Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಬೇಜವಾಬ್ದಾರಿ, ವಿಷಾದಕರ’ : ಪ್ರಧಾನಿಯ 5 ರಾಷ್ಟ್ರಗಳ ಪ್ರವಾಸಕ್ಕೆ ಪಂಜಾಬ್ ಸಿಎಂ ಅಪಹಾಸ್ಯ, ವಿದೇಶಾಂಗ ಸಚಿವಾಲಯ ತೀವ್ರ ಆಕ್ರೋಶ

10/07/2025 10:07 PM

ನಕಲಿ ನೀಟ್ ಪಿಜಿ ನೋಟಿಸ್’ಗಳು, ಸಾಮಾಜಿಕ ಮಾಧ್ಯಮ ಪೋಸ್ಟ್’ಗಳ ಕುರಿತು ಎಚ್ಚರದಿಂದಿರಿ : ವೈದ್ಯಕೀಯ ಮಂಡಳಿಯ ಸಲಹೆ

10/07/2025 9:55 PM

SHOCKING : ಮೊಬೈಲ್ ನೋಡಿ, ನೋಡಿ ಕುತ್ತಿಗೆ ಚಲಿಸುವ ಸಾಮರ್ಥ್ಯ ಕಳೆದುಕೊಂಡ ವ್ಯಕ್ತಿ, ನೀವೂ ಜಾಗರೂಕರಾಗಿರಿ!

10/07/2025 9:38 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ ‘ಮಳೆಹಾನಿ’ಯಿಂದ ಮನೆ ಕಳೆದುಕೊಂಡವರಿಗೆ ಗುಡ್ ನ್ಯೂಸ್: ಪರಿಹಾರ ಹೆಚ್ಚಳ
KARNATAKA

ರಾಜ್ಯ ಸರ್ಕಾರದಿಂದ ‘ಮಳೆಹಾನಿ’ಯಿಂದ ಮನೆ ಕಳೆದುಕೊಂಡವರಿಗೆ ಗುಡ್ ನ್ಯೂಸ್: ಪರಿಹಾರ ಹೆಚ್ಚಳ

By kannadanewsnow0903/08/2024 5:30 AM

ಬೆಂಗಳೂರು: ರಾಜ್ಯ ಸರ್ಕಾರದಿಂದ ಮಳೆಹಾನಿಯಿಂದ ಮನೆಹಾನಿಗೊಂಡ ಸಂತ್ರಸ್ತ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಪರಿಹಾರದ ಹಣವನ್ನು ಹೆಚ್ಚಳ ಮಾಡಿ, ಸರ್ಕಾರ ಆದೇಶಿಸಿದೆ. 

ಈ ಕುರಿತಂತೆ ಕಂದಾಯ ಇಲಾಖೆಯ ವಿಪತ್ತು ನಿರ್ವಹಣೆ ಮತ್ತು ಸೇವೆಗಳ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ಭಾರತೀಯ ಹವಾಮಾನ ಇಲಾಖೆಯು ದಿನಾಂಕ: ಇಲಾಖೆಯು ದಿನಾಂಕ: 15.04,2024 ರಂದು ನೀಡಿರುವ ಮುನ್ಸೂಚನೆಯಲ್ಲಿ ನೈಋತ್ಯ ಮುಂಗಾರು-2024 ರ ಮೊದಲ ಹಂತದ ಕಾರ್ಯಚರಣೆಯ ಧೀರ್ಘ ವ್ಯಾಪ್ತಿಯ ಮುನ್ಸೂಚನೆಯ (LRF) ಪುಕಾರ ಒಟ್ಟಾರೆಯಾಗಿ ದೇಶದಾದ್ಯಂತ ಮಳೆಯು ವಾಡಿಕೆಗಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದ್ದು, ಅದರಂತೆ ಈಗಾಗಲೇ ರಾಜ್ಯದಲ್ಲಿ 2024ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ವಿವಿಧ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ಇದರಿಂದಾಗಿ ಹಲವಾರು ಮನೆ ಹಾನಿ / ಗೃಹೋಪಯೋಗಿ ವಸ್ತುಗಳು ಹಾನಿಯಾಗಿರುವುದು ವರದಿಯಾಗಿರುತ್ತದೆ ಎಂದಿದ್ದಾರೆ.

ಅದರಂತೆ ನೈಸರ್ಗಿಕ ವಿಕೋಪಗಳಿಂದ ಉಂಟಾಗುವ ಹಾನಿಗಳಿಗೆ ನೀಡಬಹುದಾದ ಪರಿಹಾರಗಳ ಕುರಿತು ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ / ರಾಜ್ಯ ವಿಪತ್ತು ಪರಿಹಾರ ನಿಧಿಯ Items and Norms of Assistance ಮಾರ್ಗಸೂಚಿಗಳನ್ನು ಭಾರತ ಸರ್ಕಾರದ ಗ್ರಹ ಮಂತ್ರಾಲಯವು ದಿನಾಂಕ:11/07/2023 ರಂದು ಹೊರಡಿಸಿರುತ್ತದೆ. ಸದರಿ ಮಾರ್ಗಸೂಚಿಗಳಲ್ಲಿ ನಿಗದಿಪಡಿಸಿರುವ ಪರಿಹಾರ ಮೊತ್ತವನ್ನು ಮಾತ್ರ ರಾಜ್ಯ ವಿಪತ್ತು ಪರಿಹಾರ ನಿಧಿಯ ಅನುದಾನದಲ್ಲಿ ಭರಿಸಲು ಅವಕಾಶವಿರುತ್ತದೆ, ಆದ್ದರಿಂದ ಪುಸ್ತುತ 2024-25 ನೇ ಸಾಲಿನ ಮುಂಗಾರು ಹಾಂಗಮಿನಲ್ಲಿ (1ನೇ ಜೂನ್ ರಿಂದ 30ನೇ ಸಪ್ಟೆಂಬರ್ ರವರೆಗೆ) ಭಾರಿ ಮಳೆಯಿಂದ ಉಂಟಾಗುವ ನೈಸರ್ಗಿಕ ವಿಪತ್ತುಗಳಿಗೆ, ಭಾರತ ಸರ್ಕಾರವು ದಿನಾಂಕ:11/07/2023 ರಂದು ಹೊರಡಿಸಿರುವ ಮಾರ್ಗಸೂಚಿಗಳಲ್ಲಿ ನಿಗದಿಪಡಿಸಿರುವ ಪರಿಹಾರ ಮೊತ್ತದ ಜೊತೆಗೆ ರಾಜ್ಯ ಸರ್ಕಾದಿಂದ ಅರ್ಹತೆಯಂತೆ ಮನೆ/ಹೆಚ್ಚುವರಿ ಮೊತ್ತವನ್ನು ಪಾವತಿಸಲು ನಿರ್ಧರಿಸಿ ಈ ಕೆಳಕಂಡಂತೆ ಆದೇಶದ್ದಾರೆ.

ಪುಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನಲೆಯಲ್ಲಿ, 2024-25 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ (1ನೇ ಜೂನ್ ರಿಂದ 30ನೇ ಸೆಪ್ಟೆಂಬರ್ ರವರೆಗೆ) ಉಂಟಾಗುವ ಅತಿವೃಷ್ಟಿ | ಪ್ರವಾಹದಿಂದ ಹಾನಿಯಾದ ಮನೆಗಳ ಪುನರ್ ನಿರ್ಮಾಣ | ದುರಸ್ತಿ ಕಾರ್ಯ ಹಾಗೂ ಪ್ರವಾಹದಿಂದಾಗಿ ಮನೆಯ ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ ಸಂತ್ರಸ್ತರಿಗೆ ಈ ಕೆಳಕಂಡಂತೆ ಪರಿಹಾರವನ್ನು ಪಾವತಿಸಲು ಮಂಜೂರಾತಿ ನೀಡಿ ಆದೇಶಿಸಿದ್ದಾರೆ.

1. ಪ್ರವಾಹದಿಂದ ಹಾನಿಗೊಳಗಾದ ಮನೆಗಳನ್ನು 02 ವರ್ಗಗಳಲ್ಲಿ (ಪೂರ್ಣ ಹಾನಿಯಾದ ಮನೆಗಳ ಮರು ನಿರ್ಮಾಣ ಮತ್ತು ಭಾಗಶ: ಹಾನಿಯಾದ ಮನೆಗಳ ದುರಸ್ತಿ) ವಿಂಗಡಿಸಿ ಪರಿಹಾರ ಪಾವತಿಸುವುದು.

2. ಪೂರ್ಣಹಾನಿಯಾದ ಮನೆಗಳಿಗೆ ಭಾರತ ಸರ್ಕಾರದ ಗ್ರಹ ಮಂತ್ರಾಲಯವು ದಿನಾಂಕ:11/07/2023ರಂದು ಹೊರಡಿಸಿರುವ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ | ರಾಜ್ಯ ವಿಪತ್ತು ಪರಿಹಾರ ನಿಧಿಯ Revised Items and Norms of Assistance ಮಾರ್ಗಸೂಚಿಗಳನ್ವಯ ರೂ.1.20 ಲಕ್ಷಗಳ ಪರಿಹಾರದ ಜೊತೆಗೆ ಹೆಚ್ಚುವರಿಯಾಗಿ ವಸತಿ ಇಲಾಖೆಯು ಅನುಷ್ಠಾನಗೊಳಿಸುತ್ತಿರುವ ದೇವರಾಜ್ ಅರಸು ವಸತಿ ಯೋಜನೆಯಡಿ ಮನ ನೀಡುವುದು. ದೇವರಾಜ್ ಅರಸು ವಸತಿ ಯೋಜನೆಯಡಿ ಗ್ರಾಮೀಣ ಮತ್ತು ನಗರ ಪುದೇಶಗಳಲ್ಲಿ ಸಾಮಾನ್ಯ ವರ್ಗಗಳಿಗೆ ಮಂಜೂರು ಮಾಡುವ ಮನೆಗೆ ರೂ.1.20 ಲಕ್ಷ ಮತ್ತು ಎಸ್‌ಸಿ/ಎಸ್‌ಟಿ ವರ್ಗಗಳಿಗೆ ಮಂಜೂರು ಮಾಡುವ ಮನೆಗೆ ರೂ.1.50 ಲಕ್ಷ ಮಂಜೂರು ಮಾಡುವುದು. ಈ ಮನೆಗಳನ್ನು ಜಿಲ್ಲಾಧಿಕಾರಿಗಳು ಅನುಮೋದನೆ ಮಾಡಿ ವಿವರಗಳೊಂದಿಗೆ ಫಲಾನುಭವಿಗಳ ಪಟ್ಟಿಯನ್ನು RGRHCL ಪರಿಹಾರ ತಂತ್ರಾಂಶದಲ್ಲಿ ಜಿಲ್ಲಾಧಿಕಾರಿಗಳ ಹಂತದಲ್ಲಿಯ ವಿವರಗಳನ್ನು ದಾಖಲಿಸುವುದು.

3. ಅನಧಿಕೃತ ಜಮೀನಿನಲ್ಲಿ ಸಂಪೂರ್ಣ ಹಾನಿಗೊಳಗಾದ ಮನೆಗಳಿಗೆ ಒಂದು ಬಾರಿ ಪರಿಹಾರವಾಗಿ ರೂ.1.00 ಲಕ್ಷಗಳನ್ನು ಪಾವತಿಸುವುದು ಮತ್ತು ಯಾವುದೇ ಮನೆಯನ್ನು ಮಂಜೂರು ಮಾಡುವಂತಿಲ್ಲ.

4. ಭಾರತ ಸರ್ಕಾರದ ಗ್ರಹ ಮಂತ್ರಾಲಯವು ದಿನಾಂಕ:11/07/2023ರಂದು ಹೊರಡಿಸಿರುವ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ / ರಾಜ್ಯ ವಿಪತ್ತು ಪರಿಹಾರ ನಿಧಿಯ Revised Items and Norms of Assistance ರ ಮಾರ್ಗಸೂಚಿಗಳನ್ವಯ ಭಾಗಶಃ ಹಾನಿಗೊಳಗಾದ ಮನೆಗಳ ದುರಸ್ತಿಗೆ ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ ರೂ.6,500/-ಗಳ ಜೊತೆಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿಯಾಗಿ ರೂ.43,500/-ಗಳು ಸೇರಿದಂತೆ ಒಟ್ಟು ರೂ.50,000/-ಗಳನ್ನು ಪಾವತಿಸುವುದು.

5. ನೈಸರ್ಗಿಕ ತುರ್ತು ಕಾರ್ಯಗಳಿಗೆ ಜಿಲ್ಲಾಧಿಕಾರಿಗಳ పిడి ಖಾತೆಗೆ ಒದಗಿಸಿರುವ ಅನುದಾನವನ್ನು ನಂತರ ಲೆಕ್ಕ ಹೊಂದಾಣಿಕೆ ಮಾಡಿಕೊಳ್ಳಲಾಗುವುದು.

6. ಭಾರತ ಸರ್ಕಾರದ ಗ್ರಹ ಮಂತ್ರಾಲಯವು ದಿನಾಂಕ:11/07/2023ರಂದು ಹೊರಡಿಸಿರುವ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ / ರಾಜ್ಯ ವಿಪತ್ತು ಪರಿಹಾರ ನಿಧಿಯ Revised Items and Norms of Assistance ರ ಮಾರ್ಗಸೂಚಿಗಳನ್ವಯ ಪ್ರವಾಹದಿಂದ ಬಟ್ಟೆ ಕಳೆದುಕೊಂಡರೆ ರೂ.2,500/- ಹಾಗೂ ಗೃಹೋಪಯೋಗಿ ವಸ್ತುಗಳನ್ನು ಹಾನಿಯಾದರೆ ರೂ.2,500/- ಗಳ ಪರಿಹಾರ ಪಾವತಿಸಲು ನಿಗದಿಯಾಗಿದ್ದು, ಅದರಂತೆ ರೂ.5,000/- ಗಳನ್ನು ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ ಪಾವತಿಸುವುದು.

ಅತಿವೃಷ್ಟಿ / ಪ್ರವಾಹದಿಂದ ಹಾನಿಯಾದ ಮನೆಗಳ ಪುನರ್ ನಿರ್ಮಾಣ / ದುರಸ್ತಿ ಕಾರ್ಯ ಹಾಗೂ ಪುವಾಹದಿಂದಾಗಿ ಮನೆಯ ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ ಸಂತ್ರಸ್ತರಿಗೆ ಮೇಲೆ ತಿಳಿಸಿರುವಂತೆ ಪರಿಹಾರವನ್ನು ಈ ಕೆಳಕಂಡ ಷರತ್ತುಗಳ ಪಾಲನೆಗೆ ಒಳಪಟ್ಟು ಪಾವತಿಸಲು ಜಿಲ್ಲಾಧಿಕಾರಿಗಳಿಗೆ ಅನುಮತಿ ನೀಡಿದೆ.

ಷರತ್ತುಗಳು:

1. ಜಿಲ್ಲಾಧಿಕಾರಿಗಳು ಪರಿಹಾರ ಮೊತ್ತವನ್ನು ನಿಯಮಾನುಸಾರ ಅರ್ಹ ಸಂತ್ರಸ್ತರುಗಳಿಗೆ ನೇರವಾಗಿ ಅವರ ಆಧಾರ್ ಜೋಡಣೆಯಾಗಿರುವ ಬ್ಯಾಂಕ್‌ ಖಾತೆಗಳಿಗೆ ಡಿಬಿಟಿ ಮೂಲಕ ಪರಿಹಾರವನ್ನು ಪಾವತಿಸಲು ಕ್ರಮವಹಿಸುವುದು.
2. ಅತಿವೃಷ್ಟಿ | / ಪ್ರವಾಹದಿಂದ ಮನೆ ಹಾನಿಯ ಬಗ್ಗೆ ಘಟನೆ ನಡೆದ ತಕ್ಷಣ (ಗರಿಷ್ಟ 2 ದಿನಗಳೊಳಗಾಗಿ ವರದಿಯಾದ 05 ದಿನಗಳ ಒಳಗಾಗಿ ಗ್ರಾಮ ಆಡಳಿತಾಧಿಕಾರಿ, ಪಂಚಾಯತ್‌ ಅಭಿವೃದ್ಧಿ ಅಧಿಕಾರಿ, ಸಹಾಯಕ ಅಭಿಯಂತರರು, ಪಂಚಾಯತ್ ರಾಜ್ ಎಂಜಿನಿಯರಿಂಗ್‌ ವಿಭಾಗ ಇವರುಗಳು ಜಂಟಿಯಾಗಿ ಸ್ಥಳ ಭೇಟಿ ನೀಡಿ, ಸರ್ವೆ ನಡೆಸಿ, ಹಾನಿ ವಿವರಗಳ ಕುರಿತು ವರದಿಯನ್ನು ತಹಶೀಲ್ದಾರ್‌ರವರಿಗೆ ನೀಡುವುದು.
3. ಮನಹಾನಿಯ ಜಂಟಿ ಸಮೀಕ್ಷೆ ವರದಿ ಸ್ವೀಕೃತವಾದ 03 ಕರ್ತವ್ಯದ ದಿನಗಳ ಒಳಗಾಗಿ ತಹಶೀಲ್ದಾರ್‌ರವರು ನಿಯಮಾನುಸಾರ ಪರಿಶೀಲಿಸಿ, ಸದರಿ ವರದಿಯ
ಪುಸ್ತಾವನೆಯನ್ನು ಉಪ ವಿಭಾಗಾಧಿಕಾರಿ ಮೂಲಕ ಜಿಲ್ಲಾಧಿಕಾರಿಗಳಿಗೆ ಸಲ್ಲಿಸುವುದು. ಪುಸ್ತಾವನೆಯನ್ನು ಉಪ ವಿಭಾಗಾಧಿಕಾರಿ ಮೂಲಕ ಜಿಲ್ಲಾಧಿಕಾರಿಗಳಿಗೆ ಸಲ್ಲಿಸುವುದು.

4. ಜಿಲ್ಲಾಧಿಕಾರಿಗಳು ಸದರಿ ಪುಸ್ತಾವನೆಯನ್ನು ಪರಿಶೀಲಿಸಿ, 07 ಕರ್ತವ್ಯದ ದಿನಗಳ ಒಳಗಾಗಿ ನಿರ್ಧಾರ ಕೈಗೊಂಡು, ಅರ್ಹ ಫಲಾನುಭವಿಗಳಿಗೆ ನಿಯಮಾನುಸಾರ ನೇರವಾಗಿ ಅವರ ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆಗಳಿಗೆ ಡಿಬಿಟಿ ಮೂಲಕ ಪರಿಹಾರವನ್ನು ಪಾವತಿಸಲು ಕ್ರಮವಹಿಸುವುದು.

5. ಜಿಲ್ಲಾಧಿಕಾರಿಗಳ ಪಿ.ಡಿ ಖಾತೆಯಲ್ಲಿರುವ ರಾಜ್ಯ ವಿಪತ್ತು ಪರಿಹಾರ ನಿಧಿ ಅನುದಾನವನ್ನು ಮೇಲೆ ತಿಳಿಸಿರುವ ನೈಸರ್ಗಿಕ ವಿಕೋಪಗಳಿಂದ ಉಂಟಾದ ಹಾನಿ ಪ್ರಕರಣಗಳಲ್ಲಿ ಪರಿಹಾರ ಪಾವತಿಸಲು ಬಳಸತಕ್ಕದ್ದು.

6. ಜಿಲ್ಲಾಧಿಕಾರಿಗಳು ಆರ್ಥಿಕ ವರ್ಷದ ಅಂತ್ಯಕ್ಕೆ ನಿಗಧಿತ ನಮೂನೆಯಲ್ಲಿ ಹಣ ಬಳಕ ಪುಮಾಣ ಪತ್ರವನ್ನು ಸರ್ಕಾರಕ್ಕೆ ಸಲ್ಲಿಸುವುದು. ಸಂತ್ರಸ್ತರ ಗುರುತಿಸುವಿಕೆಯಲ್ಲಿ ಯಾವುದೇ ರೀತಿಯ ಪುನರಾವರ್ತನೆಯಾಗದಂತ ನೋಡಿಕೊಳ್ಳತಕ್ಕದ್ದು.

8. ಪ್ರತಿ ತಿಂಗಳು ಜಿಲ್ಲೆ, ತಾಲ್ಲೂಕು ಹಾಗೂ ಗ್ರಾಮವಾರು ಫಲಾನುಭವಿಗಳ ವಿವರ, ವಿವರಗಳ ಮಾಹಿತಿಯನ್ನು ತಯಾರಿಸಿ, ಪಾವತಿಸಲಾಗದ ಪರಿಹಾರದ ಮೊತ್ತದ ವಿವರಗಳ ಮಾಹಿತಿಯನ್ನು ತಯಾರಿಸಿ ಸಂಬಂಧಪಟ್ಟ ಜಿಲ್ಲಾ ಕಛೇರಿಗಳಲ್ಲಿ, ತಾಲ್ಲೂಕು ಕಛೇರಿಗಳಲ್ಲಿ, ಗ್ರಾಮ ಪಂಚಾಯತಿಗಳಲ್ಲಿ ಹಾಗೂ ರೈತ ಸಂಪರ್ಕ ಕೇಂದ್ರಗಳಲ್ಲಿ ಪ್ರಕಟಿಸತಕ್ಕದ್ದು ಮತ್ತು ಸದರಿ ವಿವರಗಳನ್ನು ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಕಡ್ಡಾಯವಾಗಿ ತಮ್ಮ ಜಾಲತಾಣದಲ್ಲಿ (ವೆಬ್‌ಸೈಟ್‌ನಲ್ಲಿ) ಪಾರದರ್ಶಕತೆಗಾಗಿ ಹಾಗೂ ಸಾರ್ವಜನಿಕರ ಮಾಹಿತಿಗಾಗಿ ಪುಕಟಿಸುವುದು.

9. ಮನಹಾನಿ ಪ್ರಕರಣಗಳಿಗೆ ಸಂಬಂಧಿಸಿದಂತೆ ಅರ್ಹತೆಯನ್ನು ಹಾಗೂ ಮಾಹಿತಿಯನ್ನು ನಮೂದಿಸುವುದರಲ್ಲಿ ಮತ್ತು ಹಣ ಬಳಕೆಯಲ್ಲಿ ಯಾವುದೇ ಲೋಪವಾದಲ್ಲಿ ಸಂಭಂದಪಟ್ಟ ಅಧಿಕಾರಿ/ನೌಕರರನ್ನು ನೇರವಾಗಿ ಜವಾಬ್ದಾರರನ್ನಾಗಿ ಮಾಡಲಾಗುವುದು.

ಅತಿವೃಷ್ಟಿ / ಪ್ರವಾಹದಿಂದ ಹಾನಿಯಾದ ಮನೆಗಳ ವಿವರಗಳನ್ನು ಜಿಲ್ಲಾಧಿಕಾರಿಗಳು RGRHCL ಪರಿಹಾರ ತಂತ್ರಾಂಶದಲ್ಲಿ ದಾಖಲಿಸಲು ಅನುವಾಗುವಂತೆ, ಸದರಿ ತಂತ್ರಾಂಶವನ್ನು ಈ ಕೂಡಲೇ ಹಾಗೂ ದಿನಾಂಕ:30.09.2024 ರವರೆಗೆ ಸಕ್ರಿಯಗೊಳಿಸಲು ವ್ಯವಸ್ಥಾಪಕ ನಿರ್ದೇಶಕರು, ರಾಜೀವ್‌ ಗಾಂಧಿ ವಸತಿ ನಿಗಮ ನಿಯಮಿತ ರವರು ಕ್ರಮವಹಿಸುವುದು.

ಅತಿವೃಷ್ಟಿ / ಪುವಾಹದಿಂದ ದಿನಾಂಕ: 01.06.2024 ರಿಂದ ಇದುವರೆವಿಗೂ ಹಾನಿಯಾಗಿರುವ ಮನಗಳ ವಿವರ, ಅರ್ಹ ಫಲಾನುಭವಿಗಳ ವಿವರ, ಪಾವತಿಸಲಾದ ಪರಿಹಾರ ಮೊತ್ತ ಹಾಗೂ ಇನ್ನಿತರೆ ಅಗತ್ಯ ಮಾಹಿತಿಗಳನ್ನು ಹಾಗೂ 30ನೇ ಸೆಪ್ಟೆಂಬರ್ ರವರೆಗೆ (1ನೇ ಜೂನ್ ರಿಂದ 30ನೇ ಸೆಪ್ಟೆಂಬರ್ ರವರೆಗೆ) ಮನ ಹಾನಿಯ ವಿವರಗಳನ್ನು RGRHCL ಪರಿಹಾರ ತಂತ್ರಾಂಶದಲ್ಲಿ ದಾಖಲಿಸಲು ಜಿಲ್ಲಾಧಿಕಾರಿಗಳು ಕೂಡಲೇ ಕ್ರಮ ವಹಿಸುವುದು.

ಈ ಆದೇಶವನ್ನು ಆರ್ಥಿಕ ಇಲಾಖೆಯ ಟಿಪ್ಪಣಿ ಸಂಖ್ಯೆ: ಆಇ 540 ವೆಚ್ಚ-7/2021, ದಿನಾಂಕ:31.07.2024 ರಲ್ಲಿ ನೀಡಿರುವ ಸಹಮತದ ಅನುಸಾರ ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ.

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು

Share. Facebook Twitter LinkedIn WhatsApp Email

Related Posts

ಜೇನು ಕೃಷಿ ಕುರಿತ ತರಬೇತಿಗೆ ರೈತರಿಂದ ಅರ್ಜಿ ಆಹ್ವಾನ

10/07/2025 9:15 PM1 Min Read

ರಾಜ್ಯದ ನೇಕಾರರ ಗಮನಕ್ಕೆ: ನೇಕಾರ ಸಮ್ಮಾನ್ ಯೋಜನೆಗೆ ಅರ್ಜಿ ಆಹ್ವಾನ, ಜುಲೈ.15 ಲಾಸ್ಟ್ ಡೇಟ್

10/07/2025 9:06 PM1 Min Read

ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಸೌಲಭ್ಯಕ್ಕಾಗಿ ಸಹಾಯಧನಕ್ಕೆ ಅರ್ಜಿ ಆಹ್ವಾನ

10/07/2025 9:03 PM1 Min Read
Recent News

‘ಬೇಜವಾಬ್ದಾರಿ, ವಿಷಾದಕರ’ : ಪ್ರಧಾನಿಯ 5 ರಾಷ್ಟ್ರಗಳ ಪ್ರವಾಸಕ್ಕೆ ಪಂಜಾಬ್ ಸಿಎಂ ಅಪಹಾಸ್ಯ, ವಿದೇಶಾಂಗ ಸಚಿವಾಲಯ ತೀವ್ರ ಆಕ್ರೋಶ

10/07/2025 10:07 PM

ನಕಲಿ ನೀಟ್ ಪಿಜಿ ನೋಟಿಸ್’ಗಳು, ಸಾಮಾಜಿಕ ಮಾಧ್ಯಮ ಪೋಸ್ಟ್’ಗಳ ಕುರಿತು ಎಚ್ಚರದಿಂದಿರಿ : ವೈದ್ಯಕೀಯ ಮಂಡಳಿಯ ಸಲಹೆ

10/07/2025 9:55 PM

SHOCKING : ಮೊಬೈಲ್ ನೋಡಿ, ನೋಡಿ ಕುತ್ತಿಗೆ ಚಲಿಸುವ ಸಾಮರ್ಥ್ಯ ಕಳೆದುಕೊಂಡ ವ್ಯಕ್ತಿ, ನೀವೂ ಜಾಗರೂಕರಾಗಿರಿ!

10/07/2025 9:38 PM

ಜೇನು ಕೃಷಿ ಕುರಿತ ತರಬೇತಿಗೆ ರೈತರಿಂದ ಅರ್ಜಿ ಆಹ್ವಾನ

10/07/2025 9:15 PM
State News
KARNATAKA

ಜೇನು ಕೃಷಿ ಕುರಿತ ತರಬೇತಿಗೆ ರೈತರಿಂದ ಅರ್ಜಿ ಆಹ್ವಾನ

By kannadanewsnow0910/07/2025 9:15 PM KARNATAKA 1 Min Read

ಧಾರವಾಡ: ಧಾರವಾಡ ತೋಟಗಾರಿಕೆ ಇಲಾಖೆ ಹಾಗೂ ಪ್ರಾದೇಶಿಕ ತೋಟಗಾರಿಕಾ ಸಂಶೋಧನಾ ಮತ್ತು ವಿಸ್ತರಣೆ ಕೇಂದ್ರ (ಕುಂಬಾಪೂರ ಫಾರ್ಮ) ಧಾರವಾಡ ಇವರ…

ರಾಜ್ಯದ ನೇಕಾರರ ಗಮನಕ್ಕೆ: ನೇಕಾರ ಸಮ್ಮಾನ್ ಯೋಜನೆಗೆ ಅರ್ಜಿ ಆಹ್ವಾನ, ಜುಲೈ.15 ಲಾಸ್ಟ್ ಡೇಟ್

10/07/2025 9:06 PM

ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಸೌಲಭ್ಯಕ್ಕಾಗಿ ಸಹಾಯಧನಕ್ಕೆ ಅರ್ಜಿ ಆಹ್ವಾನ

10/07/2025 9:03 PM

ಸಾರ್ವಜನಿಕ ಸ್ಥಳಗಳಲ್ಲಿ ಗುಪ್ತವಾಗಿ ಮಹಿಳೆಯರ ವೀಡಿಯೋ ಚಿತ್ರೀಕರಿಸಿದ್ರೇ ಹೀಗೆ ಮಾಡಿ

10/07/2025 8:52 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.