ಬೆಂಗಳೂರು : ಬೆಂಗಳೂರಿನಲ್ಲಿ ಪುಂಡರು ಅಟ್ಟಹಾಸ ಮೆರೆದಿದ್ದು, ಪೊಲೀಸರು ಎಷ್ಟೇ ಕಠಿಣವಾದಂತ ಕ್ರಮ ಕೈಗೊಂಡರು ಕೂಡ ಅವರ ಅಟ್ಟಹಾಸ ನಿಂತಿಲ್ಲ. ಇದೀಗ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಠಾಣೆಯ ಸಮೀಪದಲ್ಲಿ ಮನೆಯ ಮುಂದೆ ನಿಲ್ಲಿಸಿದ ಕಾರಿನ ಮೇಲೆ ದಾಳಿ ಮಾಡಿದ್ದು, ಕಾರಿನ ಗಾಜು ಪುಡಿ ಪುಡಿ ಮಾಡಿ ಅಲ್ಲಿಂದ ಪರಾರಿಯಾಗಿರುವ ಘಟನೆ ನಡೆದಿದೆ.
ಹೌದು ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ಗಾಜು ಪುಡಿ ಪುಡಿ ಮಾಡಿದ ಪುಂಡರು, ಲಾಂಗ್ ನಿಂದ ಕಾರಿನ ಮೇಲೆ ದಾಳಿ ಮಾಡಿ ಗಾಜು ಪುಡಿಪುಡಿ ಮಾಡಿದ್ದಾರೆ. ಕಾರಿನಲ್ಲಿ ಬಂದ ಸುಕೀಲ್ ಗೌಡ ಹಾಗೂ ಕಪಿಲ್ ಪುರೋಹಿತ್ ಎಂಬುವವರಿಂದ ಈ ಒಂದು ಕೃತ್ಯ ನಡೆದಿದೆ ಎಂದು ತಿಳಿದುಬಂದಿದೆ.
ಕುಡಿದ ಮತ್ತಿನಲ್ಲಿ ಆರೋಪಿಗಳು ಬಂದು ಈ ರೀತಿ ಪುಂಡಾಟ ನಡೆಸಿ ಅಲ್ಲಿಂದ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಒಂದು ಘಟನೆ ಅನ್ನಪೂರ್ಣೇಶ್ವರಿ ನಗರ ಠಾಣೆಯ ಸಮೀಪದಲ್ಲಿಯೇ ನಡೆದಿರುವಂತದ್ದು, ಹಾಗಾಗಿ ಘಟನೆ ಕುರಿತಂತೆ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ಈ ಕುರಿತು FIR ದಾಖಲಾಗಿದೆ.