Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಜ್ಯದ ಜನತೆ ಗಮನಕ್ಕೆ : `ಗಂಗಾ ಕಲ್ಯಾಣ, `ಸ್ವಾವಲಂಬಿ ಸಾರಥಿ’ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಜೂ.30 ಕೊನೆಯ ದಿನ.!

23/06/2025 10:04 AM

BREAKING : ಸಾಬ್ರ ಹೆಸರಿಗೆ ಜಮೀನು ಪರಭಾರೆ ಮಾಡಿದ್ರೆ ನೇಣು ಹಾಕ್ತಿನಿ : ಅಧಿಕಾರಿಗಳಿಗೆ ಧಮ್ಕಿ ಹಾಕಿದ ಕಾಂಗ್ರೆಸ್ ಶಾಸಕ!

23/06/2025 10:02 AM

SHOCKING : ಹೆಚ್ಚು `ಮೊಬೈಲ್’ ಬಳಕೆಯಿಂದ `ಮೈಗ್ರೇನ್’ ಅಪಾಯ 139% ಹೆಚ್ಚಳ : ವರದಿ

23/06/2025 10:01 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ 01 ರಿಂದ 10ನೇ ತರಗತಿವರೆಗಿನ ಮಕ್ಕಳಿಗೆ ಇನ್ಮುಂದೆ ವಾರಕ್ಕೊಂದು ಗ್ರಂಥಾಲಯ ಕಾರ್ಯಕ್ರಮ ಜಾರಿ…!
KARNATAKA

ರಾಜ್ಯದ 01 ರಿಂದ 10ನೇ ತರಗತಿವರೆಗಿನ ಮಕ್ಕಳಿಗೆ ಇನ್ಮುಂದೆ ವಾರಕ್ಕೊಂದು ಗ್ರಂಥಾಲಯ ಕಾರ್ಯಕ್ರಮ ಜಾರಿ…!

By kannadanewsnow0727/07/2024 1:14 PM

ಬೆಂಗಳೂರು: ರಾಜ್ಯದ 01 ರಿಂದ 10ನೇ ತರಗತಿವರೆಗಿನ ಮಕ್ಕಳಿಗೆ ಇನ್ಮುಂದೆ ವಾರಕ್ಕೊಂದು ಗ್ರಂಥಾಲಯ ಕಾರ್ಯಕ್ರಮ ಜಾರಿ ಮಾಡುವ ಬಗ್ಗೆ ಆದೇಶವನ್ನು ಹೊರಡಿಸಲಾಗಿದೆ.

ಆದೇಶದಲ್ಲಿ ಉಲ್ಲೇಖ ಮಾಡಿರುವಂತೆ ಶಾಲಾ ವಿದ್ಯಾರ್ಥಿಗಳಲ್ಲಿ ಓದುವ ಅಭಿರುಚಿಯನ್ನು ವೃದ್ಧಿಸುವ ಸಲುವಾಗಿ ಪ್ರತಿ ಶಾಲೆಯಲ್ಲಿಯೂ ಕಡ್ಡಾಯವಾಗಿ ಗ್ರಂಥಾಲಯವನ್ನು ಸ್ಥಾಪಿಸಿ ಅಭಿವೃದ್ಧಿ ಪಡಿಸಲು ಮತ್ತು ಅದನ್ನು ಮಕ್ಕಳ ಬಳಕೆಗೆ ಅರ್ಹವಾಗಿಸಿ ನಿರಂತರ ಬಳಕೆಗೆ ನೀಡಲು ಉಲ್ಲೇಖದನುಸಾರ ಶಾಲೆಗಳಲ್ಲಿ ಓದುವ ಹವ್ಯಾಸ ಜ್ಞಾನದ ವಿಕಾಸ” ಎಂಬ ಕಾರ್ಯಕ್ರಮವನ್ನು ಇಲಾಖೆಯಿಂದ ಅನುಷ್ಠಾನಗೊಳಿಸಲಾಗಿದೆ. ಈ ಕಾರ್ಯಕ್ರಮದ ಅಡಿಯಲ್ಲಿ ಶಾಲೆಗಳಲ್ಲಿ ವಾರಕ್ಕೆ ಒಂದು ಗ್ರಂಥಾಲಯ ಅವಧಿ ನಿಗಧಿಪಡಿಸಲು ಕ್ರಮವಹಿಸಲಾಗಿದೆ.

ಉದ್ದೇಶ: ಶಾಲಾ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಯು ಶಿಕ್ಷಣದ ಧೈಯವಾಗಿದ್ದು, ವಿದ್ಯಾರ್ಥಿಗಳ ಜ್ಞಾನ, ಬುದ್ದಿ ಮತ್ತು ಮೌಲ್ಯದ ಕ್ರಿಯಾಶೀಲ ವಿಕಸನಕ್ಕಾಗಿ ಪಠ್ಯಪುಸ್ತಕಗಳ ಓದಿನ ಜೊತೆಗೆ ಇತರೆ ಪೂರಕ ಪುಸ್ತಕಗಳನ್ನು ಓದುವುದು ಅವಶ್ಯಕವಾಗಿರುತ್ತದೆ. ಪುಸ್ತಕ ಓದುವ ಹವ್ಯಾಸವನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವಲ್ಲಿ ಶಾಲಾ ಗ್ರಂಥಾಲಯಗಳು ಅತ್ಯಂತ ಮಹತ್ವದ ಪಾತ್ರವನ್ನು ವಹಿಸುತ್ತವೆ. ಗ್ರಂಥಾಲಯಗಳು ಜ್ಞಾನಭಂಡಾರ ಅಷ್ಟೇ ಅಲ್ಲ ಬದಲಿಗೆ ವಿದ್ಯಾರ್ಥಿಗಳ ಸಂಪೂರ್ಣ ಮನೋವಿಕಾಸಕ್ಕೆ ಪೂರಕವಾಗಿರುತ್ತವೆ.

ಶಾಲಾ ಗ್ರಂಥಾಲಯದ ಪ್ರಾಥಮಿಕ ಉದ್ದೇಶವು ಮಕ್ಕಳಲ್ಲಿ ಓದುವ ಅಭ್ಯಾಸವನ್ನು ಬೆಳೆಸುವುದು. ಮಕ್ಕಳು ಆನಂದಿಂದ ಪುಸ್ತಕಗಳನ್ನು ಓದಿದಾಗ ಮಾತ್ರ ಈ ಹವ್ಯಾಸವು ಬೆಳೆಯಲು ಸಾಧ್ಯ, ಮಕ್ಕಳು ಆನಂದಿಸಿ ಓದಲು ಗ್ರಂಥಾಲಯದಲ್ಲಿ ಅನೇಕ ಪ್ರಕಾರದ, ಆಕರ್ಶಕ ಪುಸ್ತಕಗಳಿರಬೇಕು. ಈ ಪುಸ್ತಕಗಳು ಮಕ್ಕಳ ಅಭಿರುಚಿಗೆ ತಕ್ಕಂತಿರಬೇಕು.

ಓದುವ ಹವ್ಯಾಸವು ಮಕ್ಕಳಲ್ಲಿ ಶಬ್ದಭಂಡಾರ ವೃದ್ಧಿಸಿ, ನಿರರ್ಗಳತೆ, ಗ್ರಹಿಕಾ ಸಾಮರ್ಥ್ಯ, ಏಕಾಗ್ರತೆಯ ಶಕ್ತಿ, ಭಾಷಾ ಕೌಶಲ್ಯ ಮತ್ತು ಸೃಜನಾತ್ಮಕ ಬರವಣಿಗೆಗೆ ಪೂರಕವಾಗಿವೆ. ಅದಲ್ಲದೆ ಬೌದ್ಧಿಕ ಕೌಶಲ್ಯಗಳಾದ ವಿಮರ್ಶಾತ್ಮಕ ಚಿಂತನೆ, ತಾರ್ಕಿಕತೆ, ವಿಶ್ಲೇಷಣಾತ್ಮಕ ಸಾಮರ್ಥ್ಯ, ಸಾರಾಂಶ ಮಾಡುವ ಕ್ಷಮತೆ, ಕಲ್ಪನಾ ಶಕ್ತಿ, ಸೃಜನಶೀಲತೆ, ಹಾಗೂ ಸಹಾನುಭೂತಿಯನ್ನು ಬೆಳೆಸುತ್ತದೆ. ಮೇಲ್ಕಂಡ ಉದ್ದೇಶದ ಗುರಿಯನ್ನು ಸಾಧಿಸಲು ಇಲಾಖೆಯಿಂದ “ಓದುವ ಹವ್ಯಾಸ ಜ್ಞಾನದ ವಿಕಾಸ ” ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗಿದೆ. ಸದರಿ ಕಾರ್ಯಕ್ರಮದಡಿಯಲ್ಲಿ ಈ ಕೆಳಕಂಡ ಮಾರ್ಗದರ್ಶಿಯನ್ನು ಪಾಲಿಸಬೇಕೆಂದು ಶಾಲೆಗಳಿಗೆ ತಿಳಿಸಲಾಗಿದೆ.

ಗ್ರಂಥಾಲಯ ಪುಸ್ತಕಗಳು, ಓದುವ ಸಾಮಗ್ರಿಗಳ ಸಂಗ್ರಹಣೆ ಮತ್ತು ಸ್ಥಾಪನೆ:
·
ಕಾಲ್ಪನಿಕ, ವಾಸ್ತವಿಕ, ಅವಾಸ್ತವಿಕ, ಪರಿಕಲ್ಪನೆ, ಜಾನಪದ, ಕವನ, ಕವಿತೆ, ನಾಟಕ, ಕಾಮಿಕ್ ಈ ಎಲ್ಲಾ ಪುಕಾರಗಳ ಪುಸ್ತಕಗಳು ಗ್ರಂಥಾಲಯಗಳಲ್ಲಿ ಓದುವ ಮೂಲೆಗಳಲ್ಲಿ ಲಭ್ಯವಿರಬೇಕು. ಕೇವಲ ಪಠ್ಯಪುಸ್ತಕಗಳನ್ನು ಓದುವುದರಿಂದ ಶಿಕ್ಷಕರ ಗಮನ ಮತ್ತು ಮಕ್ಕಳ ಜ್ಞಾನವು ತರಗತಿಯಲ್ಲಿ ಅಂಕಗಳನ್ನು ಗಳಿಸುವುದಕ್ಕೆ ಮಾತ್ರ ಸೀಮಿತವಾಗಿರುತ್ತದೆ. ಮಕ್ಕಳ ಕ್ರಿಯಾಶೀಲತೆ, ವಿಮರ್ಶಾತ್ಮಕ ಬೆಳವಣಿಗೆಗೆ ಎಲ್ಲಾ ಗುಣಮಟ್ಟದ ಸಾಹಿತ್ಯವನ್ನು ಓದುವುದು ಅಗತ್ಯವಾಗಿದೆ.

ಎಸ್.ಎಸ್.ಎಲ್.ಸಿ ಓದುವ ಮಕ್ಕಳಿಗೆ ಎಸ್.ಎಸ್.ಎಲ್.ಸಿ ನಂತರ ಮುಂದೇನು? ಎಂಬ ಶೀರ್ಷಿಕೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ಭವಿಷ್ಯದ ವ್ಯಾಸಂಗಕ್ಕೆ ಮಾರ್ಗದರ್ಶನವಾಗಿ ಸ್ವತಂತ್ರವಾಗಿ ತೀರ್ಮಾನಿಸಲು ಸಹಾಯವಾಗುವಂತೆ ಪೂರಕ ದಾಖಲೆಗಳನ್ನು ಸಂಗ್ರಹಿಸಿಡುವುದು.

ಗ್ರಂಥಾಲಯ ಅನುದಾನವನ್ನು ಸಮಗ್ರ ಶಿಕ್ಷಣ ಕರ್ನಾಟಕದ ವತಿಯಿಂದ ಪ್ರತಿ ವರ್ಷ ರಾಜ್ಯದ ಎಲ್ಲಾ ಶಾಲೆಗಳಿಗೆ ನೀಡಲಾಗುತ್ತಿದೆ. ಅಲ್ಲದೆ ವಿದ್ಯಾರ್ಥಿಗಳಿಂದ ಸಂಗ್ರಹಿಸಲಾಗುತ್ತಿರುವ ರೀಡಿಂಗ್ ರೂಮ್(RR) ನಿಧಿಯಿಂದ ಕೂಡಾ ಅನುದಾನ ಶಾಲೆಗಳಲ್ಲಿ ಲಭ್ಯವಿದೆ. ಈ ಅನುದಾನವನ್ನು ಬಳಸಿ ಗ್ರಂಥಾಲಯಗಳಿಗೆ ಕಡ್ಡಾಯವಾಗಿ ಶೈಕ್ಷಣಿಕ ವರ್ಷದಲ್ಲಿ ಮಕ್ಕಳಿಗಾಗಿ ಗುಣಮಟ್ಟದ ಓದುವ ಸಾಮಗ್ರಿಗಳನ್ನು ಖರೀದಿಸಬೇಕಾಗಿರುತ್ತದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕರ್ನಾಟಕ ಸರ್ಕಾರವು ಪ್ರಾಥಮಿಕ,ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಗುಣಮಟ್ಟದ ಪುಸ್ತಕಗಳ ಪಟ್ಟಿಯನ್ನು ಶಿಫಾರಸ್ಸು ಮಾಡಿದೆ. ಪುಸ್ತಕದ ಪಟ್ಟಿಯು ಡಿ.ಎಸ್.ಇ.ಆರ್.ಟಿ. ವೆಬ್ಬೆಟ್ನಲ್ಲಿ ಲಭ್ಯವಿದೆ. (https://dsert.karnataka.gov.in/storage/pdf-files/library/SSKLevel-1List-1.pdf)) ಮೇಲ್ಕಂಡ ಎಲ್ಲಾ ಪ್ರಕಾರಗಳ ಪುಸ್ತಕಗಳನ್ನು ಈ ಪಟ್ಟಿಯಿಂದ ಶಾಲೆಗಳು ಆಯ್ಕೆ ಮಾಡಿ ಖರೀದಿಸಬಹುದು., ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಥವಾ ರೂಮ್ ಟು ರೀಡ್, ಪಥಮ್, ಎಪಿಎಫ್, ಕಲಿಕೆ ಟಾಟಾ ಟ್ರಸ್ಟ್ ಮುಂತಾದ ಇತರೆ ಎನ್ ಜಿ ಓ ಗಳ ಬೆಂಬಲದೊಂದಿಗೆ ಒದಗಿಸಿರುವ ಓದುವ ಸಾಮಗ್ರಿಗಳನ್ನು ಈ ಅವಧಿಯಲ್ಲಿ ಬಳಸಬೇಕು. ಗ್ರಂಥಾಲಯಗಳಲ್ಲಿ ಖರೀದಿ ಮಾಡಿದ ಪುಸ್ತಕಗಳನ್ನು ದಾಸ್ತಾನು ವಹಿಯಲ್ಲಿ (Accession Register) ರಲ್ಲಿ ನಮೂದಿಸಿರುವುದು.

A weekly library programme will be implemented for students of classes 01 to 10 in the state.
Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದ ಜನತೆ ಗಮನಕ್ಕೆ : `ಗಂಗಾ ಕಲ್ಯಾಣ, `ಸ್ವಾವಲಂಬಿ ಸಾರಥಿ’ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಜೂ.30 ಕೊನೆಯ ದಿನ.!

23/06/2025 10:04 AM2 Mins Read

BREAKING : ಸಾಬ್ರ ಹೆಸರಿಗೆ ಜಮೀನು ಪರಭಾರೆ ಮಾಡಿದ್ರೆ ನೇಣು ಹಾಕ್ತಿನಿ : ಅಧಿಕಾರಿಗಳಿಗೆ ಧಮ್ಕಿ ಹಾಕಿದ ಕಾಂಗ್ರೆಸ್ ಶಾಸಕ!

23/06/2025 10:02 AM1 Min Read

BREAKING : ಮಂಡ್ಯದಲ್ಲಿ ಘೋರ ದುರಂತ : ತಲೆ ಮೇಲೆ ವಿದ್ಯುತ್ ಕಂಬ ಮುರಿದು ಬಿದ್ದು ಲೈನ್ ಮ್ಯಾನ್ ಸಾವು!

23/06/2025 9:51 AM1 Min Read
Recent News

BIG NEWS : ರಾಜ್ಯದ ಜನತೆ ಗಮನಕ್ಕೆ : `ಗಂಗಾ ಕಲ್ಯಾಣ, `ಸ್ವಾವಲಂಬಿ ಸಾರಥಿ’ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಜೂ.30 ಕೊನೆಯ ದಿನ.!

23/06/2025 10:04 AM

BREAKING : ಸಾಬ್ರ ಹೆಸರಿಗೆ ಜಮೀನು ಪರಭಾರೆ ಮಾಡಿದ್ರೆ ನೇಣು ಹಾಕ್ತಿನಿ : ಅಧಿಕಾರಿಗಳಿಗೆ ಧಮ್ಕಿ ಹಾಕಿದ ಕಾಂಗ್ರೆಸ್ ಶಾಸಕ!

23/06/2025 10:02 AM

SHOCKING : ಹೆಚ್ಚು `ಮೊಬೈಲ್’ ಬಳಕೆಯಿಂದ `ಮೈಗ್ರೇನ್’ ಅಪಾಯ 139% ಹೆಚ್ಚಳ : ವರದಿ

23/06/2025 10:01 AM

BREAKING :ಆಂದ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ವಿರುದ್ಧ FIR ದಾಖಲು | Jagan Mohan reddy

23/06/2025 9:59 AM
State News
KARNATAKA

BIG NEWS : ರಾಜ್ಯದ ಜನತೆ ಗಮನಕ್ಕೆ : `ಗಂಗಾ ಕಲ್ಯಾಣ, `ಸ್ವಾವಲಂಬಿ ಸಾರಥಿ’ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಜೂ.30 ಕೊನೆಯ ದಿನ.!

By kannadanewsnow5723/06/2025 10:04 AM KARNATAKA 2 Mins Read

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮವು 2025-26ನೇ ಸಾಲಿಗೆ ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ,…

BREAKING : ಸಾಬ್ರ ಹೆಸರಿಗೆ ಜಮೀನು ಪರಭಾರೆ ಮಾಡಿದ್ರೆ ನೇಣು ಹಾಕ್ತಿನಿ : ಅಧಿಕಾರಿಗಳಿಗೆ ಧಮ್ಕಿ ಹಾಕಿದ ಕಾಂಗ್ರೆಸ್ ಶಾಸಕ!

23/06/2025 10:02 AM

BREAKING : ಮಂಡ್ಯದಲ್ಲಿ ಘೋರ ದುರಂತ : ತಲೆ ಮೇಲೆ ವಿದ್ಯುತ್ ಕಂಬ ಮುರಿದು ಬಿದ್ದು ಲೈನ್ ಮ್ಯಾನ್ ಸಾವು!

23/06/2025 9:51 AM

ಅಡವಿಸಿದ್ದೇಶ್ವರ ಮಠದಲ್ಲಿ ಸ್ವಾಮೀಜಿಯ ಅನಾಚಾರ ಆರೋಪ : ಬಾಲಕಿಯ ಬಟ್ಟೆ ಹರಿದು ಎಳೆದಾಡಿದ ಯುವಕರು

23/06/2025 9:43 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.