Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದ ಜನತೆಗೆ ಶಾಸಕ ಗೋಪಾಲಕೃಷ್ಣ ಬೇಳೂರು ಗುಡ್ ನ್ಯೂಸ್ | Namma Clinic

04/06/2025 10:01 PM

ಯಾವ ವಯಸ್ಸಿನ ಜನರು ಎಷ್ಟು ‘ನೀರು’ ಕುಡಿಯಬೇಕು ಗೊತ್ತಾ.?

04/06/2025 9:41 PM

BREAKING: ರಾಜ್ಯದಲ್ಲಿಂದು ಕೊರೋನಾಗೆ ಮತ್ತಿಬ್ಬರು ಬಲಿ: 153 ಜನರಿಗೆ ಸೋಂಕು ದೃಢ | Covid19 Update

04/06/2025 9:06 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ತಮಿಳುನಾಡಿಗೆ ಕಾವೇರಿ ನದಿಯಿಂದ ’30 TMC ನೀರು’ ಹರಿಸಲಾಗಿದೆ: ಡಿಸಿಎಂ ಡಿ.ಕೆ.ಶಿವಕುಮಾರ್
KARNATAKA

ತಮಿಳುನಾಡಿಗೆ ಕಾವೇರಿ ನದಿಯಿಂದ ’30 TMC ನೀರು’ ಹರಿಸಲಾಗಿದೆ: ಡಿಸಿಎಂ ಡಿ.ಕೆ.ಶಿವಕುಮಾರ್

By kannadanewsnow0922/07/2024 2:18 PM

ಮಂಡ್ಯ/ ಬೆಂಗಳೂರು : “ಬಿಳಿಗುಂಡ್ಲುವಿನಲ್ಲಿ ದಾಖಲಾದಂತೆ ಇದುವರೆಗು ತಮಿಳುನಾಡಿಗೆ 30 ಟಿಎಂಸಿ ನೀರನ್ನು ಹರಿಸಲಾಗಿದೆ. 10 ಟಿಎಂಸಿ ನೀರನ್ನು ಹರಿಸಿದರೆ ಸಾಮಾನ್ಯ ವರ್ಷದಲ್ಲಿ 40 ಟಿಎಂಸಿ ನೀರು ಹರಿಸಿದಂತಾಗುತ್ತದೆ. ನಿತ್ಯ 51 ಸಾವಿರ ಕ್ಯೂಸೆಕ್ಸ್ ನೀರನ್ನು ಕಾವೇರಿ ಜಲಾನಯನ ಪ್ರದೇಶದಿಂದ ಹರಿಸಲಾಗುತ್ತಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಕೆಆರ್ ಎಸ್ ಅಣೆಕಟ್ಟು ವೀಕ್ಷಣೆ ನಂತರ ಅಣೆಕಟ್ಟೆ ಬಳಿ ಮತ್ತು ವಿಧಾನಸೌಧದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಸೋಮವಾರ ಮಾತನಾಡಿದ ಡಿಸಿಎಂ ಅವರು, “ಕಾವೇರಿ ಜಲಾನಯನ ಪ್ರದೇಶಗಳಲ್ಲಿ 1,657 ಕೆರೆಗಳಿವೆ. ಮುಂಜಾಗ್ರತ ಕ್ರಮವಾಗಿ ಎಲ್ಲಾ ಕೆರೆಗಳನ್ನು ತುಂಬಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕೃಷಿ ಸಚಿವರ ನೇತೃತ್ವದಲ್ಲಿ 2 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡುವ ಗುರಿ ಹೊಂದಲಾಗಿದೆ. 5.90 ಲಕ್ಷ ಕ್ವಿಂಟಾಲ್ ಬಿತ್ತನೆ ಬೀಜ, 27 ಲಕ್ಷ ಟನ್ ರಸಗೊಬ್ಬರ ಸಂಗ್ರಹ, 30 ಲಕ್ಷ ರೈತರಿಗೆ ಸಹಕಾರಿ ಸಂಘಗಳಿಂದ ತಲಾ 25 ಸಾವಿರ ಕೋಟಿ ರೂ. ಸಾಲ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ” ಎಂದು ತಿಳಿಸಿದರು.

“ನಮ್ಮ ಸರ್ಕಾರ ರೈತರ ಬದುಕಿಗೆ ಪೂರಕವಾಗಿದೆ. ರೈತರ ಹಿತ ಕಾಯಲು ಬದ್ದತೆ ಹೊಂದಿದ್ದೇವೆ. ನಮ್ಮದು ಬೂಟಾಟಿಕೆಯ ಮಾತಲ್ಲ. ಪ್ರಚಾರಕ್ಕೆ ಮಾಡುವುದಲ್ಲ, ನಮ್ಮ ವಿಚಾರ, ಆಚಾರ ಎಲ್ಲವೂ ರೈತರ ಪರ. ಕಾವೇರಿ ನೀರು ನಿರ್ವಹಣಾ ಸಮಿತಿಯು ಜುಲೈ 11 ರಿಂದ 30 ರ ತನಕ 20 ಟಿಎಂಸಿ ನೀರನ್ನು ಹರಿಸಬೇಕು ಎಂದು ಆದೇಶ ನೀಡಿತ್ತು. ಆದರೆ ನಾವು ನೀರನ್ನು ಹರಿಸಲಿಲ್ಲ. ನಮ್ಮ ಸರ್ಕಾರ ಜವಾಬ್ದಾರಿಯಿಂದ ನಡೆದುಕೊಂಡು ಸರ್ವಪಕ್ಷ ಸಭೆ ಕರೆದು ಚರ್ಚೆ ನಡೆಸಿತ್ತು” ಎಂದರು.

“ವರುಣನ ಕೃಪೆ, ತಾಯಿ ಚಾಮುಂಡೇಶ್ವರಿಯ ಆಶೀರ್ವಾದದಿಂದ ಕಾವೇರಿ ತಾಯಿಗೆ ಬಾಗಿನ ಅರ್ಪಿಸುವ ಅವಕಾಶ ದೊರೆತಿದೆ. ಕಳೆದ ವರ್ಷ ಮಳೆ ಕೊರತೆ ಕಾಲದಲ್ಲೂ ರೈತರನ್ನು ಕಾಪಾಡಿದ್ದೆವು. ಜಿಲ್ಲಾ ಉಸ್ತುವಾರಿ ಮಂತ್ರಿಗಳ ಮುಖಂಡತ್ವದಲ್ಲಿ ಅವರ ಬೆಳೆಗಳಿಗೆ ನೀರು ಹರಿಸಿದ್ದೆವು. 200 ಕ್ಕೂ ಹೆಚ್ಚು ತಾಲ್ಲೂಕುಗಳು ಬರಗಾಲ ಎದುರಿಸಿದ್ದವು. ಅಣೆಕಟ್ಟಿನ ಸುರಕ್ಷತೆಯ ದೃಷ್ಟಿಯಿಂದ ಅನೇಕ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ” ಎಂದು ತಿಳಿಸಿದರು.

ಕಾವೇರಿ ಆರತಿ ಆರಂಭಿಸಲು ಚಿಂತನೆ

“ವಾರಣಾಸಿಯಲ್ಲಿ ಗಂಗಾ ಆರತಿ ನಡೆಸಿದಂತೆ, ಕಾವೇರಿ ಆರತಿ ಕಾರ್ಯಕ್ರಮ ಪ್ರಾರಂಭಿಸುವ ಆಲೋಚನೆ ಇದೆ. ಕೊಡಗು, ಮೈಸೂರು ಹಾಗೂ ಕಾವೇರಿ ಪ್ರದೇಶದ ಶಾಸಕರು ಹಾಗು ಅಧಿಕಾರಿಗಳು ಸೇರಿದ 20 ಜನರ ಸಮಿತಿಯನ್ನು ರಚನೆ ಮಾಡಿ, ವಾರಣಾಸಿಯಲ್ಲಿ ನಡೆಯುವ ಗಂಗಾ ಆರತಿ ಹೇಗೆ ನಡೆಯುತ್ತದೆ ಎನ್ನುವ ಬಗ್ಗೆ ಅಧ್ಯಯನ ನಡೆಸಲಾಗುವುದು. ಅಲ್ಲಿಂದ ಒಂದು ತಂಡವನ್ನು ಕರೆದುಕೊಂಡು ಬಂದು ಯಾವ ಜಾಗದಲ್ಲಿ ಕಾವೇರಿ ಆರತಿ ನಡೆಸಬಹುದು ಎಂದು ಜಾಗ ಗುರುತಿಸಲಾಗುವುದು. ಒಂದು ತಿಂಗಳ ಒಳಗಾಗಿ ಈ ಕಾರ್ಯಕ್ರಮ ಮಾಡಲಾಗುವುದು. ಧಾರ್ಮಿಕ ದತ್ತಿ ಇಲಾಖೆ, ಕಾವೇರಿ ನೀರಾವರಿ ನಿಗಮ ಹಾಗೂ ಇತರೇ ಇಲಾಖೆಗಳು ಜಂಟಿಯಾಗಿ ಈ ಕಾರ್ಯಕ್ರಮ ರೂಪಿಸುತ್ತವೆ” ಎಂದು ಹೇಳಿದರು.

ಗ್ರಾಮಗಳನ್ನು ಒಕ್ಕಲೆಬ್ಬಿಸಲಾಗುತ್ತದೆ ಎನ್ನುವ ಆರೋಪದ ಬಗ್ಗೆ ಕೇಳಿದಾಗ “ಯಾರನ್ನೂ ಒಕ್ಕಲೆಬ್ಬಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಈಗ ಇರುವ ಜಮೀನಿನಲ್ಲೆ ಯೋಜನೆ ಮಾಡಲಾಗುವುದು. ಸುರಕ್ಷತೆಯ ದೃಷ್ಟಿಯಿಂದ ಮಧ್ಯದಲ್ಲಿ ಯಾವುದಾದರೂ ಭೂಮಿ ಇದ್ದರೆ ಅದನ್ನು ಪಡೆಯಲಾಗುವುದು. ತಾಂತ್ರಿಕ ಸಮಿತಿ ವರದಿಯ ನಂತರ ತೀರ್ಮಾನ ಮಾಡಲಾಗುವುದು” ಎಂದು ಹೇಳಿದರು.

ಅಂದಾಜು ವೆಚ್ಚದ ಬಗ್ಗೆ ಕೇಳಿದಾಗ, “ಪಿಪಿಪಿ ಮಾದರಿಯಲ್ಲಿ ಬರುವವರು ಎಷ್ಟು ಬಂಡವಾಳ ಹಾಕುತ್ತಾರೆ ಎನ್ನುವುದು ಯಾರಿಗೆ ತಿಳಿದಿದೆ? ನಾನು ಇನೋವ ಕಾರಿನಲ್ಲಿ ಬಂದೆ ಮದ್ದೂರು ಶಾಸಕ ಬೆಂನ್ಜ್ ಕಾರಿನಲ್ಲಿ ಬಂದರು. ರೈತ ಸಂಘದ ಶಾಸಕರು ಸಾಮಾನ್ಯ ಕಾರಿನಲ್ಲಿ ಬಂದರು. ಅವರ ಅನುಕೂಲಕ್ಕೆ ತಕ್ಕಂತೆ ಆಗುತ್ತದೆ” ಎಂದು ಹೇಳಿದರು.

ಅಣೆಕಟ್ಟು ಸುರಕ್ಷತೆಯ ದೃಷ್ಟಿಯಿಂದ ಟ್ರಯಲ್ ಬ್ಲಾಸ್ಟ್ ನಿಲ್ಲಿಸುವ ಬಗ್ಗೆ ಕೇಳಿದಾಗ “ಅಣೆಕಟ್ಟಿನ ಸುರಕ್ಷತೆಯ ದೃಷ್ಟಿಯಲ್ಲಿ ರಾಜಿಯಾಗುವ ಪ್ರಶ್ನೆಯೇ ಇಲ್ಲ. ನಮಗೆ ಎಲ್ಲಿ ಬೇಕಾದರೂ ಕಲ್ಲು ಸಿಗುತ್ತದೆ. ಡ್ಯಾಂ ಮತ್ತೆ ಸಿಗುವುದಿಲ್ಲ. ಜಿಲ್ಲಾ ಸಚಿವರು ಮುಖ್ಯಮಂತ್ರಿಗಳ ಗಮನಕ್ಕೆ ಅನೇಕ ವಿಚಾರಗಳನ್ನು ತಂದಿದ್ದಾರೆ” ಎಂದರು.

ಸರ್ವಪಕ್ಷ ಸಭೆ ಕರೆಯವುದಕ್ಕೂ ಮುನ್ನ ನೀರು ಬಿಡಲಾಗಿದೆ ಎನ್ನುವ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಕೇಳಿದಾಗ “ಯಾರೊ ಮಾತನಾಡುತ್ತಾರೆ ಎಂದು ಉತ್ತರ ಕೊಡುವ ಅಗತ್ಯವಿಲ್ಲ. ಅವರಿಗೆ ಪ್ರಚಾರ ಬೇಕು, ಅದಕ್ಕೆ ಮಾತನಾಡುತ್ತಾರೆ. ನನಗೆ ಪ್ರಚಾರದ ಗೀಳಾಗಲಿ, ಅವರ ಹೇಳಿಕೆಗೆ ತಲೆ ಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ. ನಾನು, ನನ್ನ ಕೆಲಸ, ರಾಜ್ಯದ ರೈತರ ಹಿತ ಅಷ್ಟೇ ಸಾಕು. ನನ್ನ ನೆನೆಸಿಕೊಳ್ಳದಿದ್ದರೆ ಅವರಿಗೆ ನಿದ್ರೆ ಬರುವುದಿಲ್ಲ” ಎಂದರು.

ಮೇಕೆದಾಟು ವಿಚಾರವನ್ನು ಮುಂದುವರೆಸುತ್ತೀರಾ ಎಂದು ಕೇಳಿದಾಗ “ಸದ್ಯಕ್ಕೆ ಈ ಬಗ್ಗೆ ಉತ್ತರ ನೀಡುವುದಿಲ್ಲ. ಕಾಲವೇ ಅದಕ್ಕೆ ಉತ್ತರ ಕೊಡುತ್ತದೆ. ನಾವು ಸಲ್ಲಿಸಿರುವ ದಾಖಲೆಗಳು ಈ ಯೋಜನೆಗೆ ಭದ್ರ ಅಡಿಪಾಯ ಹಾಕಿದ್ದು, ನ್ಯಾಯಾಲಯವೇ ಈ ವಿಚಾರವಾಗಿ ತೀರ್ಮಾನ ಮಾಡಲಿದೆ” ಎಂದರು.

ಬಾಗಿನ ಯಾವಾಗ ಅರ್ಪಣೆ ಮಾಡಲಾಗುತ್ತೆ ಎಂದು ಕೇಳಿದಾಗ “ಶುಭ ಮುಹೂರ್ತ, ಶುಭ ಗಳಿಗೆ ನೋಡಿ, ವಿಧಾನಸಭೆ ಮುಗಿದ ನಂತರ ದಿನಾಂಕ ತೀರ್ಮಾನ ಮಾಡಲಾಗುವುದು” ಎಂದು ತಿಳಿಸಿದರು.

ಐಟಿ ನೌಕರರ ಕೆಲಸದ ವೇಳೆ ಹೆಚ್ಚಿಸುವ ಕುರಿತು ಕೇಳಿದಾಗ, “ನಾನು ಮತ್ತು ನೀವು ವಿರೋಧಿಸಬಹುದು. ಆದರೆ ಅಂತರರಾಷ್ಟೀಯ ಮಟ್ಟದಲ್ಲಿ ಬೇರ, ಬೇರೆ ಕೆಲಸದ ಸಮಯವಿದೆ. ಈ ಕಾರಣಕ್ಕೆ ಒಂದು ಸಭೆ ಕರೆದು ತೀರ್ಮಾನ ತೆಗೆದುಕೊಳ್ಳಲಾಗುವುದು” ಎಂದರು.

ನಾನು ಎನ್ನುವುದು ಅಹಂಕಾರ, ನಾವು ಎನ್ನುವುದು ಸಂಸ್ಕಾರ: ಡಿಕೆಶಿ ಕುಟುಕಿದ ಕೇಂದ್ರ ಸಚಿವ HDK

24 ಗಂಟೆಗೂ ಮುನ್ನವೇ ಕೇಂದ್ರದ ಬಜೆಟ್‌ ಬಗ್ಗೆ ಪ್ರಧಾನಿ ಮೋದಿ ಮಾಹಿತಿ : ಮಹತ್ವದ ಘೋಷಣೆಗಳ ಸುಳಿವು!

Share. Facebook Twitter LinkedIn WhatsApp Email

Related Posts

ಸಾಗರದ ಜನತೆಗೆ ಶಾಸಕ ಗೋಪಾಲಕೃಷ್ಣ ಬೇಳೂರು ಗುಡ್ ನ್ಯೂಸ್ | Namma Clinic

04/06/2025 10:01 PM1 Min Read

BREAKING: ರಾಜ್ಯದಲ್ಲಿಂದು ಕೊರೋನಾಗೆ ಮತ್ತಿಬ್ಬರು ಬಲಿ: 153 ಜನರಿಗೆ ಸೋಂಕು ದೃಢ | Covid19 Update

04/06/2025 9:06 PM1 Min Read

RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ; ಡಿಸಿಎಂ DKS ವಿಷಾದ, ಮೃತಪಟ್ಟವರಿಗೆ ಸಂತಾಪ

04/06/2025 8:50 PM2 Mins Read
Recent News

ಸಾಗರದ ಜನತೆಗೆ ಶಾಸಕ ಗೋಪಾಲಕೃಷ್ಣ ಬೇಳೂರು ಗುಡ್ ನ್ಯೂಸ್ | Namma Clinic

04/06/2025 10:01 PM

ಯಾವ ವಯಸ್ಸಿನ ಜನರು ಎಷ್ಟು ‘ನೀರು’ ಕುಡಿಯಬೇಕು ಗೊತ್ತಾ.?

04/06/2025 9:41 PM

BREAKING: ರಾಜ್ಯದಲ್ಲಿಂದು ಕೊರೋನಾಗೆ ಮತ್ತಿಬ್ಬರು ಬಲಿ: 153 ಜನರಿಗೆ ಸೋಂಕು ದೃಢ | Covid19 Update

04/06/2025 9:06 PM

‘ಕೂದಲು’ ತುಂಬ ಉದುರುತ್ತಿದ್ಯಾ.? ಈ ಸಿಂಪಲ್ ಟಿಪ್ಸ್ ಟ್ರೈ ಮಾಡಿ ನೋಡಿ.!

04/06/2025 9:00 PM
State News
KARNATAKA

ಸಾಗರದ ಜನತೆಗೆ ಶಾಸಕ ಗೋಪಾಲಕೃಷ್ಣ ಬೇಳೂರು ಗುಡ್ ನ್ಯೂಸ್ | Namma Clinic

By kannadanewsnow0904/06/2025 10:01 PM KARNATAKA 1 Min Read

ಶಿವಮೊಗ್ಗ: ಸಾಗರದ ಜನರಿಗೆ ಮತ್ತಷ್ಟು ಉತ್ತಮ ಆರೋಗ್ಯ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಮಹತ್ವದ ಹೆಜ್ಜೆ ಇರಿಸಿದ್ದಾರೆ.…

BREAKING: ರಾಜ್ಯದಲ್ಲಿಂದು ಕೊರೋನಾಗೆ ಮತ್ತಿಬ್ಬರು ಬಲಿ: 153 ಜನರಿಗೆ ಸೋಂಕು ದೃಢ | Covid19 Update

04/06/2025 9:06 PM

RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ; ಡಿಸಿಎಂ DKS ವಿಷಾದ, ಮೃತಪಟ್ಟವರಿಗೆ ಸಂತಾಪ

04/06/2025 8:50 PM

ಪೂರ್ವತಯಾರಿ ಇಲ್ಲದೇ ಹುಡುಗಾಟಿಕೆ ಮಾಡಿದ್ದರಿಂದ ಕಾಲ್ತುಳಿತ ದುರ್ಘಟನೆ: ಬಿವೈ ವಿಜಯೇಂದ್ರ ಕಿಡಿ

04/06/2025 8:41 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.