Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪ್ರಧಾನಿ ಮೋದಿ ಪದವಿ ವಿವರಗಳನ್ನು ಬಹಿರಂಗಪಡಿಸುವಂತೆ CIC ನೀಡಿದ್ದ ಆದೇಶವನ್ನು ರದ್ದುಪಡಿಸಿದ ದೆಹಲಿ ಹೈಕೋರ್ಟ್

26/08/2025 8:09 AM

BREAKING : ರೌಡಿ ಶೀಟರ್ `ಬಿಕ್ಲು ಶಿವ’ ಕೊಲೆ ಕೇಸ್ : ಪ್ರಮುಖ ಆರೋಪಿ `ಜಗದೀಶ್ ಅಲಿಯಾಸ್ ಜಗ್ಗ’ ಅರೆಸ್ಟ್.!

26/08/2025 8:07 AM
Sujatha Bhatt moves to withdraw daughter's missing case

BREAKING : `ಅನನ್ಯಾ ಭಟ್’ ನಾಪತ್ತೆ ಕೇಸ್ : ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ `SIT’ ಕಚೇರಿಗೆ ಬಂದ ಸುಜಾತಾ ಭಟ್.!

26/08/2025 8:02 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೀದಿಯಲ್ಲಿ ಹಿಟ್ ಅಂಡ್ ರನ್ ಮಾಡುವುದಲ್ಲ, ಮಾಧ್ಯಮಗಳಲ್ಲಿ ಚರ್ಚೆಗೆ ಬರಲಿ: HDKಗೆ ಡಿಕೆಶಿ ಸವಾಲು
KARNATAKA

ಬೀದಿಯಲ್ಲಿ ಹಿಟ್ ಅಂಡ್ ರನ್ ಮಾಡುವುದಲ್ಲ, ಮಾಧ್ಯಮಗಳಲ್ಲಿ ಚರ್ಚೆಗೆ ಬರಲಿ: HDKಗೆ ಡಿಕೆಶಿ ಸವಾಲು

By kannadanewsnow0915/07/2024 3:03 PM

ಬೆಂಗಳೂರು : “ಕುಮಾರಸ್ವಾಮಿ ಜೀವನ ಬರೀ ಹಿಟ್ ಅಂಡ್ ರನ್ ಮಾಡುವುದೇ ಆಗಿದೆ. ಅವರು ಬೀದಿಯಲ್ಲಿ ಹಿಟ್ ಅಂಡ್ ರನ್ ಮಾಡುವ ಬದಲು ಮಾಧ್ಯಮಗಳಲ್ಲಿ ಚರ್ಚೆಗೆ ಬರಲಿ, ಇಲ್ಲವೇ ಅವರ ಶಾಸಕರಿಂದ ಸದನದಲ್ಲಿ ಚರ್ಚೆ ಮಾಡಿಸಲಿ ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ಸಚಿವ ಕುಮಾರಸ್ವಾಮಿಗೆ ಸವಾಲೆಸೆದರು.

ಕಸ ವಿಲೇವಾರಿ ಟೆಂಡರ್ ನಲ್ಲಿ 15 ಸಾವಿರ ಕೋಟಿ ಲಂಚ ಪಡೆಯಲಾಗಿದೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಮಾಧ್ಯಮಗಳು ಸೋಮವಾರ ಗಮನ ಸೆಳೆದಾಗ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, “ಕುಮಾರಸ್ವಾಮಿ ಹತಾಶೆಯಲ್ಲಿದ್ದಾರೆ. ಅವರು ಬಹಿರಂಗ ಚರ್ಚೆಗೆ ಬರಲಿ. ಡಿ.ಕೆ. ಶಿವಕುಮಾರ್ ಅವರಂತೆ ಹಿಟ್ ಅಂಡ್ ರನ್ ಮಾಡುವುದಿಲ್ಲ. ಕಸದ ಲಾರಿ ಹೊಡೆಯುತ್ತಿದ್ದವರು ಅವರು. ಅವರ ಸಹೋದರ ಹಾಗೂ ಅವರ ಪಕ್ಷದ ಸದಸ್ಯರಿಗೆ ದಾಖಲೆ ಕೊಟ್ಟು ಸದನದಲ್ಲಿ ಚರ್ಚೆ ಮಾಡಲಿ. ಕಿಂಗ್ ಆಫ್ ಕರಪ್ಶನ್ ಎಂದು ಜನ ನನ್ನನ್ನಾಗಲಿ, ನನ್ನ ಕುಟುಂಬದವರನ್ನು ಕರೆದಿಲ್ಲ. ಆ ರೀತಿ ಯಾರನ್ನು ಕರೆದಿದ್ದಾರೆ ಎಂದು ಚರ್ಚೆಗೆ ಬರಲಿ ತಿಳಿಸುತ್ತೇನೆ. ಇವರು ಚರ್ಚೆಗೆ ಬರಲಿ. ನಾನು ಅವರ ಚರಿತ್ರೆ ತೆಗೆಯುತ್ತೇನೆ. ಎಲ್ಲವೂ ದಾಖಲೆಯಲ್ಲಿ ಉಳಿಯಲಿ” ಎಂದು ವಾಗ್ದಾಳಿ ನಡೆಸಿದರು.

ಬಿಜೆಪಿ ಹಗರಣಗಳ ಪಿತಾಮಹ:

ಇಂದಿನಿಂದ ಆರಂಭವಾಗಲಿರುವ ಮುಂಗಾರು ಅಧಿವೇಶನದಲ್ಲಿ ಹಗರಣಗಳ ಬಗ್ಗೆ ಬಿಜೆಪಿ ಸದನದ ಹೊರಗೆ ಹೋರಾಟ ಮಾಡುತ್ತಿರುವ ಬಗ್ಗೆ ಕೇಳಿದಾಗ, “ಅವರು ಸದನದ ಹೊರಗೆ ಯಾಕೆ ಹೋರಾಟ ಮಾಡುತ್ತಿದ್ದಾರೆ? ಸದನದ ಒಳಗೆ ಹೋರಾಟ ಮಾಡಲಿ. ಅವರು ಏನು ಹೇಳಬೇಕೋ ಸದನದ ಒಳಗೆ ಹೇಳಲಿ. ನಾವು ಏನು ಉತ್ತರ ಕೊಡಬೇಕೋ ಕೊಡುತ್ತೇವೆ. ನಮಗೂ ಅವರ ಬಗ್ಗೆ ಗೊತ್ತಿದೆ. ಎಲ್ಲವನ್ನೂ ಒಂದೊಂದಾಗಿ ಬಿಚ್ಚಿಡುತ್ತೇವೆ” ಎಂದು ಶಿವಕುಮಾರ್ ಅವರು ತಿಳಿಸಿದರು.

ಈ ವಿಚಾರವಾಗಿ ವಿಧಾನಸೌಧದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು “ಮುಡಾ ಹಗರಣ ಸೇರಿದಂತೆ ಹಲವಾರು ಹಗರಣಗಳು ನಡೆದಿರುವುದು ಬಿಜೆಪಿ ಕಾಲದಲ್ಲಿ. ಬಿಜೆಪಿ ಭ್ರಷ್ಟಾಚಾರದ ತಂದೆ. ಅವರ ಆಡಳಿತ ಅವಧಿಯಲ್ಲಿ ಭ್ರಷ್ಟಾಚಾರದ ಸರಮಾಲೆಯೇ ನಡೆದಿದೆ. ಭ್ರಷ್ಟಾಚಾರ ರಹಿತ ಆಡಳಿತ ಮತ್ತು ಆಡಳಿತ ಶುದ್ಧೀಕರಣ ಮಾಡುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ ” ಎಂದು ತಿಳಿಸಿದರು.

” ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರ ರಹಿತ ಆಡಳಿತ ನೀಡುತ್ತಿರುವುದು ನೋಡಿ ಮೈ ಪರಿಚಿಕೊಳ್ಳುತ್ತಿದ್ದಾರೆ. ಅವರುಗಳು ಹಣ್ಣನ್ನು ತಿಂದು ಸಿಪ್ಪೆಯನ್ನು ನಮ್ಮ ಮೇಲೆ ಹಎಸೆಯುವ ಪ್ರಯತ್ನ ಮಾಡುತ್ತಿದ್ದಾರೆ. ಅವರು ಏನು ಬೇಕಾದರು ಹೇಳಿಕೊಳ್ಳಲಿ. ಪಾರ್ಲಿಮೆಂಟಿನಲ್ಲಿ ಏನು ಬೇಕಾದರೂ ಮಾಡಿಕೊಳ್ಳಲಿ. ಕರ್ನಾಟಕದಲ್ಲಿ ಅವರ ಆಟ ನಡೆಯುವುದಿಲ್ಲ” ಎಂದು ತೀವ್ರ ವಾಗ್ದಾಳಿ ನಡೆಸಿದರು.

ಮುಡಾ ಹಗರಣದ ಬಗ್ಗೆ ಸಿಬಿಐ ತನಿಖೆ ನಡೆಸುವ ಬದಲು ನ್ಯಾಯಾಂಗ ತನಿಖೆ ನಡೆಸುತ್ತಿರುವುದು ಕಣ್ಣೊರೆಸುವ ತಂತ್ರ ಎನ್ನುವ ಆರೋಪದ ಬಗ್ಗೆ ಕೇಳಿದಾಗ “ಪ್ರತಿಪಕ್ಷಗಳು ಹೇಳಿದಂತೆ ಕೇಳಲಾಗುತ್ತದೆಯೇ? ಜನರು ನಮಗೆ ಅಧಿಕಾರ ಕೊಟ್ಟಿದ್ದಾರೆ. ನಾವು ಈ ರಾಜ್ಯಕ್ಕೆ ಏನು ಒಳ್ಳೆಯದನ್ನು ಮಾಡಬೇಕೊ ಅದನ್ನು ಮಾಡುತ್ತೇವೆ” ಎಂದರು.

ಕೆ ಎಸ್ ಆರ್ ಟಿಸಿ ಬಸ್ ಪ್ರಯಾಣದರ ಏರಿಕೆ ವಿಚಾರವಾಗಿ ಕೇಳಿದಾಗ ” ಇದಕ್ಕೆ ಸಾರಿಗೆ ಸಚಿವರು ಉತ್ತರ ನೀಡುತ್ತಾರೆ” ಎಂದು ಹೇಳಿದರು.

ಅಗಲಿದ ಗಣ್ಯರಿಗೆ ವಿಧಾನಸಭೆಯಲ್ಲಿ ಸಂತಾಪ ಸೂಚಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್

HD ಕುಮಾರಸ್ವಾಮಿ ಸರ್ವಪಕ್ಷ ಸಭೆಗೆ ಬರದೇ ‘ಬಾಡೂಟಕ್ಕೆ’ ಹೋಗಿದ್ದು ದುರಂತ : ಸಚಿವ ಚೆಲುವರಾಯಸ್ವಾಮಿ

Share. Facebook Twitter LinkedIn WhatsApp Email

Related Posts

BREAKING : ರೌಡಿ ಶೀಟರ್ `ಬಿಕ್ಲು ಶಿವ’ ಕೊಲೆ ಕೇಸ್ : ಪ್ರಮುಖ ಆರೋಪಿ `ಜಗದೀಶ್ ಅಲಿಯಾಸ್ ಜಗ್ಗ’ ಅರೆಸ್ಟ್.!

26/08/2025 8:07 AM1 Min Read
Sujatha Bhatt moves to withdraw daughter's missing case

BREAKING : `ಅನನ್ಯಾ ಭಟ್’ ನಾಪತ್ತೆ ಕೇಸ್ : ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ `SIT’ ಕಚೇರಿಗೆ ಬಂದ ಸುಜಾತಾ ಭಟ್.!

26/08/2025 8:02 AM1 Min Read

BIG NEWS : ರಾಜ್ಯದಲ್ಲಿ `ಗಣೇಶ ಮೂರ್ತಿ’ ಪ್ರತಿಷ್ಠಾಪನೆ, ವಿಸರ್ಜನೆಗೆ ಈ ನಿಯಮಗಳ ಪಾಲನೆ ಕಡ್ಡಾಯ | Ganesha Chaturthi

26/08/2025 7:57 AM1 Min Read
Recent News

ಪ್ರಧಾನಿ ಮೋದಿ ಪದವಿ ವಿವರಗಳನ್ನು ಬಹಿರಂಗಪಡಿಸುವಂತೆ CIC ನೀಡಿದ್ದ ಆದೇಶವನ್ನು ರದ್ದುಪಡಿಸಿದ ದೆಹಲಿ ಹೈಕೋರ್ಟ್

26/08/2025 8:09 AM

BREAKING : ರೌಡಿ ಶೀಟರ್ `ಬಿಕ್ಲು ಶಿವ’ ಕೊಲೆ ಕೇಸ್ : ಪ್ರಮುಖ ಆರೋಪಿ `ಜಗದೀಶ್ ಅಲಿಯಾಸ್ ಜಗ್ಗ’ ಅರೆಸ್ಟ್.!

26/08/2025 8:07 AM
Sujatha Bhatt moves to withdraw daughter's missing case

BREAKING : `ಅನನ್ಯಾ ಭಟ್’ ನಾಪತ್ತೆ ಕೇಸ್ : ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ `SIT’ ಕಚೇರಿಗೆ ಬಂದ ಸುಜಾತಾ ಭಟ್.!

26/08/2025 8:02 AM

BIG NEWS : ರಾಜ್ಯದಲ್ಲಿ `ಗಣೇಶ ಮೂರ್ತಿ’ ಪ್ರತಿಷ್ಠಾಪನೆ, ವಿಸರ್ಜನೆಗೆ ಈ ನಿಯಮಗಳ ಪಾಲನೆ ಕಡ್ಡಾಯ | Ganesha Chaturthi

26/08/2025 7:57 AM
State News
KARNATAKA

BREAKING : ರೌಡಿ ಶೀಟರ್ `ಬಿಕ್ಲು ಶಿವ’ ಕೊಲೆ ಕೇಸ್ : ಪ್ರಮುಖ ಆರೋಪಿ `ಜಗದೀಶ್ ಅಲಿಯಾಸ್ ಜಗ್ಗ’ ಅರೆಸ್ಟ್.!

By kannadanewsnow5726/08/2025 8:07 AM KARNATAKA 1 Min Read

ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನಲ್ಲಿ ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪ್ರಮುಖ…

Sujatha Bhatt moves to withdraw daughter's missing case

BREAKING : `ಅನನ್ಯಾ ಭಟ್’ ನಾಪತ್ತೆ ಕೇಸ್ : ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ `SIT’ ಕಚೇರಿಗೆ ಬಂದ ಸುಜಾತಾ ಭಟ್.!

26/08/2025 8:02 AM

BIG NEWS : ರಾಜ್ಯದಲ್ಲಿ `ಗಣೇಶ ಮೂರ್ತಿ’ ಪ್ರತಿಷ್ಠಾಪನೆ, ವಿಸರ್ಜನೆಗೆ ಈ ನಿಯಮಗಳ ಪಾಲನೆ ಕಡ್ಡಾಯ | Ganesha Chaturthi

26/08/2025 7:57 AM

ರಾಜ್ಯದ ಬಡ ಜನತೆಗೆ ಗುಡ್ ನ್ಯೂಸ್ : `BPL’ ಕುಟುಂಬದವರಿಗೆ ಉಚಿತ `MRI’ ಸ್ಕ್ಯಾನ್.!

26/08/2025 7:44 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.