ರಾಮನಗರ: ಮಿಸ್ಟರ್ ವಿಜಯೇಂದ್ರ, ನಿಮ್ಮ ತಂದೆ ಕಣ್ಣೀರಾಕುತ್ತಾ ರಾಜೀನಾಮೆ ಕೊಟ್ಟಿದ್ದೇಕೆ? ಅದಕ್ಕೆ ಕಾರಣ ಯಾರು ಎಂಬುದನ್ನು ಮರೆತು ಬಿಟ್ರಾ ಅಂತ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.
ಬಿಜೆಪಿ-ಜೆಡಿಎಸ್ ಪಾದಯಾತ್ರೆ ವಿರುದ್ಧ ರಾಮನಗರದಲ್ಲಿ ಶನಿವಾರ ನಡೆದ ಜನಾಂದೋಲನ ಸಭೆಯಲ್ಲಿ ಮಾತನಾಡಿದ ಅವರು, “ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನಿನ್ನೆ ನನ್ನನ್ನು ಭ್ರಷ್ಟಾಚಾರದ ಪಿತಾಮಹ ಎಂದು ಕರೆದಿದ್ದಾರೆ. ಮಿಸ್ಟರ್ ವಿಜಯೇಂದ್ರ, ನಿಮ್ಮ ತಂದೆ ಏನು ತಪ್ಪು ಮಾಡಿದ್ದರು? ಅವರು ಯಾಕೆ ರಾಜೀನಾಮೆ ಕೊಟ್ಟರು? ನಿಮ್ಮ ತಂದೆ ವಿಧಾನಸೌಧದಲ್ಲಿ ಕಣ್ಣೀರು ಹಾಕುತ್ತಾ ರಾಜೀನಾಮೆ ನೀಡಿದ್ದು ಏಕೆ? ಈ ಬಗ್ಗೆ ನೀವು ಉತ್ತರ ನೀಡಬೇಕು ಎಂದರು.
ಈ ಹಿಂದೆ ಯಡಿಯೂರಪ್ಪ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಜೈಲಿಗೆ ಹೋಗಿದ್ದೇಕೆ? ಯಡಿಯೂರಪ್ಪ ಸಿಎಂ ಆಗಿದ್ದಾಗ ಅವರ ವಿಚಾರಣೆಗೆ ರಾಜ್ಯಪಾಲರು ಅನುಮತಿ ನೀಡಿದ್ದೇಕೆ? ವಿಜಯೇಂದ್ರ ಪಾದಯಾತ್ರೆ ಮಾಡುವ ಬದಲು, ಯಡಿಯೂರಪ್ಪ ಅವರು ಜೈಲಿಗೆ ಹೋಗಲು ಜೆಡಿಎಸ್ ಕಾರಣವಾಗಿದ್ದರ ಬಗ್ಗೆಯೂ ಉತ್ತರ ನೀಡಬೇಕು” ಎಂದು ಸವಾಲು ಹಾಕಿದರು.
ದೇವೇಗೌಡರ ಕುಟುಂಬದ ಭೂಕಬಳಿಕೆ ಬಗ್ಗೆ ಬಿಜೆಪಿ ಜಾಹೀರಾತು:
“ವಿಧಾನಸಭೆ ಚುನಾವಣೆ ಮುನ್ನ ಬಿಜೆಪಿಯವರು ‘ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದ ಭೂಕಬಳಿಕೆಯ ಪಕ್ಷಿನೋಟ’ ಎಂದು ಪತ್ರಿಕೆಗಳಲ್ಲಿ ಜಾಹೀರಾತು ನೀಡಿದ್ದರು. ಮುಡಾದಲ್ಲಿ ಆ ಕುಟುಂಬ ಮಾಡಿದ ಅಕ್ರಮ ನಿವೇಶನಗಳ ಬಗ್ಗೆ ಕುಮಾರಸ್ವಾಮಿ ಅವರ ಅರ್ಜಿ ಸಮೇತ ಪ್ರಕಟಣೆ ಮಾಡಿದ್ದಿರಿ. ಈ ಬಗ್ಗೆ ಉತ್ತರ ನೀಡುವಿರಾ ಯಡಿಯೂರಪ್ಪನವರೇ? ಅಶೋಕಣ್ಣ, ಸಿ.ಟಿ ರವಿ ಇದಕ್ಕೆ ಉತ್ತರ ಕೊಡ್ರಪ್ಪ? ನಿಮ್ಮ ಪಕ್ಷ ನೀಡಿರುವ ಪ್ರಕಟಣೆ ಬಗ್ಗೆ ಚರ್ಚೆ ಮಾಡಿ” ಎಂದು ಆಗ್ರಹಿಸಿದರು.
ವೀರಶೈವ, ಲಿಂಗಾಯತ ಸಮುದಾಯದವರಿಗೆ ಗುಡ್ ನ್ಯೂಸ್: ಈ ಯೋಜನೆಗಳಿಗೆ ಅರ್ಜಿ ಆಹ್ವಾನ
Horrific Accident: ಸ್ಕೂಟರ್ ಗೆ ಕಾರು ಡಿಕ್ಕಿ: ಮಹಿಳೆ ಸಾವು, ಮಗಳಿಗೆ ಗಂಭೀರ ಗಾಯ