Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಫ್ರಿಡ್ಜ್’ನಲ್ಲಿ ತುಂಡು ‘ನಿಂಬೆಹಣ್ಣು’ ಇಟ್ಟರೆ ಏನಾಗುತ್ತೆ ಗೊತ್ತಾ? ಪ್ರಯೋಜನ ತಿಳಿದ್ರೆ, ನೀವೇ ಶಾಕ್ ಆಗ್ತೀರಿ!

23/08/2025 10:00 PM

Alert : ವಾಟ್ಸಾಪ್’ನಲ್ಲಿ ಬಂದ ‘ಆಮಂತ್ರಣ ಪತ್ರಿಕೆ’ ತೆರೆದು ನೋಡುವ ಮುನ್ನ ಎಚ್ಚರ ; 1,90,000 ರೂ. ಕಳೆದುಕೊಂಡ ಸರ್ಕಾರಿ ಉದ್ಯೋಗಿ

23/08/2025 9:48 PM

‘BCCI’ ಮಹತ್ವದ ನಿರ್ಧಾರ ; ದೇಶೀಯ ಕ್ರಿಕೆಟ್ ಸ್ವರೂಪ ಬದಲಾವಣೆ, ಈಗ ಪಂದ್ಯಗಳು ಹೀಗಿರುತ್ತವೆ.!

23/08/2025 9:12 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ರಾಜಧಾನಿಯ ಅಭಿವೃದ್ದಿಗೆ ‘ಗ್ರೇಟರ್ ಬೆಂಗಳೂರು ಬಿಲ್’: DCM ಡಿ.ಕೆ ಶಿವಕುಮಾರ್
KARNATAKA

ರಾಜ್ಯ ರಾಜಧಾನಿಯ ಅಭಿವೃದ್ದಿಗೆ ‘ಗ್ರೇಟರ್ ಬೆಂಗಳೂರು ಬಿಲ್’: DCM ಡಿ.ಕೆ ಶಿವಕುಮಾರ್

By kannadanewsnow0923/07/2024 7:39 PM

ಬೆಂಗಳೂರು : “ನಾಡಪ್ರಭು ಕೆಂಪೇಗೌಡರು ಕಟ್ಟಿಸಿರುವ ನಾಲ್ಕು ಗೋಪುರಗಳನ್ನು ಮೀರಿ ಬೆಳೆಯುತ್ತಿರುವ ಬೆಂಗಳೂರಿನ ಸಮರ್ಪಕ ನಿರ್ವಹಣೆಗೆ ಗ್ರೇಟರ್ ಬೆಂಗಳೂರು ಬಿಲ್ ಮಂಡನೆ ಮಾಡಲಾಗಿದೆ” ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ತಿಳಿಸಿದರು.

ಬಿಡ್ಬ್ಲೂಎಸ್ ಎಸ್ ಬಿ ನೌಕರರ ಸಂಘ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡರ 515ನೇ ಜಯಂತ್ಯೋತ್ಸವದಲ್ಲಿ ಮಾತನಾಡಿದ ಅವರು “ಕಳೆದ ಒಂದು ವರ್ಷದಿಂದ ನಮ್ಮ ಸಾರ್ವಜನಿಕರಿಂದ 70 ಸಾವಿರ ಸಲಹೆಗಳನ್ನು ಪಡೆಯಲಾಗಿದೆ. ಇವುಗಳನ್ನು ಕ್ರೋಡಿಕರಿಸಿ ಬೆಂಗಳೂರು ಜನಪ್ರತಿನಿಧಿಗಳು ಹಾಗೂ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಗ್ರೇಟರ್ ಬೆಂಗಳೂರು ಬಿಲ್ ಸಿದ್ದಪಡಿಸಲಾಗಿದೆ. ಕೆಂಪೇಗೌಡರು ಬೆಂಗಳೂರು ಕಟ್ಟಿದರು, ಕೆಂಗಲ್ ಹನುಮಂತಯ್ಯ ಅವರು ವಿಧಾನಸೌಧ ಕಟ್ಟಿದರು. ಎಸ್.ಎಂ.ಕೃಷ್ಣ ಅವರು ಬೆಂಗಳೂರಿನ ಹೆಸರನ್ನು ಅಂತರರಾಷ್ಟೀಯ ಮಟ್ಟಕ್ಕೆ ಬೆಳೆಸಿದರು. ಇಂತಹ ಬೆಂಗಳೂರನ್ನು ನಾವು ಉಳಿಸಬೇಕಾಗಿದೆ” ಎಂದು ಹೇಳಿದರು.

“ಸಚಿವನಾದ ತಕ್ಷಣ ಬೆಂಗಳೂರಿಗೆ 6 ಟಿಎಂಸಿ ಕಾವೇರಿ ನೀರನ್ನು ಹೆಚ್ಚುವರಿಯಾಗಿ ಪೂರೈಕೆ ಮಾಡಲು ಕ್ರಮ ಕೈಗೊಳ್ಳಲಾಗಿದೆ. ನಗರದ ಜನರಿಗೆ ನೀರು, ಭದ್ರತೆ, ಮೂಲಸೌಕರ್ಯಗಳನ್ನು ಒದಗಿಸಿಕೊಡಬೇಕು. ವಾಹನಗಳ ಸಂಖ್ಯೆ, ನಗರಕ್ಕೆ ವಲಸೆ ಬರುವವರ ಸಂಖ್ಯೆ ಹೆಚ್ಚಾಗಿದೆ. ರಸ್ತೆ ಇದ್ದಷ್ಟೇ ಇದೆ. ಈ ಸವಾಲುಗಳನ್ನು ಇಟ್ಟುಕೊಂಡೇ ಬೆಂಗಳೂರು ಅಭಿವೃದ್ಧಿ ಮಾಡಬೇಕಾಗಿದೆ.” ಎಂದರು.

ನೀರಿನ ದರ ಏರಿಕೆಗೆ ಚಿಂತನೆ

“ಕಳೆದ 12 ವರ್ಷಗಳಿಂದ ನೀರಿನ ದರವನ್ನು ಹೆಚ್ಚಳ ಮಾಡಿಲ್ಲ. ಇದರಿಂದ ಜಲಮಂಡಳಿಯ ಆರ್ಥಿಕ ಸ್ಥಿತಿ ಕಷ್ಟದಲ್ಲಿದೆ. ದರ ಹೆಚ್ಚಳ ಮಾಡಿದರೆ ವಿರೋಧ ವ್ಯಕ್ತವಾಗುತ್ತದೆ. ಆದರೂ ಮಂಡಳಿಯ ಉಳಿವಿಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು” ಎಂದು ತಿಳಿಸಿದರು.

“ರೈತ ಸಗಣಿ ಬಾಚಿ, ಹಸು ಕಟ್ಟಿಕೊಂಡು ಕಷ್ಟಪಡುತ್ತಾನೆ. ಆತ ಕೊಡುವ ಹಾಲಿಗೆ 2 ರೂಪಾಯಿ ಬೆಲೆ ಹೆಚ್ಚಳ ಮಾಡಿದರೆ ಬಡಿದಾಡುತ್ತಾರೆ. ಒಂದು ಲೀಟರ್‌ ನೀರಿನ ಬಾಟಲಿ ದರ 25 ರೂಪಾಯಿ ಇದೆ. ರೈತನ ಬಗ್ಗೆ ಕಾಳಜಿಯಿಲ್ಲ. ಆದರೆ ಬಾಟಲಿ ನೀರಿಗೆ ಎಷ್ಟು ದುಡ್ಡು ಬೇಕಾದರೂ ಕೊಡುತ್ತಾರೆ” ಎಂದು ಬೇಸರ ವ್ಯಕ್ತಪಡಿಸಿದರು.

ಕೆರೆಗಳನ್ನ ಉಳಿಸಲು ಹೊಸ ಯೋಜನೆ

ಬೆಂಗಳೂರು ವ್ಯಾಪ್ತಿಯ ಎಲ್ಲಾ ಕೆರೆಗಳನ್ನು ಇಲಾಖೆಯ ವ್ಯಾಪ್ತಿಗೆ ತೆಗೆದುಕೊಂಡು ಅಂತರ್ಜಲ ಮಟ್ಟವನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು. ಕೆಂಪೇಗೌಡರು ಕಟ್ಟಿದ ಕೆರೆಗಳನ್ನು ಉಳಿಸಿಕೊಳ್ಳಲಾಗುವುದು. ಕೆರೆಗಳಿಗೆ ಸಂಸ್ಕರಿಸಿದ ನೀರು ತುಂಬಿಸುವ ಮೂಲಕ ಕೆರೆಗಳನ್ನು ಉಳಿಸುವ ಕೆಲಸ ಮಾಡಲಾಗುವುದು. ಇದರಿಂದ ಒತ್ತುವರಿಯನ್ನು ತಡೆಯಬಹುದು” ಎಂದರು.

“ನೂತನ ಬಿಲ್ ಅಲ್ಲಿ ಬಿಡಿಎ ಮತ್ತು ಬಿಡ್ಲ್ಬೂ ಎಸ್ ಎಸ್ ಬಿಯನ್ನು ವಿಲೀನ ಮಾಡಬೇಕು ಎನ್ನುವ ಸಲಹೆ ಬಂದಿತ್ತು. ನಾನು ಒಪ್ಪಿಗೆ ನೀಡಲಿಲ್ಲ. ನಿಮ್ಮನ್ನು ರಾಜಕಾರಣಕ್ಕೆ ಎಳೆಯುವುದು ಬೇಡ ಇಲಾಖೆಯ ಸ್ವಾಯತ್ತತೆ ಉಳಿಯಲಿ ಎಂದು ತೀರ್ಮಾನ ಮಾಡಿದೆ. ವಿಲೀನವಾದಷ್ಟು ಕಷ್ಟವಾಗಿತ್ತದೆ” ಎಂದರು.

ಸಿಬ್ಬಂದಿಗಳ ನೇಮಕಾತಿಗೆ ಕ್ರಮ

“ಆರ್ಥಿಕ ಪರಿಸ್ಥಿತಿ ಸರಿಯಾಗಿಲ್ಲದೇ ಇರುವ ಕಾರಣದಿಂದಾಗಿ ಹಲವಾರು ವರ್ಷಗಳಿಂದ ಜಲಮಂಡಳಿಯಲ್ಲಿ ಸಿಬ್ಬಂದಿಗಳ ನೇಮಕಾತಿ ಪ್ರಕ್ರಿಯೆ ನಡೆದಿಲ್ಲ. ಅಧಿವೇಶನ ಮುಗಿದ ನಂತರ ಈ ಬಗ್ಗೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು” ಎಂದು ಭರವಸೆ ನೀಡಿದರು.

“ಬೆಂಗಳೂರಿನಲ್ಲಿ 7 ಸಾವಿರಕ್ಕೂ ಹೆಚ್ಚು ಕೊಳವೆಬಾವಿಗಳು ಬತ್ತಿ ಹೋಗಿದ್ದವು. ನೀರಿನ ಸಮಸ್ಯೆಯನ್ನು ಬೆಂಗಳೂರು ಜಲಮಂಡಳಿ ಸಿಬ್ಬಂದಿಗಳು ಹಾಗೂ ನೌಕರರು ನಗರದಲ್ಲಿ ಎದುರಾಗಿದ್ದ ಬರಗಾಲವನ್ನು ಅತ್ಯಂತ ಸಮರ್ಪಕವಾಗಿ ನಿಭಾಯಿಸಿದ್ದೀರಿ. ನಿಮ್ಮ ಸೇವೆ ಶ್ಲಾಘನೀಯ” ಎಂದು ಹೇಳಿದರು.

ಬೆಂಗಳೂರು ಬಿಜಿನೆಸ್ ಕಾರಿಡಾರ್

“2006 ರಲ್ಲಿ ಪೆರಿಫೆರಲ್ ರಿಂಗ್ ರಸ್ತೆ ಮಾಡುವಾಗ ಸರಿಯಾದ ಯೋಜನೆ ಮಾಡದ ಕಾರಣ ನಗರದ ಒಳಗೆ ಬಂದುಬಿಟ್ಟಿದೆ. ಈಗ ಹೊಸದಾಗಿ 150 ಅಡಿ ಅಗಲದ ರಸ್ತೆ ನಿರ್ಮಾಣ ಮಾಡಲಾಗುವುದು. ಸುಮಾರು 25 ಸಾವಿರ ಕೋಟಿ ಖರ್ಚಾಗಲಿದೆ. ಇದಕ್ಕೆ ಪ್ರತ್ಯೇಕ ಕಂಪೆನಿ ಸ್ಥಾಪಿಸಿ ನಿರ್ಮಾಣ ಮಾಡಲಾಗುವುದು. ಇದನ್ನು ʼಬೆಂಗಳೂರು ಬಿಜಿನೆಸ್ ಕಾರಿಡಾರ್ʼ ಎಂದು ಕರೆಯಲಾಗುವುದು” ಎಂದರು.

“ನಾಡಪ್ರಭು ಕೆಂಪೇಗೌಡರು ಯಾವುದೇ ಒಂದು ಜಾತಿಗೆ ಸೀಮಿತವಾಗಿಲ್ಲ. ಸರ್ವಧರ್ಮಕ್ಕೂ ಸಲ್ಲುವ ವ್ಯಕ್ತಿ ಇವರು. ಬೆಂಗಳೂರಿನ ಘನತೆ, ಇತಿಹಾಸವನ್ನು ಉಳಿಸೋಣ” ಎಂದು ಹೇಳಿದರು.

ಸಾಗರದಲ್ಲಿ ಶಾಸಕರ ಸೂಚನೆ ಬೆನ್ನಲ್ಲೇ ‘ಕೆಳದಿ PDO ಅಷ್ಪಕ್ ಅಹಮದ್’ ಅಲರ್ಟ್: ರಸ್ತೆಯಲ್ಲಿ ನಿಂತಿದ್ದ ‘ನೀರು ಕ್ಲಿಯರ್’

‘ಶಿವಮೊಗ್ಗ ಜಿಲ್ಲೆ’ಯಲ್ಲೊಂದು ‘ಬಹುದೊಡ್ಡ ಹಗರಣ’: ‘ಸಹಕಾರ ಸಂಘ’ಕ್ಕೆ ಕಟ್ಟಿದ ಹಣ ‘ಕಾರ್ಯದರ್ಶಿ ಪಂಗನಾಮ’

Share. Facebook Twitter LinkedIn WhatsApp Email

Related Posts

BREAKING : ತುಮಕೂರಿನಲ್ಲಿ ಆಸ್ಪತ್ರೆಯಲ್ಲೇ `ಹೃದಯಾಘಾತ’ದಿಂದ ಕರ್ತವ್ಯನಿರತ ನರ್ಸ್ ಸಾವು.!

23/08/2025 8:48 PM1 Min Read

BREAKING: ಶಾಸಕ ಯತ್ನಾಳ್ ವಿರುದ್ಧ ವಿಡಿಯೋ ಹರಿಬಿಟ್ಟ ಅನ್ಯಕೋಮಿನ ಯುವಕ : ಗ್ರಾಮದಲ್ಲಿ ಪರಿಸ್ಥಿತಿ ಉದ್ವಿಗ್ನ

23/08/2025 8:27 PM1 Min Read

`ಆಯುಷ್ಮಾನ್ ಕಾರ್ಡ್’ : ಯಾವ ಆಸ್ಪತ್ರೆಗಳಲ್ಲಿ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ಪಡೆಯಬಹುದು? ಇಲ್ಲಿದೆ ಮಾಹಿತಿ

23/08/2025 8:13 PM2 Mins Read
Recent News

ಫ್ರಿಡ್ಜ್’ನಲ್ಲಿ ತುಂಡು ‘ನಿಂಬೆಹಣ್ಣು’ ಇಟ್ಟರೆ ಏನಾಗುತ್ತೆ ಗೊತ್ತಾ? ಪ್ರಯೋಜನ ತಿಳಿದ್ರೆ, ನೀವೇ ಶಾಕ್ ಆಗ್ತೀರಿ!

23/08/2025 10:00 PM

Alert : ವಾಟ್ಸಾಪ್’ನಲ್ಲಿ ಬಂದ ‘ಆಮಂತ್ರಣ ಪತ್ರಿಕೆ’ ತೆರೆದು ನೋಡುವ ಮುನ್ನ ಎಚ್ಚರ ; 1,90,000 ರೂ. ಕಳೆದುಕೊಂಡ ಸರ್ಕಾರಿ ಉದ್ಯೋಗಿ

23/08/2025 9:48 PM

‘BCCI’ ಮಹತ್ವದ ನಿರ್ಧಾರ ; ದೇಶೀಯ ಕ್ರಿಕೆಟ್ ಸ್ವರೂಪ ಬದಲಾವಣೆ, ಈಗ ಪಂದ್ಯಗಳು ಹೀಗಿರುತ್ತವೆ.!

23/08/2025 9:12 PM

BREAKING : ತುಮಕೂರಿನಲ್ಲಿ ಆಸ್ಪತ್ರೆಯಲ್ಲೇ `ಹೃದಯಾಘಾತ’ದಿಂದ ಕರ್ತವ್ಯನಿರತ ನರ್ಸ್ ಸಾವು.!

23/08/2025 8:48 PM
State News
KARNATAKA

BREAKING : ತುಮಕೂರಿನಲ್ಲಿ ಆಸ್ಪತ್ರೆಯಲ್ಲೇ `ಹೃದಯಾಘಾತ’ದಿಂದ ಕರ್ತವ್ಯನಿರತ ನರ್ಸ್ ಸಾವು.!

By kannadanewsnow5723/08/2025 8:48 PM KARNATAKA 1 Min Read

ತುಮಕೂರು : ರಾಜ್ಯದಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ತುಮಕೂರಿನಲ್ಲಿ ಹೃದಯಾಘಾತದಿಂದ ಕರ್ತವ್ಯನಿರತ ನರ್ಸ್ ಬಲಿಯಾಗಿದ್ದಾರೆ. ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಕುಸಿದುಬಿದ್ದು ನರ್ಸ್…

BREAKING: ಶಾಸಕ ಯತ್ನಾಳ್ ವಿರುದ್ಧ ವಿಡಿಯೋ ಹರಿಬಿಟ್ಟ ಅನ್ಯಕೋಮಿನ ಯುವಕ : ಗ್ರಾಮದಲ್ಲಿ ಪರಿಸ್ಥಿತಿ ಉದ್ವಿಗ್ನ

23/08/2025 8:27 PM

`ಆಯುಷ್ಮಾನ್ ಕಾರ್ಡ್’ : ಯಾವ ಆಸ್ಪತ್ರೆಗಳಲ್ಲಿ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ಪಡೆಯಬಹುದು? ಇಲ್ಲಿದೆ ಮಾಹಿತಿ

23/08/2025 8:13 PM

ರಾಜ್ಯದಲ್ಲಿ ಇನ್ಮುಂದೆ `ಬಯೋಮೆಟ್ರಿಕ್ ಆಧಾರಿತ ಪಡಿತರ ವಿತರಣೆ’ ಕಡ್ಡಾಯ

23/08/2025 8:07 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.