ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಲಿಂಗನಮಕ್ಕಿ ಜಲನಯನ ವ್ಯಾಪ್ತಿಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಕಾರಣ, ಡ್ಯಾಂಗೆ ಹೆಚ್ಚಿನ ಒಳಹರಿವು ಹರಿದು ಬರುತ್ತಿದೆ. ಈ ಹಿನ್ನಲೆಯಲ್ಲಿ ಭರ್ತಿಗೆ ಕೇವಲ 6 ಅಡಿ ಮಾತ್ರವೇ ಬಾಕಿ ಉಳಿದಿದೆ. ಹೀಗಾಗಿ ನಾಳೆ ಡ್ಯಾಂನಿಂದ ನದಿಗೆ ನೀರು ಬಿಡುಗಡೆ ಮಾಡಲಾಗುತ್ತಿದ್ದು, ನದಿ ಪಾತ್ರದ ಜನರು ಎಚ್ಚರಿಕೆವಹಿಸುವಂತೆ ಸಾಗರ ತಾಲ್ಲೂಕು ಉಪ ವಿಭಾಗಾಧಿಕಾರಿ ಯತೀಶ್.ಆರ್ ಅವರು ಮನವಿ ಮಾಡಿದ್ದಾರೆ.
ಇಂದು ಸಾಗರದಲ್ಲಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದಿಂದ ಆಯೋಜಿಸಲಾಗಿದ್ದಂತ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದರು. ಈ ವೇಳೆಯಲ್ಲಿ ಲಿಂಗನಮಕ್ಕಿ ಡ್ಯಾಂ ಭರ್ತಿಯಾಗಲು ಕೇವಲ 6 ಅಡಿ ಮಾತ್ರವೇ ಬಾಕಿ ಇದೆ ಎಂದರು.
ಲಿಂಗನಮಕ್ಕಿ ಜಲಾಶಯಕ್ಕೆ ಹರಿದು ಬರುತ್ತಿರುವಂತ ಒಳಹರಿವಿನ ಪ್ರಮಾಣ 8,587 ಆಗಿದೆ. ಹೊರ ಹರಿವಿನ ಪ್ರಮಾಣ 5,636 ಆಗಿದೆ. ನಾಳೆ ಬೆಳಿಗ್ಗೆ 10 ಗಂಟೆಗೆ ಲಿಂಗನಮಕ್ಕಿ ಡ್ಯಾಂನಿಂದ ನದಿಗೆ ನೀರು ಬಿಡುಗಡೆ ಮಾಡಲಾಗುತ್ತಿದೆ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಮನವಿ ಮಾಡಿದರು.
ಲಿಂಗನಮಕ್ಕಿ ಡ್ಯಾಂನಿಂದ ನೀರನ್ನು ಶರಾವತಿ ನದಿಗೆ ಬಿಡುತ್ತಿರುವುದರಿಂದ ಕೆಲ ಗ್ರಾಮಗಳಲ್ಲಿ ನೆರೆ ಉಂಟಾಗುವ ಸಾಧ್ಯತೆ ಇದೆ. ಶರಾವತಿ ನದಿ ಪಾತ್ರಕ್ಕೆ ಯಾರು ಇಳಿಯಬಾರದು. ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸಾಗರ ಉಪ ವಿಭಾಗಾಧಿಕಾರಿ ಯತೀಶ್.ಆರ್ ಅವರು ತಿಳಿಸಿದರು.
ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು
BREAKING : ಪ್ರವಾಹದಿಂದ ಮನೆ ಕಳೆದುಕೊಂಡವರಿಗೆ 2.5 ಲಕ್ಷ ಪರಿಹಾರದ ಜೊತೆಗೆ ಹೊಸ ಮನೆ : ಸಚಿವ ಕೃಷ್ಣ ಭೈರೇಗೌಡ
ಆಗಸ್ಟ್.2ರಿಂದ ‘SSLC ಪರೀಕ್ಷೆ-3’ ಆರಂಭ: ‘97,933 ವಿದ್ಯಾರ್ಥಿ’ಗಳು ನೋಂದಣಿ | SSLC Exam-3