ಶಿವಮೊಗ್ಗ : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ ಕೆಂಗೇರಿಯಲ್ಲಿ ಬಿಜೆಪಿ ಜೆಡಿಎಸ್ ನಾಯಕರು ಮೈಸೂರು ಜಿಲ್ಲಾ ಪಾದಯಾತ್ರೆಗೆ ಚಾಲನೆ ನೀಡಿದರು. ಇನ್ನು ಈ ಒಂದು ವಿಚಾರವಾಗಿ ಶಿವಮೊಗ್ಗದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅಧಿಕ್ರಿಯೆ ನೀಡಿದ್ದು,ಭ್ರಷ್ಟಾಚಾರದಲ್ಲಿ ‘ರ್ಯಾಂಕ್’ ಕೊಟ್ಟರೆ ಬಿವೈ ವಿಜಯೇಂದ್ರನೇ ನಂಬರ್ ಒನ್ ಸ್ಥಾನ ಪಡೆಯಲಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭ್ರಷ್ಟಾಚಾರದಲ್ಲಿ ರ್ಯಾಂಕ್ ಕೊಟ್ಟರೆ ಬಿ ವೈ ವಿಜಯೇಂದ್ರರೇ ನಂಬರ್ ಒನ್ ಸ್ಥಾನ ಪಡೆಯಲಿದ್ದಾರೆ. ಹಿಂದುಳಿದ ವರ್ಗದ ನಾಯಕನನ್ನು ತುಳಿಸುವ ಕೆಲಸ ಮಾಡುತ್ತಿದ್ದೀರಾ ಎಂದು ಶಿವಮೊಗ್ಗ ನಗರದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ವಾಗ್ದಾಳಿ ನಡೆಸಿದರು.
ದೆಹಲಿ ಸಿಎಂ ಕೇಜ್ರಿವಾಲ್ ಗೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿತ್ತು. ಕೇಜ್ರಿವಾಲ್ ಈಗ ಜೈಲಿನಲ್ಲಿ ಇದ್ದಾರೆ. ಆದರೂ ಒಳ್ಳೆಯ ಆಡಳಿತ ನಡೆಯುತ್ತಿದೆ. ಜೈಲಿಗೆ ಕಳುಹಿಸುವುದು ಅಂದರೆ ಬಿಜೆಪಿಯವರಿಗೆ ಬಹಳ ಖುಷಿ. ವಿಜಯೇಂದ್ರ ಬಗ್ಗೆ ಶಾಸಕ ಯತ್ನಾಳ್ ಹಿಗ್ಗ ಮುಗ್ಗಾ ಬೈಯುತ್ತಿದ್ದಾರೆ. ನಾಯಿ ತರಹ ಬೈಯುತ್ತಿದ್ದಾರೆ. ಅದರ ಬಗ್ಗೆ ನಾಚಿಕೆ ಇಲ್ವಾ? ತಮ್ಮ ವಿರುದ್ಧವೇ ವೀರೇಂದ್ರ ಪಾದಯಾತ್ರೆ ಮಾಡಿಕೊಳ್ಳುತ್ತಿದ್ದಾರೆ ಎಂದು ಮಧು ಬಂಗಾರಪ್ಪ ಕಿಡಿ ಕಾರಿದರು.