ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಣಕಾಸಿನ ಅವ್ಯವಹಾರದಲ್ಲಿ ಸಿಬಿಐ ಮತ್ತು ಇಡಿ ತನಿಖಾ ಸಂಸ್ಥೆಗಳು ರಾಜಕೀಯ ದುರುದ್ದೇಶದಿಂದ ಮಧ್ಯಪ್ರವೇಶ ಮಾಡಿವೆ. ವಿಚಾರಣೆಗೆ ಹಾಜರಾಗುತ್ತಿರುವವರ ಮೇಲೆ ನನ್ನ ಹೆಸರು ಹೇಳುವಂತೆ ಬೆದರಿಕೆಯೊಡ್ಡಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಈ ಕುರಿತು ಟ್ವೀಟ್ ಸಿಎಂ ಸಿದ್ದರಾಮಯ್ಯ, ವಾಲ್ಮೀಕಿ ಅಭಿವೃದ್ಧಿ ನಿಗಮದ ಅನುದಾನ ದುರ್ಬಳಕೆ ಪ್ರಕರಣದಲ್ಲಿ ಎಸ್ಐಟಿ, ಇಡಿ ಹಾಗೂ ಸಿಬಿಐ ತನಿಖೆ ನಡೆಯುತ್ತಿದೆ. ಅಕ್ರಮವಾಗಿ ವರ್ಗಾವಣೆ ಮಾಡಲಾಗಿದ್ದ ಅರ್ಧದಷ್ಟು ಹಣವನ್ನು ಎಸ್ಐಟಿ ಮೂಲಕ ನಿಗಮದ ಖಾತೆಗೆ ಮರಳಿ ತರಲಾಗಿದ್ದು, ಶೋಷಿತ ಸಮುದಾಯಕ್ಕೆ ಮೀಸಲಾದ ಒಂದು ರೂಪಾಯಿ ಕೂಡ ಇತರರ ಪಾಲಾಗದಂತೆ ತಡೆಯುವ ಪ್ರಯತ್ನಗಳು ನಡೆಯುತ್ತಿವೆ ಎಂದಿದ್ದಾರೆ.
ಕೇವಲ ರಾಜಕೀಯ ದುರುದ್ದೇಶದಿಂದ ವಿಪಕ್ಷಗಳು ನನ್ನ ರಾಜೀನಾಮೆಗೆ ಒತ್ತಾಯಿಸುತ್ತಿವೆಯೇ ವಿನಃ ಈ ಹಗರಣದಲ್ಲಿ ನನ್ನ ಪಾತ್ರವಿಲ್ಲ. ಈ ವಿಷಯ ವಿಪಕ್ಷಗಳ ನಾಯಕರಿಗೂ ತಿಳಿದಿದೆ ಎಂದು ಹೇಳಿದ್ದಾರೆ.