ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಗೆ ನಟ ವಿನೋದ್ ರಾಜ್ ಭೇಟಿಯಾಗಿದ್ದಾರೆ.
ಇಂದು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಅವರನ್ನು ಭೇಟಿಯಾಗಿ ಹಣ್ಣುಗಳನ್ನು ನೀಡಿದ್ದಾರೆ. ಬಳಿಕ ದರ್ಶನ್ ಆರೋಗ್ಯ ವಿಚಾರಿಸಿದ್ದಾರೆ.
ದರ್ಶನ್ ಭೇಟಿ ಬಳಿಕ ಮಾತನಾಡಿದ ವಿನೋದ್ ರಾಜ್, ದರ್ಶನ್ ವಿಷಯದಲ್ಲಿ ಹೀಗೆ ಆಗಬಾರದಾಗಿತ್ತು. ತಪ್ಪಾಗಿದ್ದರೆ ಶಿಕ್ಷೆಯಾಗಲಿ. ಕಲಾವಿದ ಅನ್ನುವ ಕಾರಣಕ್ಕೆ ನೋಡಲು ಬಂದಿದ್ದೆ ಎಂದು ತಿಳಿಸಿದ್ದಾರೆ.