ಬೆಂಗಳೂರು: ಕನ್ನಡಿಗರಿಗೆ ಖಾಸಗಿ ವಲಯದಲ್ಲೂ ಮೀಸಲಾತಿ ನಿರ್ಧಾರದಿಂದ ರಾಜ್ಯ ಸರ್ಕಾರ ಹಿಂದೆ ಸರಿದಿತ್ತು. ರಾಜ್ಯ ಸರ್ಕಾರದ ಈ ನಿರ್ಧಾರದ ವಿರುದ್ಧ ವಾಟಾಳ್ ನಾಗರಾಜ್ ಸಿಡಿದೆದ್ದಿದ್ದಾರೆ. ಅಲ್ಲದೇ ಕನ್ನಡಿಗರಿಗೆ ಉದ್ದೋಯ ಮೀಸಲಾತಿಗೆ ಆಗ್ರಹಿಸಿ ನಾಳೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದ್ದಾರೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಕನ್ನಡ ಒಕ್ಕೂಟದ ವಾಟಾಳ್ ನಾಗರಾಜ್ ಅವರು, ಕನ್ನಡಿಗರಿಗೆ ಉದ್ಯೋ ಮಸೂದೆ ಮಂಡಿಸಲೇಬೇಕೆಂದು ದಿನಾಂಕ 25-07-2024ರ ನಾಳೆ ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತಿರೋದಾಗಿ ತಿಳಿಸಿದ್ದಾರೆ.
ಕನ್ನಡಿಗರಿಗೆ ಉದ್ದೋಯ ಮೀಸಲಾತಿ ವಿಧೇಯಕವನ್ನು ಕೂಡಲೇ ವಿಧಾನಸಭೆಯಲ್ಲಿ ಮಂಡಿಸಬೇಕು. ಕನ್ನಡಿಗರ ಭವಿಷ್ಯದ ಪ್ರಶ್ನೆಯ ಮಸೂದೆಯನ್ನು ಮಂಡಿಸುವುದಾಗಿ ಭರವಸೆ ನೀಡಿ, ಮಸೂದೆಯನ್ನು ಹಿಂದಕ್ಕೆ ಪಡೆದಿರುವುದು ಸರಿಯಲ್ಲ. ಸದನ ಮುಗಿಯುವುದರೊಳಗಾಗಿ ಮಸೂದೆಯನ್ನು ಮಂಡಿಸಬೇಕು ಅಂತ ಒತ್ತಾಯಿಸಿದ್ದಾರೆ.
ಕನ್ನಡ ಒಕ್ಕೂಟದ ಅಧ್ಯಕ್ಷರಾದಂತ ನನ್ನ ನೇತೃತ್ವದಲ್ಲಿ ದಿನಾಂಕ 25-07-2024ರ ನಾಳೆ ಮಧ್ಯಾಹ್ನ 12 ಗಂಟೆಗೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುತ್ತದೆ. ಕನ್ನಡಿಗರಿಗೆ ಉದ್ಯೋಗ ಮೀಸಲಾತಿಗೆ ಆಗ್ರಹಿಸಿದಂತ ಈ ಪ್ರತಿಭಟನೆಯಲ್ಲಿ ಡಾ.ರಾಜ್ ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷರಾದಂತ ಸಾರಾ ಗೋವಿಂದು ಭಾಗಿಯಾಗಲಿದ್ದಾರೆ ಎಂದಿದ್ದಾರೆ.
ಇದಲ್ಲದೇ ಕನ್ನಡ ಸೇನೆಯ ರಾಜ್ಯಾಧ್ಯಕ್ಷರಾದ ಕೆ ಆರ್ ಕುಮಾರ್, ಕರವೇ ರಾಜ್ಯಾಧ್ಯಕ್ಷ ಶಿವರಾಮೇಗೌಡ, ಪ್ರವೀಣ್ ಕುಮಾರ್ ಶೆಟ್ಟಿ, ಕನ್ನಡ ಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ ಮಂಜುನಾಥ್ ದೇವ್, ಹೆಚ್.ವಿ ಗಿರೀಶ್ ಗೌಡ ಹಾಗೂ ಇತರೆ ಕನ್ನಡಪರ ಸಂಘಟನೆಯ ಮುಖಂಡರು ಭಾಗಿಯಾಗುವುದಾಗಿ ಮಾಹಿತಿ ನೀಡಿದ್ದಾರೆ.
ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು
‘ಸಿಎಂ ಸಿದ್ಧರಾಮಯ್ಯ’ ನಿರ್ಧಾರದಿಂದಲೇ ‘ಕೇಂದ್ರ ಬಜೆಟ್’ನಲ್ಲಿ ರಾಜ್ಯಕ್ಕೆ ಅನ್ಯಾಯ: ಬಿವೈ ವಿಜಯೇಂದ್ರ
BREAKING: ‘ಪ್ರಜ್ವಲ್ ರೇವಣ್ಣ’ಗೆ ಜೈಲೇಗತಿ: ‘ನಿರೀಕ್ಷಣಾ ಜಾಮೀನು ಅರ್ಜಿ ವಜಾ’ಗೋಳಿಸಿದ ಕೋರ್ಟ್ | Prajwal Revanna