ಬೆಂಗಳೂರು: ರಾಜ್ಯದ ಅನೇಕ ರೈತರು ಅನಧಿಕೃತವಾಗಿ ಪಂಪ್ ಸೆಟ್ ಹಾಕಿಕೊಂಡು ವಿದ್ಯುತ್ ಸಂಪರ್ಕಕ್ಕಾಗಿ ಕಾಯುತ್ತಿದ್ದಾರೆ. ಈ ರೈತರಿಗೆ ಎಸ್ಕಾಂ ಗುಡ್ ನ್ಯೂಸ್ ಒಂದನ್ನು ನೀಡಿದೆ. ಅದೇ ಈಗಾಗಲೇ ಸರ್ವೇ ನಡೆಸಲಾಗಿದ್ದು, ಶೀಘ್ರವೇ ವಿದ್ಯುತ್ ಸಂಪರ್ಕ ನೀಡುವುದಾಗಿ ಹೇಳಿದೆ.
ಈ ಬಗ್ಗೆ ಇಂಧನ ಸಚಿವ ಕೆ.ಜೆ ಜಾರ್ಜ್ ಅವರು ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಠಿಯಿಂದಾಗಿ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಉದ್ಭವಿಸಿರುವ ಪರಿಸ್ಥಿತಿಗಳ ಕುರಿತು ಎಲ್ಲಾ ಎಸ್ಕಾಂ ಹಿರಿಯ ಅಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಸಮಾಲೋಚನೆ ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಕುಸುಮ್ – ಜಂಟಿ ಸರ್ವೇ
“ಕೃಷಿಗೆ ಸೌರ ಪಂಪ್ ಸೆಟ್ ಗಳನ್ನು ಒದಗಿಸುವ ಕುಸುಮ್ ಬಿ ಯೋಜನೆಯಡಿ ಆನ್ ಲೈನ್ ಮೂಲಕ 26,238 ಅರ್ಜಿಗಳು ಬಂದಿದ್ದು, ಈ ಹಿಂದಿನ ಅನಧಿಕೃತ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸುವ ಅಡಿಯಲ್ಲಿ 10,073 ಬಂದಿರುವ ಅರ್ಜಿಗಳನ್ನು ಪರಿಶೀಲಿಸಲಾಗುತ್ತಿದೆ. ಅನಧಿಕೃತ ಸಂಪರ್ಕಗಳನ್ನು ಸಕ್ರಮಗೊಳಿಸಲು ಅರ್ಜಿ ಸಲ್ಲಿಸಿರುವವರ ಪಂಪ್ ಸೆಟ್ ಗಳು ಗ್ರಿಡ್ ನಿಂದ 500 ಮೀಟರ್ ಒಳಗೆ ಇದ್ದರೆ ವಿದ್ಯುತ್ ಪಂಪ್ ಸೆಟ್ ಒದಗಿಸಲಾಗುವುದು ಎಂದು ತಿಳಿಸಿದ್ದಾರೆ.
ಇನ್ನೂ ಉಳಿದವರಿಗೆ ಸೌರ ಪಂಪ್ ಸೆಟ್ ಒದಗಿಸಲಾಗುವುದು. ಇದಕ್ಕೆ ಫಲಾನುಭವಿಗಳು ಶೇ. 20ರಷ್ಟು ಅನುದಾನ ಭರಿಸಿದರೆ ಉಳಿದ ಶೇ. 30ರಷ್ಟನ್ನು ಕೇಂದ್ರ ಸರ್ಕಾರ ಮತ್ತು ಶೇ. 50ನ್ನು ರಾಜ್ಯ ಸರ್ಕಾರ ಭರಿಸುತ್ತದೆ. ಬಂದಿರುವ ಅರ್ಜಿಗಳ ಆಧಾರದ ಮೇಲೆ ಸರ್ವೇ ಕಾರ್ಯ ನಡೆಸಲಾಗುತ್ತಿದ್ದು, ಈ ಕೆಲಸ ಮುಗಿದ ಕೂಡಲೇ ಪಂಪ್ ಸೆಟ್ ಒದಗಿಸಲಾಗುವುದು,” ಎಂದು ಸಚಿವ ಕೆ.ಜೆ ಜಾರ್ಜ್ ಮಾಹಿತಿ ನೀಡಿದರು.
BREAKING :40 ವರ್ಷಗಳ ಹಿಂದೆಯೇ HD ಕುಮಾರಸ್ವಾಮಿಗೆ ‘ಮುಡಾ’ ಸೈಟ್ ಸಿಕ್ಕಿದೆ : ಸಿಎಂ ಸಿದ್ದರಾಮಯ್ಯ ತಿರುಗೇಟು
ಶಿವಮೊಗ್ಗ: ನಾಳೆ ಸಾಗರದ ‘ಕಾರ್ಯನಿರತ ಪತ್ರಕರ್ತರ ಸಂಘ’ದಿಂದ ‘ಪತ್ರಿಕಾ ದಿನಾಚರಣೆ’