ಬೆಂಗಳೂರು: ನಗರದಲ್ಲಿ ಇಂದು ರಾಜ್ಯ ಸರ್ಕಾರದ ಅಕ್ರಮಗಳ ವಿರುದ್ಧ ಹೋರಾಡುವ ಸಂಬಂಧ ನಡೆದಂತ ಬಿಜೆಪಿ-ಜೆಡಿಎಸ್ ನಾಯಕರ ಸಭೆಯ ವೇಳೆಯಲ್ಲಿ ಸುದ್ದಿಗೋಷ್ಠಿಯನ್ನು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ನಡೆಸಿದರು. ಈ ವೇಳೆಯಲ್ಲಿ ಸುದ್ದಿಗೋಷ್ಠಿಯಲ್ಲೇ ಅವರ ಮೂಗಿನಿಂದ ರಕ್ತಸ್ತ್ರಾವ ಆಗಿರುವುದಾಗಿ ತಿಳಿದು ಬಂದಿದೆ.
ಇಂದು ಬೆಂಗಳೂರಿನ ಖಾಸಗಿ ಹೋಟೆಲ್ ಒಂದರಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಸಭೆ ನಡೆಯಿತು. ರಾಜ್ಯ ಸರ್ಕಾರದ ಅಕ್ರಮಗಳ ವಿರುದ್ಧ ಹೋರಾಟದ ಬಗ್ಗೆ ನಡೆದಂತ ಸಭೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಕೂಡ ಭಾಗಿಯಾಗಿದ್ದರು.
ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಲು ಹೆಚ್.ಡಿ ಕುಮಾರಸ್ವಾಮಿ ಪ್ರಾರಂಭಿಸಿದಾಗ ಅವರ ಮುಗಿನಲ್ಲಿ ರಕ್ತ ಸೋರುವುದಕ್ಕೆ ಶರುವಾಯ್ತು. ಕೂಡಲೇ ಸುದ್ದಿಗೋಷ್ಠಿಯನ್ನು ಮೊಟಕುಗೊಳಿಸಿದಂತ ಅವರು, ಅಲ್ಲಿಂದ ಆಸ್ಪತ್ರೆಗೆ ತೆರಳಿದ್ದಾಗಿ ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.
ಇಂದಿನ ಈ ಸಭೆಯಲ್ಲಿ ಆಗಸ್ಟ್.3ರಿಂದ ಬೆಂಗಳೂರಿನಿಂದ ಮೈಸೂರಿಗೆ ಮುಡಾ ಅಕ್ರಮ ಖಂಡಿಸಿ ಪಾದಯಾತ್ರೆ ನಡೆಸುವಂತ ನಿರ್ಧಾರವನ್ನು ಕೈಗೊಳ್ಳಲಾಯಿತು. ಆಗಸ್ಟ್.10ರಂದು ಮೈಸೂರಿನಲ್ಲಿ ಸಮಾರೋಪ ಸಮಾರಂಭವನ್ನು ನಡೆಸೋದಕ್ಕೆ ನಿರ್ಧರಿಸಲಾಗಿದೆ.
BREAKING: ಆ.3ರಿಂದ ಬೆಂಗಳೂರಿನಿಂದ ಮೈಸೂರಿಗೆ ‘ಬಿಜೆಪಿ-ಜೆಡಿಎಸ್ ನಾಯಕ’ರಿಂದ ‘ಪಾದಯಾತ್ರೆ’ ಆರಂಭ
ಪ್ರಯಾಣಿಕರ ಗಮನಕ್ಕೆ: ಜು.29ರ ನಾಳೆಯಿಂದ ಜು.4ರವರೆಗೆ ಈ ರೈಲುಗಳ ಸಂಚಾರ ರದ್ದು | Train Cancelled