ಮದ್ದೂರು: ಕುಮಾರಸ್ವಾಮಿ ಬ್ಲಾಕ್ ಮೇಲ್ ರಾಜಕಾರಣಿ. ಪಾದಯಾತ್ರೆಗೆ ಜೆಡಿಎಸ್ ಬರುವುದಿಲ್ಲ ಎಂದು ಬಿಜೆಪಿಗೆ ಬೆದರಿಸಿದರು. ನಂತರ ಜೊತೆಯಲ್ಲಿ ಹೋದರು. ನನ್ನ ಮೇಲೆ ಆರೋಪ ಮಾಡುತ್ತಿರುವ ಅವರಿಗೆ ಧನ್ಯವಾದಗಳು” ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಕಿಡಿಕಾರಿದ್ದಾರೆ..
ವಾಲ್ಮೀಕಿ ನಿಗಮದ ಹಗರಣವನ್ನು ಹೈಕಮಾಂಡಿಗೆ ಕಳುಹಿಸಲಾಗಿದೆ ಎನ್ನುವ ವಿಜಯೇಂದ್ರ ಅವರ ಆರೋಪದ ಬಗ್ಗೆ ಕೇಳಿದಾಗ “ಅವರ ತಂದೆ ರಾಜಿನಾಮೆಗೆ ಕಾರಣನಾದ ವ್ಯಕ್ತಿ ಆತ. ಮೊದಲ ಬಾರಿಗೆ ಶಾಸಕರಾಗಿ, ಬಿಜೆಪಿಯ ರಾಜ್ಯಾಧ್ಯಕ್ಷರಾಗಿದ್ದಾರೆ. ಅದನ್ನು ಖುಷಿಯಾಗಿ ಅನುಭವಿಸಲಿ” ಎಂದರು.
ಜನಾಂದೋಲನ ಯಾತ್ರೆಯನ್ನು ಬಿಜೆಪಿ ಪಶ್ಚತ್ತಾಪ ಯಾತ್ರೆ ಎಂದು ಕರೆದಿದ್ದಾರೆ ಎನ್ನುವ ಬಗ್ಗೆ ಕೇಳಿದಾಗ “ಅವರದ್ದು ನಿಜವಾದ ಪಶ್ಚತ್ತಾಪ ಯಾತ್ರೆ. ಕರ್ನಾಟಕದ ಹೆಸರು ಹಾಳು ಮಾಡಿದರು. ಭ್ರಷ್ಟರಾಜ್ಯವೆಂದು ಕೆಟ್ಟ ಹೆಸರು ತಂದರು. ನಾವೀಗ ಅದನ್ನು ಶುದ್ದೀಕರಣ ಮಾಡುತ್ತಿದ್ದೇವೆ” ಎಂದು ಹೇಳಿದರು.
ರಾಜ್ಯಪಾಲರ ತೀರ್ಮಾನ ಹಾಗೂ ಅವರ ಮುಂದಿನ ನಡೆ ಬಗ್ಗೆ ಕೇಳಿದಾಗ “ನೆಲದ ಕಾನೂನಿಗೆ ರಾಜ್ಯಪಾಲರು ಗೌರವ ನೀಡುತ್ತಾರೆ ಎಂದು ಭಾವಿಸಿರುವೆ. ಸಿಎಂ ಅವರಿಗೆ ನೋಟಿಸ್ ನೀಡುವ ಕೆಲಸಕ್ಕೆ ಕೈ ಹಾಕುವುದಿಲ್ಲ ಎಂದು ಭಾವಿಸಿರುವೆ. ರಾಜ್ಯಪಾಲರು ನಮ್ಮ ಸಲಹೆ ಕೇಳುತ್ತಾರೆ ಎಂದು ಭಾವಿಸಿದ್ದೇವೆ. ಇದಾಗದಿದ್ದರೆ ನಮ್ಮಬೇರೆ ಪ್ರಯತ್ನ ಮಾಡುತ್ತೇವೆ” ಎಂದರು.
ಪಾದಯಾತ್ರೆ ಬಗ್ಗೆ ಹಾಗೂ ನಡೆಸುತ್ತಿರುವವರಿಗೆ ನಿಮ್ಮ ಸಂದೇಶವೇನು ಎಂದಾಗ “ಶುಭವಾಗಲಿ. ಪಾದಯಾತ್ರೆಯ ಖುಷಿಯನ್ನು ಅನುಭವಿಸಲಿ. ಪಾದಯಾತ್ರೆಯನ್ನು ಗಂಭೀರವಾಗಿ ಪರಿಗಣಿಸಿಯೇ ಇಲ್ಲ” ಎಂದು ಹೇಳಿದರು.
ಆಸ್ತಿ ಚರ್ಚೆಗೆ ಕುಮಾರಸ್ವಾಮಿಯೇ ಮಹೂರ್ತ ನಿಗದಿ ಮಾಡಲಿ: ಡಿಸಿಎಂ ಡಿ.ಕೆ.ಶಿವಕುಮಾರ್ ಸವಾಲ್
BREAKING: ಆ.25ರಂದು ನಡೆಯಬೇಕಿದ್ದ ‘KAS ಪೂರ್ವಭಾವಿ ಪರೀಕ್ಷೆ’ ಮುಂದೂಡಿಕೆ | KAS Recuitment Exam
ನನ್ನ ಆಸ್ತಿ ಲೆಕ್ಕ ಕೇಳ್ತಾ ಇದ್ದೀಯಾ? ಎಲ್ಲಾ ಕೊಡ್ತೀನಿ, ಮೊದಲು ನಿನ್ನ ಸಹೋದರನ ಲೆಕ್ಕ ಕೊಡು: HDKಗೆ ಡಿಕೆಶಿ ಪ್ರಶ್ನೆ