ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಕೃಷಿ ಹೊಂಡಕ್ಕೆ ಹಾರಿ ಪ್ರೇಮಿಗಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಎಂ.ಮುದ್ದಲಹಳ್ಳಿ ಗ್ರಾಮದಲ್ಲಿ ಕೃಷಿ ಹೊಂಡಕ್ಕೆ ಹಾರಿ ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಆತ್ಮಹತ್ಯೆಗೆ ಶರಣಾ ಪ್ರೇಮಿಗಳನ್ನು ಎಂ.ಮುದ್ದಲಹಳ್ಳಿ ಗ್ರಾಮದ ವೇಣು ಹಾಗೂ ಕಾಚಹಳ್ಳಿ ಗ್ರಾಮದ ಅನುಷಾ ಎಂದು ಗುರುತಿಸಲಾಗಿದೆ. ಜಾತಿ ನೆಪವೊಡ್ಡಿ ಮದುವೆಗೆ ಪೋಷಕರು ನಿರಾಕರಿಸಿದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.