾಗಿ ಭಾರತಕ್ಕೆ ನುಸುಳಲು ಯತ್ನಿಸಿದ, ಉಗ್ರನನ್ನು ಹತ್ಯೆಗೈದ ಭಾರತೀಯ ಸೇನೆ

30/07/2025 10:09 AM

BIG NEWS : ಧರ್ಮಸ್ಥಳದಲ್ಲಿ ಅಸ್ತಿಪಂಜರಗಳ ಶೋಧ ಕಾರ್ಯ ಇಂದೂ ಕೂಡ ಮುಂದುವರಿಕೆ : ಮತ್ತೆ 3 ತಂಡ ರಚಿಸಿದ ‘SIT

30/07/2025 10:02 AM
State News
KARNATAKA

ಶ್ರಾವಣ ಮಾಸದಲ್ಲಿ ಮನೆಯ ಗೃಹಪ್ರವೇಶದ ಮುಹೂರ್ತ ನಿಗದಿಪಡಿಸೋ ಮೊದಲು, ತಪ್ಪದೆ ಈ ವಿಧಾನವನ್ನು ಅನುಸರಿಸಿ

By kannadanewsnow0530/07/2025 10:21 AM KARNATAKA 4 Mins Read

ಗೃಹಪ್ರವೇಶಕ್ಕೆ ಮನೆ ಯಜಮಾನನ ಜಾತಕವನ್ನು ನೋಡಿ ಮುಹೂರ್ತವನ್ನು ನಿಷ್ಕರ್ಷೆ ಮಾಡಬೇಕು ಆದರೆ ಸ್ಥೂಲವಾಗಿ ವಾರ ತಿಥಿ ನಕ್ಷತ್ರ ಲಗ್ನ ಕಾಲ…

BIG NEWS : ಧರ್ಮಸ್ಥಳದಲ್ಲಿ ಅಸ್ತಿಪಂಜರಗಳ ಶೋಧ ಕಾರ್ಯ ಇಂದೂ ಕೂಡ ಮುಂದುವರಿಕೆ : ಮತ್ತೆ 3 ತಂಡ ರಚಿಸಿದ ‘SIT

30/07/2025 10:02 AM

BREAKING : ನಟ ಪ್ರಥಮ್ ಗೆ ಕೊಲೆ ಬೆದರಿಕೆ ಆರೋಪ ಕೇಸ್ : `ಬೇಕರಿ ರಘು’ ಸೇರಿ ಇತರರ ವಿರುದ್ಧ `FIR’ ದಾಖಲು.!

30/07/2025 9:27 AM

BIG NEWS: ಪತಿಯು ಪತ್ನಿಯ ಜೊತೆಗೆ ಇರದಿದ್ದರೂ ‘ವಿಮಾ ಪರಿಹಾರ’ಕ್ಕೆ ಅರ್ಹ : ಹೈಕೋರ್ಟ್ ಮಹತ್ವದ ತೀರ್ಪು

30/07/2025 9:19 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.