ಹಾವೇರಿ : ನದಿಯಲ್ಲಿ ಮುಳುಗುತ್ತಿದ್ದ ವೃದ್ಧೆಯನ್ನು ಕೆ ಎಸ್ ಆರ್ ಟಿ ಸಿ ಬಸ್ ಚಾಲಕನೊಬ್ಬ ತನ್ನ ಜೀವದ ಹಂಗನ್ನು ತೊರೆದು ರಕ್ಷಣೆ ಮಾಡಿದ ಆದರೆ ಆಕೆಯನ್ನು ನದಿಯ ದಡದಲ್ಲಿ ತರುವಷ್ಟರಲ್ಲಿ ಪ್ರಾಣ ಹಾರಿ ಹೋಗಿತ್ತು.
ಹೌದು ಕುಮದ್ವತಿ ನದಿಯಲ್ಲಿ ಮುಳುಗಿ ವೃದ್ಧೆಯೊಬ್ಬರು ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲೂಕು ಮಾಸೂರು, ತಿಪ್ಪಾಯಿಕೊಪ್ಪ ಸೇತುವೆ ಬಳಿ ಇಂದು ನಡೆದಿದೆ. ನದಿಯಲ್ಲಿ ಕೊಚ್ಚಿ ಹೋಗ್ತಿದ್ದ ವಯೋವೃದ್ಧೆಯನ್ನು ಬಸ್ ಚಾಲಕ ಜೀವದ ಹಂಗು ತೊರೆದು ರಕ್ಷಿಸಲು ಮುಂದಾದರು. ಆದರೆ ನೀರು ಕುಡಿದು ಉಸಿರುಗಟ್ಟಿ ಮೃತಪಟ್ಟ ವಯೋವೃದ್ಧೆ ಮೃತಪಟ್ಟಿದ್ದಾರೆ.
ನೀರಲ್ಲಿ ಕೊಚ್ಚಿ ಹೋಗ್ತಿದ್ದ ವೃದ್ಧೆಯನ್ನ ನೋಡಿದ ಕೆಎಸ್ಆರ್ಟಿಸಿ ಬಸ್ ಚಾಲಕ ರಕ್ಷಿಸಲು ನೀರಿಗೆ ಹಾರಿದ್ದರು. ವಯೋವೃದ್ಧೆಯನ್ನ ರಕ್ಷಿಸಿ ದಡಕ್ಕೆ ತರುವಷ್ಟರಲ್ಲಿ ವೃದ್ಧೆಯ ಜೀವ ಹಾರಿ ಹೋಗಿತ್ತು. ಪ್ರಾಣದ ಹಂಗು ತೊರೆದು ನದಿಗೆ ಹಾರಿದ್ದ ಬಸ್ ಚಾಲಕ ಮಜೀದ್ ಗೆ ಸ್ಥಳೀಯರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ರಟ್ಟಿಹಳ್ಳಿ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.