ಚಿಕ್ಕಬಳ್ಳಾಪುರ: ಕೇಂದ್ರ ಮತ್ತು ರಾಜ್ಯ ರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ “ಕುಸುಮ ಸೌರ ವಿದ್ಯುತ್ ಬಿ ಮತ್ತು ಸಿ ಯೋಜನೆ”ಯ ಅನುಷ್ಠಾನವು ನಮ್ಮ ರಾಜ್ಯದ ರೈತರ ವಿದ್ಯುತ್ ಬೇಡಿಕೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲಿದೆ ಎಂದು ಇಂಧನ ಸಚಿವ ಕೆ.ಜೆ.ಜರ್ಜ್ ಅವರು ತಿಳಿಸಿದರು.
ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುರುವಾರ ನಡೆದ “ಇಂಧನ ಇಲಾಖೆಯ ವಿಷಯಗಳ ಪ್ರಗತಿ ಪರಿಶೀಲನಾ ಸಭೆ”ಯಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದು ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಕಳೆದ ರ್ಷ ರಾಜ್ಯದಲ್ಲಿ ಬರಗಾಲ ಪರಿಸ್ಥಿತಿ ಎದುರಾಗಿದ್ದರಿಂದ ಬೇರೆ ರಾಜ್ಯಗಳಿಂದ ವಿದ್ಯುತ್ ಖರೀದಿಸಿ ವಿದ್ಯುತ್ ಪೂರೈಕೆ ಮಾಡುವಂತಹ ಪರಿಸ್ಥಿತಿ ಉಂಟಾಗಿತ್ತು, ಅಲ್ಲದೆ ಉತ್ತರ ಪ್ರದೇಶ ಮತ್ತು ಪಂಜಾಬ್ ರಾಜ್ಯಗಳಿಂದ ವಿದ್ಯುತ್ ಶಕ್ತಿಯನ್ನು ಬೇಸಿಗೆಯಲ್ಲಿ ಸಾಲವಾಗಿ ಪಡೆದು ಮರು ದಿನಗಳಲ್ಲಿ ವಾಪಸ್ಸು ಮಾಡುವ ಒಪ್ಪಂದದ ಮೇರೆಗೆ ವಿದ್ಯುತ್ ಪಡೆಯಲಾಗಿತ್ತು. ಅಂತಹ ಸಂಕಷ್ಠದ ಪರಿಸ್ಥಿತಿಯನ್ನು ರ್ಕಾರ ಸರ್ಥವಾಗಿ ಎದುರಿಸಿ ರೈತರಿಗೆ, ನಾಗರಿಕರಿಗೆ, ಕೈಗಾರಿಕೆಗಳಿಗೆ ವಿದ್ಯುತ್ ಪೂರೈಸುವ ಕರ್ಯವನ್ನು ಮಾಡಲಾಗಿದೆ. ಪ್ರಸ್ತುತ ವರುಣನ ಕೃಪೆಯಿಂದ ಹಾಗೂ ರ್ಕಾರ ಕೈಗೊಂಡ ಕೆಲವು ಮುನ್ನೆಚ್ಚರಿಕೆ ಕ್ರಮಗಳಿಂದ ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಹೆಚ್ಚಾಗಿ ಬೇರೆ ರಾಜ್ಯಗಳಿಗೆ ಪೂರೈಸುವ ಸ್ಥಿತಿಗೆ ತಲುಪಿದ್ದೇವೆ. ಸಾಲವಾಗಿ ಪಡೆದಿದ್ದ ವಿದ್ಯುತ್ ನ್ನು ಮರು ಪೂರೈಸುತ್ತಿದ್ದೇವೆ. ಜಲ ವಿದ್ಯುತ್, ಪವನ ಶಕ್ತಿ ಹಾಗೂ ಸೌರಶಕ್ತಿ ಸೇರಿದಂತೆ ಇತರ ಮೂಲಗಳಿಂದ ವಿದ್ಯುತ್ ಉತ್ಪಾದಿಸುವ ಯುಕ್ತ ಕ್ರಮಗಳನ್ನು ಹೀಗೆಯೇ ಮುಂದುವರೆಸಿದರೆ ರಾಜ್ಯವು ವಿದ್ಯುತ್ ಉತ್ಪಾದನೆಯಲ್ಲಿ ಮೊದಲನೆ ಸ್ಥಾನಕ್ಕೆ ಬರಲಿದೆ. ಆ ನಿಟ್ಟಿನಲ್ಲಿ ನಮ್ಮ ರ್ಕಾರ ಕುಸುಮ ಸೌರ ವಿದ್ಯುತ್ ಯೋಜನೆಯನ್ನು ರಾಜ್ಯದಾದ್ಯಂತ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಮುಂದಾಗಿ ಸಹಾಯಧನವನ್ನು ಹೆಚ್ಚಿಸಿದೆ. ಪ್ರಸ್ತುತ ರಾಜ್ಯ ರ್ಕಾರ ಶೇ. 50 ರಷ್ಟು ಸಹಾಯಧನ ನೀಡಲು ಸಚಿವ ಸಂಪುಟದಲ್ಲಿ ತರ್ಮಾನಿಸಲಾಗಿದೆ. ಈ ಯೋಜನೆಗೆ ಕೇಂದ್ರ ರ್ಕಾರ ಶೇ. 30 ರಷ್ಟು ಸಹಾಯಧನ ನೀಡುತ್ತಿದ್ದು, ಪ್ರಸ್ತುತ ರಾಜ್ಯದಲ್ಲಿ ಒಟ್ಟು ಶೇ. 80 ರಷ್ಟು ಸಹಾಯಧನವನ್ನು ಕುಸುಮ ಯೋಜನೆಯಡಿ ರೈತರ ನೀರಾವರಿ ಉದ್ದೇಶಗಳಿಗೆ ನೀಡಲು ಮುಂದಾಗಿದೆ. ಈ ಯೋಜನೆಯು ಅನುಷ್ಠಾನಗೊಂಡಲ್ಲಿ ರೈತರ ವಿದ್ಯುತ್ ಬೇಡಿಕೆಯ ಎಲ್ಲ ಸಮಸ್ಯೆಗಳು ಪರಿಹಾರವಾಗಲಿದೆ. ಜೊತೆಗೆ ಮುಂದಿನ ದಿನಗಳಲ್ಲಿ ವಿದ್ಯುತ್ ಕೊರತೆಯ ಸಂಕಷ್ಟಕ್ಕೆ ರಾಜ್ಯ ಸಿಲುಕದಂತೆ ಕಾಪಾಡಬಹುದಾಗಿದೆ. ಆದ್ದರಿಂದ ರೈತರು ಆನ್ ಲೈನ್ ಮೂಲಕ ಈ ಯೋಜನೆಯಡಿ ರ್ಜಿ ಹಾಕಿಕೊಳ್ಳಲು ಮನವಿ ಮಾಡಿದರು.
ಕುಸುಮ ಸೌರ ವಿದ್ಯುತ್ ಯೋಜನೆಯಡಿ ನೋಂದಾಯಿತ ರೈತರಿಗೆ ಕೊಳವೆ ಬಾವಿ ಮತ್ತು ನೀರು ಇದ್ದಲ್ಲಿ ಸೌರ ವಿದ್ಯುತ್ ಪಂಪ್ ಸೆಟ್ ಮತ್ತು ಪ್ಯಾನಲ್ ಬರ್ಡ್ ಸಹಿತ ಇತರ ಪರಿಕರಗಳನ್ನು ರ್ಕಾರ ನೀಡಲಿದೆ. ಅದಕ್ಕಾಗಿ ರ್ಹ ಹಾಗೂ ಮಾನ್ಯತೆ ಪಡೆದ ಗುತ್ತಿಗೆದಾರರನ್ನು ಗರ್ತಿಸಲಾಗಿದೆ. ಜೊತೆಗೆ ಸ್ಥಳೀಯವಾಗಿ 4-5 ಮೆಗಾವ್ಯಾಟ್ ಸೌರ ವಿದ್ಯುತ್ ಉತ್ಪಾದಿಸಲು ವಿದ್ಯುತ್ ಉಪಕೇಂದ್ರಗಳನ್ನು ಸ್ಥಾಪಿಸಲು 20-30 ಎಕರೆ ಜಾಗವನ್ನು ತಾಲ್ಲೂಕುವಾರು ನೀಡುವಂತೆ ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರಿಗೆ, ಜಿಲ್ಲಾಧಿಕಾರಿಗಳಿಗೆ ತಿಳಿಸಲಾಗಿದೆ. ಅದರಂತೆ ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ 871 ಎಕರೆ ಜಾಗವನ್ನು ಗರ್ತಿಸಿ ನೀಡುವಂತೆ ತಿಳಿಸಲಾಗಿದೆ. ಈ ಪೈಕಿ ಈಗಾಗಲೇ 240 ಎಕರೆ ಜಾಗವನ್ನು ನೀಡಲಾಗಿದೆ. ಈ ಜಾಗದಲ್ಲಿ ಮೊದಲನೆ ಹಂತದಲ್ಲಿ 18 ಉಪ ಕೇಂದ್ರಗಳಿಂದ 137 ಮೆಗಾವ್ಯಾಟ್ ಹಾಗೂ 2ನೇ ಹಂತದಲ್ಲಿ 6 ಉಪಕೇಂದ್ರಗಳಿಂದ 37 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಿ ಜಿಲ್ಲೆಯಲ್ಲಿ ಒಟ್ಟು 174 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಲಾಗುವುದು. ಈ ರೀತಿ ಉತ್ಪಾದನೆಯಾದ ವಿದ್ಯುತ್ ನ್ನು ವಿದ್ಯುತ್ ಉಪ ಕೇಂದ್ರದಿಂದ 500 ಮೀಟರ್ ಅಂತದ ಸ್ಥಳೀಯ ರೈತರಿಗೆ, ರ್ಕಾರಿ ಶಾಲೆ, ಅಂಗನವಾಡಿಗಳು ಹಾಗೂ ಇತರ ರ್ಕಾರಿ ಕಚೇರಿಗಳಿಗೆ ವಿದ್ಯುತ್ ಅನ್ನು ಪೂರೈಸಲಾಗುವುದು. ಉಳಿದ ವಿದ್ಯುತ್ ಅನ್ನು ಗಿಡ್ ಗಳ ಮೂಲಕ ಬೇರೆ ಉದ್ದೇಶಗಳಿಗೆ ಬಳಸಿಕೊಳ್ಳುವ ಗುರಿ ಹೊಂದಲಾಗಿದೆ ಎಂದು ಸವಿಸ್ತಾರವಾಗಿ ಮಾಹಿತಿ ನೀಡಿದರು.
ದಿಬ್ಬೂರು ಮತ್ತು ಕೇತೇನಹಳ್ಳಿ ಮರ್ಗದಲ್ಲಿ ವಿದ್ಯುತ್ ವ್ಯತ್ಯಯದ ಸಮಸ್ಯೆಯು ಹೆಚ್ಚಿರುವುದು ಗಮನಕ್ಕೆ ಬಂದಿದೆ. ಈ ತಿಂಗಳ 31ನೇ ತಾರೀಖಿನ ಒಳಗಾಗಿ ಆ ಸಮಸ್ಯೆಯನ್ನು ಪರಿಹರಿಸಿ ನಿರಂತರವಾಗಿ ವಿದ್ಯುತ್ ಪೂರೈಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಜೊತೆಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಇಂಧನ ಇಲಾಖೆಯ ವೃತ್ತ ಕಚೇರಿಯನ್ನು ತೆರೆಯುವಂತೆ ಹಾಗೂ ಗೌರಿಬಿದನೂರಿನಲ್ಲಿ ವಿಭಾಗೀಯ ಕಚೇರಿಯನ್ನು ಮತ್ತು 220 ಕೆ.ವಿ. ಸಾರ್ತ್ಯದ ವಿದ್ಯುತ್ ಉಪಕೇಂದ್ರ ತೆರೆಯಲು ಸ್ಥಳೀಯ ಜನಪ್ರತಿನಿಧಿಗಳು, ಸಚಿವರು, ಶಾಸಕರು ಮನವಿ ಮಾಡಿದ್ದಾರೆ. ಆ ಎಲ್ಲಾ ಮನವಿಗಳನ್ನು ಪರಿಶೀಲಿಸಿ ಸೂಕ್ತ ಕ್ರಮವಹಿಸುವುದಾಗಿ ಇಂಧನ ಸಚಿವರು ಭರವಸೆ ನೀಡಿದರು.
ಕಬ್ಬಿಣದ ವಿದ್ಯುತ್ ಕಂಬಗಳನ್ನು, ಹಾಳಾದ ವಿದ್ಯುತ್ ಕಂಬಗಳನ್ನು ತೆರವುಗೊಳಿಸಬೇಕು. ಆ ಕಂಬಗಳನ್ನು ಸೂಕ್ತ ವಿಲೆವಾರಿ ಮಾಡಿ ಹಣವನ್ನು ರ್ಕಾರಕ್ಕೆ ಜಮೆ ಮಾಡಬೇಕು. ವಿದ್ಯುತ್ ಪರಿರ್ತಕಗಳು ಸುಟ್ಟು ಹೋದರೆ ಅಥವಾ ದುರಸ್ತಿಗೆ ಬಂದಿದ್ದರೆ ನಗರ ಪ್ರದೇಶಗಳಲ್ಲಿ 24 ಗಂಟೆಗಳಲ್ಲಿ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ 48 ತಾಸುಗಳ ಒಳಗೆ ಬದಲಾಯಿಸಬೇಕು. ಒಟ್ಟಾರೆ 72 ಗಂಟೆಯ ಒಳಗೆ ವಿದ್ಯುತ್ ಪೂರೈಕೆ ಸಮಸ್ಯೆಗಳನ್ನು ಪರಿಹರಿಸಲು ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಸಚಿವರು ತಿಳಿಸಿದರು.
ಈ ಸಂರ್ಭದಲ್ಲಿ ಉನ್ನತ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಆದ ಡಾ. ಎಂ.ಸಿ ಸುಧಾಕರ್, ಚಿಕ್ಕಬಳ್ಳಾಪುರ ಶಾಸಕ ಪಿ.ಇ ಪ್ರದೀಪ್ ಈಶ್ವರ್, ಗೌರಿಬಿದನೂರು ಶಾಸಕ ಕೆ.ಹೆಚ್ ಪುಟ್ಟಸ್ವಾಮಿ ಗೌಡ, ಇಂಧನ ಇಲಾಖೆಯ ಅಪರ ಮುಖ್ಯ ಕರ್ಯರ್ಶಿ ಗೌರವ್ ಗುಪ್ತ, ಕ.ವಿ.ಪ್ರ.ನಿ.ನಿಗಮದ ವ್ಯವಸ್ಥಾಪಕ ನರ್ದೇಶಕ ಪಂಕಜ್ ಕುಮಾರ್ ಪಾಂಡೆ, ಬೆಸ್ಕಾಂ ವ್ಯವಸ್ಥಾಪಕ ನರ್ದೇಶಕರಾದ ಮಹಾಂತೇಶ್ ಬಿಳಗಿ, ಬೆ.ವಿ.ಕಂ (ತಾಂತ್ರಿಕ) ನರ್ದೇಶಕ ಹೆಚ್. ಜೆ. ರಮೇಶ್, ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ, ಜಿಲ್ಲಾ ಮುಖ್ಯ ಕರ್ಯನರ್ವಹಣಾಧಿಕಾರಿ ಪ್ರಕಾಶ್ ಜಿ.ಟಿ.ನಿಟ್ಟಾಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ, ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಬಿ.ಆರ್ ರಮೇಶ್, ಅಪರ ಜಿಲ್ಲಾಧಿಕಾರಿ ಡಾ. ಎನ್. ಭಾಸ್ಕರ್, ಉಪವಿಭಾಗಾಧಿಕಾರಿ ಅಪರ್ವ ಬಿದರಿ, ಬೆಂಗಳೂರಿನ ಮುಖ್ಯ ಇಂಜಿನಿಯರ್ ಕೆ.ವಿ ಗೋವಿಂದಪ್ಪ, ತಾಲ್ಲೂಕು ತಹಸೀಲ್ದಾರರು, ಬೆಸ್ಕಾಂ ಅಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.