Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

60 ದಿನಗಳ ಗಾಝಾ ಕದನ ವಿರಾಮ ಪ್ರಸ್ತಾಪವನ್ನು ಸ್ವಾಗತಿಸಿದ ಹಮಾಸ್ | Israel-Hamas war

05/07/2025 8:58 AM

Big News: ಟಿಬೆಟ್ ವಿಚಾರದಲ್ಲಿ ಹಸ್ತಕ್ಷೇಪ ಮಾಡದಂತೆ ಭಾರತಕ್ಕೆ ಚೀನಾ ಎಚ್ಚರಿಕೆ

05/07/2025 8:33 AM

BREAKING : ಇಂದು ಕೋಮುಲ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಶಾಸಕ ಕೆ.ವೈ ನಂಜೇಗೌಡ ಅವಿರೋಧ ಆಯ್ಕೆ ಖಚಿತ!

05/07/2025 8:22 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿನ ಮಳೆಹಾನಿ ಪ್ರದೇಶಗಳಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಭೇಟಿ, ಪರಿಶೀಲನೆ
KARNATAKA

ಬೆಂಗಳೂರಿನ ಮಳೆಹಾನಿ ಪ್ರದೇಶಗಳಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಭೇಟಿ, ಪರಿಶೀಲನೆ

By kannadanewsnow0912/08/2024 3:52 PM

ಬೆಂಗಳೂರು : ಭಾನುವಾರ ರಾತ್ರಿ ಸುರಿದ ಮಳೆಯಿಂದ ನೀರು ನುಗ್ಗಿ ಹಾನಿಗೊಳಗಾದ ಬೆಂಗಳೂರಿನ ವಿವಿಧ ಪ್ರದೇಶಗಳಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಪರಿಶೀಲನೆ ನಡೆಸಿದರು.

ಹೆಬ್ಬಾಳ ಸಮೀಪದ ಯೋಗೇಶ್ವರ ನಗರ, ನಾಗವಾರ ಜಂಕ್ಷನ್ ಹಾಗೂ ಎಚ್ಬಿಆರ್ ಲೇಔಟ್ 5ನೇ ಬ್ಲಾಕ್, ಸಿಲ್ಕ್ ಬೋರ್ಡ್, ಜಯದೇವ ಜಂಕ್ಷನ್ ಸೇರಿದಂತೆ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಕೈಗೊಳ್ಳಬೇಕಿರುವ ಅಗತ್ಯ ಕ್ರಮಗಳ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಯೋಗೇಶ್ವರ ನಗರದ ಮೇಲ್ಸೇತುವೆ ಬಳಿ ನೀರಿನ ಹರಿವು ಹಾಗೂ ರಾಜಕಾಲುವೆ ವೀಕ್ಷಣೆ ಮಾಡಿ “ನೀರು ಹರಿವಿಗೆ ತೊಂದರೆ ಏಕೆ ಉಂಟಾಗಿದೆ” ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು. “ಕಾಮಗಾರಿಗಳು ನಡೆದ ನಂತರ ಕಟ್ಟಡ ತ್ಯಾಜ್ಯಗಳನ್ನು ಸ್ಥಳದಲ್ಲೇ ಏಕೆ ಬಿಡಲಾಗಿದೆ? ಕೂಡಲೇ ಎಲ್ಲಾ ಕಡೆ ಸ್ವಚ್ಚಗೊಳಿಸಿ” ಎಂದು ಡಿಸಿಎಂ ಅಧಿಕಾರಿಗಳಿಗೆ ಸೂಚಿಸಿದರು.

ಇಡೀ ಪ್ರದೇಶದಲ್ಲಿ ಒಂದು ಸುತ್ತು ಬಂದ ಡಿಸಿಎಂ ಶಿವಕುಮಾರ್ ಅವರು “ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲದಂತೆ ಕ್ರಮವಹಿಸಬೇಕು. ಎಲ್ಲಾ ಕಡೆ ರಸ್ತೆ ಬದಿ ಚರಂಡಿಗಳು ಹಾಗೂ ಒಳಚರಂಡಿಗಳನ್ನು ಸ್ವಚ್ಚಗೊಳಿಸಬೇಕು” ಎಂದು ಹೇಳಿದರು.

ಸಿಲ್ಕ್ ಬೋರ್ಡ್ ಜಂಕ್ಷನ್ ಬಳಿ ರಾಜಕಾಲುವೆ ವೀಕ್ಷಣೆ ಮಾಡಿ ಮಾತನಾಡಿದ ಅವರು “ಬಿಬಿಎಂಪಿ ಅಧಿಕಾರಿಗಳು ರಾಜಕಾಲುವೆ ಸ್ವಚ್ಚತೆಯಲ್ಲಿ ನಿರ್ಲಕ್ಷ್ಯವಹಿಸಿದ್ದಾರೆ. ಎಲ್ಲೆಲ್ಲಿ ಬಿಎಂಆರ್ ಸಿಎಲ್ ಅವರು ಕಾಮಗಾರಿ ನಡೆಸುವಾಗ ಕಟ್ಟಡ ತ್ಯಾಜ್ಯಗಳು ರಾಜಕಾಲುವೆಯಲ್ಲಿ ಉಳಿದಿದ್ದರೇ ಕೂಡಲೇ ತೆರವು ಮಾಡಬೇಕು ಎಂದು ಸೂಚನೆ ನೀಡಿದ್ದೇನೆ. ಕೆಲವೊಂದು ಕಡೆ ನೀರು ಹರಿಯುವ ಜಾಗಗಳು ಕಿರದಾಗಿದ್ದು ಅವುಗಳ ಅಗಲೀಕರಣ ಮಾಡುವಂತೆ ತಿಳಿಸಲಾಗಿದೆ” ಎಂದರು.

ಮಾರುತಿ ಸೇವಾನಗರದಲ್ಲಿ ಸೋಮವಾರ ಬೆಳಗ್ಗೆ ಮರ ಬಿದ್ದ ಕಾರಣಕ್ಕೆ ನಾಲ್ವರು ಗಾಯಗೊಂಡಿದ್ದರು. ಬಾಣಸವಾಡಿಯ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ ಗಾಯಗೊಂಡಿರುವವರ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದರು. ಹಾಗೂ ಗಾಯಾಳುಗಳ ಎಲ್ಲಾ ಖರ್ಚು ವೆಚ್ಚಗಳನ್ನು ಬಿಬಿಎಂಪಿಯಿಂದ ಭರಿಸಲಾಗುವುದು” ಎಂದು ತಿಳಿಸಿದರು.

ನಂತರ ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸಿದ ಅವರು “ನಗರ ಸಂಚಾರದ ವೇಳೆ ಸಾಕಷ್ಟು ರಸ್ತೆಗುಂಡಿಗಳು ಕಂಡು ಬಂದವು. ಮಳೆ ಹೆಚ್ಚಾದ ಕಾರಣಕ್ಕೆ ಸುಮಾರು ಅರ್ಧ ಅಡಿಗೂ ಆಳದ ಗುಂಡಿಗಲಾಗಿವೆ. ಇವುಗಳನ್ನು ಕೂಡಲೇ ಮುಚ್ಚಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಪೊಲೀಸರಿಗೂ ಎಲ್ಲಿಲ್ಲಿ ರಸ್ತೆಗುಂಡಿಗಳಿವೆ ಅದರ ಬಗ್ಗೆ ಮಾಹಿತಿ ನೀಡಬೇಕು ಎಂದು ತಿಳಿಸಿದ್ದೇನೆ. ಈಗಾಗಲೇ ನೂತನ ಆಪ್ ಅನ್ನು ಬಿಡುಗಡೆ ಮಾಡಿದ್ದು ಅಲ್ಲಿ ಫೋಟೊ ತೆಗೆದು ಹಾಕಿದರೆ ಕೂಡಲೇ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ತಿಳಿಸಿದರು.

“ರಾಜಕಾಲುವೆಗಳಿಗೆ ರಕ್ಷಣಾ ಗೋಡೆಗಳನ್ನು ಎಲ್ಲಾ ಕಡೆ ನಿರ್ಮಾಣ ಹಾಗೂ ರಸ್ತೆ ನಿರ್ಮಾಣದ ತೀರ್ಮಾನ ಮಾಡಲಾಗಿದೆ. ಅಲ್ಲದೇ ಅನೇಕ ಕಡೆ ರಸ್ತೆ ಫುಟ್ ಪಾತ್ ಗಳಲ್ಲಿ ಕಟ್ಟಡ ನಿರ್ಮಾಣ ತ್ಯಾಜ್ಯ ಸುರಿಯಲಾಗಿದೆ. ಇದರ ಬಗ್ಗೆ ಕ್ರಮವಹಿಸಲಾಗುವುದು. ಇದರಿಂದ ಮೋರಿ ಮುಚ್ಚಿಕೊಳ್ಳುವುದು, ನೀರಿನ ಹರಿವಿಗೆ ತೊಂದರೆ ಉಂಟಾಗುತ್ತಿದೆ. ಅನೇಕ ಉದ್ಯಾನಗಳಲ್ಲೂ ಕಟ್ಟಡ ತ್ಯಾಜ್ಯಗಳನ್ನು ಸುರಿಯುತ್ತಿದ್ದು, ಇದರ ಬಗ್ಗೆ ಗಮನಹರಿಸಲಾಗುವುದು“ ಎಂದರು.

ಒಣಗಿದ್ದ ಬೃಹತ್ ಮರದ ತೆರವಿಗೆ ಈ ಹಿಂದೆಯೇ ಸಾರ್ವಜನಿಕರು ದೂರು ನೀಡಿದ್ದರು ಕ್ರಮ ತೆಗೆದುಕೊಳ್ಳಲಾಗಿಲ್ಲ ಎಂದು ಕೇಳಿದಾಗ “ಇಡೀ ಬೆಂಗಳೂರಿನಾದ್ಯಂತ ಕೂಡಲೇ ಒಣಗಿದ ಮರಗಳ ತೆರವು ಮಾಡಲಾಗುವುದು. ಎಲ್ಲೆಲ್ಲಿ ತೆರವು ಮಾಡಬೇಕು ಎನ್ನುವ ಬಗ್ಗೆ ಪಟ್ಟಿ ತಯಾರಿಸಿ ಮುಂದುವರೆಯಲಾಗುವುದು. ನಿರ್ಲಕ್ಷ್ಯವಹಿಸಿರುವ ಅಧಿಕಾರಿಗಳ ಬಗ್ಗೆ ಸಭೆ ನಡೆಸಿ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಹೇಳಿದರು.

“ಬೆಂಗಳೂರಿನಲ್ಲಿ ಅಂತಹ ಮಳೆ ಬಂದಿಲ್ಲ. ರಾಜ್ಯದ ಇತರೆಡೆ ಉತ್ತಮ ಮಳೆ ಬಂದಿದೆ. ಬೆಂಗಳೂರು ಸುತ್ತಲೂ ಯಾವ ಕೆರೆಗಳೂ ತುಂಬಿಲ್ಲ, ಅಕ್ಕಪಕ್ಕದ ಜಿಲ್ಲೆಗಳಲ್ಲೂ ಮಳೆ ಬಂದಿಲ್ಲ. ಪಶ್ಚಿಮ ಘಟ್ಟ ಸೇರಿದಂತೆ ಒಂದಷ್ಟು ಕಡೆ ಮಳೆ ಬಂದು ಅಣೆಕಟ್ಟುಗಳು ತುಂಬಿವೆ. ಬೆಂಗಳೂರು ನಗರದ ಒಳಗಿರುವ ಕೆರೆಗಳಲ್ಲೂ ಅಷ್ಟಾಗಿ ನೀರಿಲ್ಲ. ಅಪಾರ್ಟ್ ಮೆಂಟ್ ಗಳಿಗೆ ನೀರು ನುಗಿದ್ದರೆ ಸರಿ ಮಾಡೋಣ. ಜೊತೆಗೆ ಮಳೆಯೂ ಚೆನ್ನಾಗಿ ಬರಬೇಕು, ಕೆರೆಗಳು ತುಂಬಬೇಕು, ಅಂತರ್ಜಲ ಹೆಚ್ಚಾಗಬೇಕು. ಮಳೆ ಇನ್ನೂ ಸಾಲದು” ಎಂದರು.

ಸಂಚಾರಿ ಪೊಲೀಸರೆ ಹೆಚ್ಚು ಕೆಲಸ ಮಾಡುತ್ತಿದ್ದು ಬಿಬಿಎಂಪಿ ಅಧಿಕಾರಿಗಳು ಸಮಸ್ಯೆ ನಿವಾರಣೆಗೆ ಬರುತ್ತಿಲ್ಲ ಎಂದು ಕೇಳಿದಾಗ “ಇದರ ಬಗ್ಗೆ ಗಮನ ನೀಡಲಾಗುವುದು. ಪಾದಚಾರಿ ಮಾರ್ಗಗಳಲ್ಲಿ ಒತ್ತುವರಿ ಮಾಡಿಕೊಂಡ ಕಾರಣಕ್ಕೆ ಕಸ ಹೆಚ್ಚಾಗಿದೆ ಇದರ ತೆರವಿನ ಬಗ್ಗೆ ಗಮನ ನೀಡಲಾಗುವುದು” ಎಂದು ಹೇಳಿದರು.

BIG NEWS: ತುಂಗಭದ್ರಾ ಅಣೆಕಟ್ಟು ಗೇಟ್ ದುರಸ್ತಿ ಕಾರ್ಯ ಆರಂಭ: ಡಿಸಿಎಂ ಡಿ.ಕೆ.ಶಿವಕುಮಾರ್

ಮಳೆಯಲ್ಲಿ ರೈತರಿಗೆ `ಛತ್ರಿ’ ಹಿಡಿದ ಪ್ರಧಾನಿ ಮೋದಿ : ವಿಡಿಯೋ ವೈರಲ್!

Share. Facebook Twitter LinkedIn WhatsApp Email

Related Posts

BREAKING : ಇಂದು ಕೋಮುಲ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಶಾಸಕ ಕೆ.ವೈ ನಂಜೇಗೌಡ ಅವಿರೋಧ ಆಯ್ಕೆ ಖಚಿತ!

05/07/2025 8:22 AM1 Min Read

BREAKING : ಬೆಂಗಳೂರಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರ ಅಪಘಾತ : ‘KSRTC’ ಬಸ್ ಗೆ ಡಿಕ್ಕಿಯಾಗಿ ಸ್ಥಳದಲ್ಲೇ ಬೈಕ್ ಸವಾರ ಸಾವು!

05/07/2025 8:18 AM1 Min Read

BREAKING : ಮೈಸೂರಲ್ಲಿ ಸಿಲಿಂಡರ್ ಸ್ಫೋಟಗೊಂಡು ಮನೆ ಛಿದ್ರ, ಛಿದ್ರ : ಅತ್ತೆ-ಸೊಸೆ ಪ್ರಾಣಾಪಾಯದಿಂದ ಪಾರು!

05/07/2025 8:10 AM1 Min Read
Recent News

60 ದಿನಗಳ ಗಾಝಾ ಕದನ ವಿರಾಮ ಪ್ರಸ್ತಾಪವನ್ನು ಸ್ವಾಗತಿಸಿದ ಹಮಾಸ್ | Israel-Hamas war

05/07/2025 8:58 AM

Big News: ಟಿಬೆಟ್ ವಿಚಾರದಲ್ಲಿ ಹಸ್ತಕ್ಷೇಪ ಮಾಡದಂತೆ ಭಾರತಕ್ಕೆ ಚೀನಾ ಎಚ್ಚರಿಕೆ

05/07/2025 8:33 AM

BREAKING : ಇಂದು ಕೋಮುಲ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಶಾಸಕ ಕೆ.ವೈ ನಂಜೇಗೌಡ ಅವಿರೋಧ ಆಯ್ಕೆ ಖಚಿತ!

05/07/2025 8:22 AM

BREAKING : ಬೆಂಗಳೂರಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರ ಅಪಘಾತ : ‘KSRTC’ ಬಸ್ ಗೆ ಡಿಕ್ಕಿಯಾಗಿ ಸ್ಥಳದಲ್ಲೇ ಬೈಕ್ ಸವಾರ ಸಾವು!

05/07/2025 8:18 AM
State News
KARNATAKA

BREAKING : ಇಂದು ಕೋಮುಲ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಶಾಸಕ ಕೆ.ವೈ ನಂಜೇಗೌಡ ಅವಿರೋಧ ಆಯ್ಕೆ ಖಚಿತ!

By kannadanewsnow0505/07/2025 8:22 AM KARNATAKA 1 Min Read

ಕೋಲಾರ : ಕೋಲಾರ ಹಾಲು ಒಕ್ಕೂಟ ಕೋಮುಲ್ ಅಧ್ಯಕ್ಷ ಸ್ಥಾನಕ್ಕೆ ತೀವ್ರ ಪೈಪೋಟಿ ನಡೆದಿದ್ದು, ಇಂದು ಕೋಮಲ್ ಅಧ್ಯಕ್ಷ ಸ್ಥಾನಕ್ಕೆ…

BREAKING : ಬೆಂಗಳೂರಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರ ಅಪಘಾತ : ‘KSRTC’ ಬಸ್ ಗೆ ಡಿಕ್ಕಿಯಾಗಿ ಸ್ಥಳದಲ್ಲೇ ಬೈಕ್ ಸವಾರ ಸಾವು!

05/07/2025 8:18 AM

BREAKING : ಮೈಸೂರಲ್ಲಿ ಸಿಲಿಂಡರ್ ಸ್ಫೋಟಗೊಂಡು ಮನೆ ಛಿದ್ರ, ಛಿದ್ರ : ಅತ್ತೆ-ಸೊಸೆ ಪ್ರಾಣಾಪಾಯದಿಂದ ಪಾರು!

05/07/2025 8:10 AM

BREAKING : ಖಾಸಗಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿ ಸಾವು : ಹೊತ್ತಿ ಉರಿದ ಬಸ್, ಪ್ರಯಾಣಿಕರು ಪಾರು!

05/07/2025 7:29 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.