Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸ್ವದೇಶಿ ವಾಯು ರಕ್ಷಣಾ ವ್ಯವಸ್ಥೆಯನ್ನು ಯಶಸ್ವಿಯಾಗಿ ಪರೀಕ್ಷಿಸಿದ DRDO

24/08/2025 5:46 PM

ಸ್ವಾವಲಂಬಿ ಸಾರಥಿ ಯೋಜನೆಗೆ ಅರ್ಜಿ ಆಹ್ವಾನ: ನಿಮಗೆ ಸಿಗಲಿದೆ 4 ಲಕ್ಷ ಸಹಾಯಧನ

24/08/2025 5:41 PM

ಹೇಮಾವತಿ ನದಿಯ ನಾಲೆಗೆ ಕಾರು ಉರುಳಿ ಬಿದ್ದು ಇಬ್ಬರು ಸಾವು: ಕೊಚ್ಚಿ ಹೋದ ಮತ್ತಿಬ್ಬರು

24/08/2025 5:15 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ದೇಶದಲ್ಲಿ ಅಕ್ರಮವಾಗಿ ಮಾರಾಟವಾದ ಎಲ್ಲ ಅರಣ್ಯ ಭೂಮಿ ಹಿಂಪಡೆಯಲು HDK ಕ್ರಮ ವಹಿಸಲಿ: ಈಶ್ವರ್ ಖಂಡ್ರೆ
KARNATAKA

ದೇಶದಲ್ಲಿ ಅಕ್ರಮವಾಗಿ ಮಾರಾಟವಾದ ಎಲ್ಲ ಅರಣ್ಯ ಭೂಮಿ ಹಿಂಪಡೆಯಲು HDK ಕ್ರಮ ವಹಿಸಲಿ: ಈಶ್ವರ್ ಖಂಡ್ರೆ

By kannadanewsnow0914/08/2024 2:20 PM

ಬೆಂಗಳೂರು : ಅರಣ್ಯ ಭೂಮಿಯನ್ನು ಮಾರಾಟ, ದಾನ ಮಾಡಲು ಯಾರಿಗೂ ಅವಕಾಶವಿಲ್ಲ, ಎಚ್.ಎಂ.ಟಿ. ವಶದಲ್ಲಿರುವ ಅರಣ್ಯ ಭೂಮಿ ಮರು ವಶಕ್ಕೆ ಪಡೆದ ಬಳಿಕ ಅಲ್ಲಿ ವೃಕ್ಷೋಧ್ಯಾನ ನಿರ್ಮಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.

ವಿಕಾಸಸೌಧದ ತಮ್ಮ ಕಚೇರಿಯಲ್ಲಿಂದು ತುರ್ತು ಸುದ್ದಿಗೋಷ್ಠಿ ನಡೆಸಿದ ಅವರು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಎಚ್.ಎಂ.ಟಿ. ವಶದಲ್ಲಿರುವ ಜಮೀನು ಪಡೆದು ಯಾರಿಗೆ ಮಾರುತ್ತೀರಿ ಎಂದು ಕೇಳಿದ್ದಾರೆ. ಅರಣ್ಯ ಭೂಮಿ ಮಾರಾಟ ಮಾಡಿರುವುದು ಈಗ ನಿಮ್ಮ ಇಲಾಖಾ ವ್ಯಾಪ್ತಿಯಲ್ಲಿರುವ ಎಚ್.ಎಂ.ಟಿ.ಯೇ ಹೊರತು ಅರಣ್ಯ ಇಲಾಖೆ ಅಲ್ಲ ಎಂದು ತಿರುಗೇಟು ನೀಡಿದರು.

ಬೆಂಗಳೂರಿನ ಪ್ರಮುಖ ಭಾಗದಲ್ಲಿರುವ ಪೀಣ್ಯ ಜಾಲಹಳ್ಳಿ ಅರಣ್ಯ ಜಮೀನು ಮರು ವಶಕ್ಕೆಪಡೆದು ಶುದ್ಧ ಉಸಿರಾಟಕ್ಕೊಂದು ತಾಣ (ಲಂಗ್ ಸ್ಪೇಸ್) ನಿರ್ಮಾಣ ಮಾಡಲು ತಾವು ಬಯಸಿರುವುದಾಗಿ ತಿಳಿಸಿದರು.

ಕೇಂದ್ರ ಸರ್ಕಾರಿ ಸ್ವಾಮ್ಯದ ಎಚ್.ಎಂ.ಟಿ. ರಿಯಲ್ ಎಸ್ಟೇಟ್ ಸಂಸ್ಥೆಯಂತೆ ವರ್ತಿಸುತ್ತಿದೆ. 1997ರಿಂದ 2011ರವರೆಗೆ ಎಚ್.ಎಂ.ಟಿ. ಸಂಸ್ಥೆ ತನ್ನ ವಶದಲ್ಲಿದ್ದ ಅರಣ್ಯ ಭೂಮಿಯನ್ನು ಅಕ್ರಮವಾಗಿ ಡಾಲರ್ಸ್ ಕನ್ ಸ್ಟ್ರಕ್ಷನ್ಸ್ ಅಂಡ್ ಎಂಜಿನಿಯರ್ಸ್ ಪ್ರೈ.ಲಿ., ಯು.ಎಸ್. ಸ್ಟೀಲ್ ಕಂಪನಿ, ಸಿಲ್ವರ್ ಲೈನ್ ಎಸ್ಟೇಟ್ಸ್, ಮನೆ ಕನ್ ಸ್ಟ್ರಕ್ಷನ್ಸ್ ಲಿ, ಎಂ.ಎಂ.ಆರ್. ಕನ್ ಸ್ಟ್ರಕ್ಷನ್ಸ್, ಬ್ರಿಗೇಡ್ ಎಂಟರ್ ಪ್ರೈಸಸ್, ಬಾಗಮನೆ ಡೆವಲಪರ್ಸ್ ಪ್ರೈ.ಲಿ. ಸೇರಿದಂತೆ ಹಲವು ಖಾಸಗಿ ಮತ್ತು ಸರ್ಕಾರಿ ಸಂಸ್ಥೆಗಳಿಗೆ 165 ಎಕರೆ ಭೂಮಿಯನ್ನು 313 ಕೋಟಿಗೂ ಹೆಚ್ಚು ಹಣಕ್ಕೆ ಮಾರಾಟ ಮಾಡಿದೆ ಎಂದರು.

ಪರಿಸರ ಹೋರಾಟಗಾರರೊಬ್ಬರು ಕಳೆದ ಜುಲೈ 11ರಂದು ತಮ್ಮ ಕಚೇರಿಗೆ ನೀಡಿದ ದೂರು ಆಧರಿಸಿ, ಅಧಿಕಾರಿಗಳ ಸಭೆ ಕರೆದು ಚರ್ಚಿಸಿದಾಗ ಸತ್ಯ ಹೊರಬಿತ್ತು. ಹೀಗಾಗಿ ಮೈಸೂರು ಮಹಾರಾಜರ ಆಳ್ವಿಕೆಯ ಕಾಲದಲ್ಲಿ ಅಂದರೆ 1896 ಜೂನ್ 11ರಲ್ಲೇ ಅಧಿಸೂಚಿತ ಅರಣ್ಯ ಗೆಜೆಟ್ ಆಗಿದೆ ಎಂದು ಹೇಳಿದರು.

ಈ ಭೂಮಿಯನ್ನು 1963ರಲ್ಲಿ ಎಚ್.ಎಂ.ಟಿ.ಗೆ ದಾನ ನೀಡಿರುವುದಾಗಿ ಹೇಳಲಾಗಿದೆ. ಈಗ ಕುಮಾರಸ್ವಾಮಿ ಅವರು ಭೂಮಿಯನ್ನು ಎಚ್.ಎಂ.ಟಿ. ಸಂಸ್ಥೆ ಖರೀದಿಸಿರುವುದಾಗಿ ಹೇಳುತ್ತಿದ್ದಾರೆ. ಅರಣ್ಯ ಭೂಮಿಯನ್ನು ಅರಣ್ಯೇತರ ಉದ್ದೇಶಕ್ಕೆ ಡಿನೋಟಿಫೈ ಮಾಡದೆ, 1980ರ ಅರಣ್ಯ ಸಂರಕ್ಷಣಾ ಕಾಯಿದೆ ಸೆಕ್ಷನ್ 2ರ ಅಡಿಯಲ್ಲಿ ಕೇಂದ್ರ ಸರ್ಕಾರದಿಂದ ಪೂರ್ವಾನುಮತಿ ಪಡೆಯದೆ ಮಾರಾಟ ಮಾಡಲು ಅಥವಾ ದಾನ ಮಾಡಲು ಕಾನೂನಿನಲ್ಲಿ ಅವಕಾಶವೇ ಇರುವುದಿಲ್ಲ. ರಾಜ್ಯಕ್ಕೆ ಬೆಳಕು ನೀಡಿ, ಪ್ರಸ್ತುತ ಕತ್ತಲಲ್ಲಿ ಬದುಕು ಕಳೆಯುವಂತಾಗಿರುವ ಶರಾವತಿ ಸಂತ್ರಸ್ತರಿಗೆ ಭೂಮಿ ನೀಡಿರುವ ಕುರಿತಂತೆ ರಾಜ್ಯ ಹೈಕೋರ್ಟ್ ನಲ್ಲಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಖ್ಯೆ 43037-2019ಕ್ಕೆ ಸಂಬಂಧಿಸಿದಂತೆ ಮಾರ್ಚ್ 4, 2021ರಂದು ಬಂದಿರುವ ತೀರ್ಪು ಇದನ್ನು ಸ್ಪಷ್ಟಪಡಿಸುತ್ತದೆ ಎಂದರು.

ಇತ್ತೀಚೆಗೆ ಸರ್ವೋಚ್ಚ ನ್ಯಾಯಾಲಯ Once a Forest is Always a Forest – Environment is more important than civil rights ಎಂದು ಅಭಿಪ್ರಾಯಪಟ್ಟಿದೆ ಎಂದ ಅವರು, ಇದು ಅರಣ್ಯ ಅಲ್ಲದಿದ್ದರೆ ಏಕೆ ಮಧ್ಯಂತರ ಅರ್ಜಿ (IA) ಹಾಕುತ್ತಿದ್ದರು ಎಂದು ಪ್ರಶ್ನಿಸಿದರು.

ಕುಮಾರಸ್ವಾಮಿ ಜೊತೆ ಸಂಘರ್ಷ ಇಲ್ಲ:

ತಮ್ಮ ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ನಡುವೆ ಉತ್ತಮ ಸೌಹಾರ್ದ ಬಾಂಧವ್ಯವಿದೆ. ನಾನು ಹಿಂದೆಯೂ ದ್ವೇಷದ ರಾಜಕೀಯ ಮಾಡಿಲ್ಲ, ಮುಂದೆಯೂ ಮಾಡಲ್ಲ. ನಾನು ಯಾವುದೇ ಪೂರ್ವಾಗ್ರಹ ಪೀಡಿತನಾಗಿ ಎಚ್.ಎಂ.ಟಿ. ಭೂಮಿ ವಿಚಾರ ಪ್ರಸ್ತಾಪಿಸಿಲ್ಲ. ಬದಲಾಗಿ ತಮಗೆ ಬಂದ ದೂರಿನ ಮೇಲೆ ಸಚಿವನಾಗಿ ಕ್ರಮ ವಹಿಸಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಬೆಂಗಳೂರಿನಲ್ಲಿ 1ವರ್ಷದಲ್ಲಿ 101 ಎಕರೆ ಅರಣ್ಯ ಒತ್ತುವರಿ ತರವು:

ತಾವು ಅರಣ್ಯ ಸಚಿವನಾಗಿ ಅಧಿಕಾರ ವಹಿಸಿಕೊಂಡ ತರುವಾಯ, ಅರಣ್ಯ ವಿಸ್ತರಣೆ ಮತ್ತು ಅರಣ್ಯ ಭೂಮಿ ಒತ್ತುವರಿ ತೆರವು ಮಾಡಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿರುವುದಾಗಿ ತಿಳಿಸಿದ ಈಶ್ವರ ಖಂಡ್ರೆ, ಬೆಂಗಳೂರಿನ ಕೊತ್ತನೂರಿನಲ್ಲಿ ಸುಮಾರು 500 ಕೋಟಿ ರೂ. ಬೆಲೆ ಬಾಳುವ 17.34 ಎಕರೆ, ಬಿ.ಎಂ. ಕಾವಲಿನಲ್ಲಿ ಸುಮಾರು 100 ಕೋಟಿ ರೂ.ಮೌಲ್ಯದ 15 ಎಕರೆ, ಪೀಣ್ಯ ಪ್ಲಾಂಟೇಷನ್ ಮತ್ತು ಜಾರಕಬಂಡೆ ಕಾವಲಿನಲ್ಲಿ 200 ಕೋಟಿ ರೂ.ಮೌಲ್ಯದ 18 ಎಕರೆ, ತುರಹಳ್ಳಿ ಅರಣ್ಯ ವ್ಯಾಪ್ತಿಯಲ್ಲಿ ಸುಮಾರು 50 ಕೋಟಿ ರೂ. ಬೆಲೆ ಬಾಳುವ 7 ಎಕರೆ ಸೇರಿದಂತೆ ಒಟ್ಟು 101 ಎಕರೆ 20 ಗುಂಟೆ ಜಮೀನು ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಉತ್ತರ ಕನ್ನಡದ ಶಿರೂರು ಮತ್ತು ವಯನಾಡಿನಲ್ಲಿ ಗುಡ್ಡ ಕುಸಿತ ಆದ ಬಳಿಕ ನೂರಾರು ಜನರು ಮೃತಪಟ್ಟಿರುವ ದಾರುಣ ಘಟನೆಯ ಬಳಿಕವೂ ನಾವು ಅರಣ್ಯ, ಪ್ರಕೃತಿ ಪರಿಸರ ಉಳಿಸದಿದ್ದರೆ ಮುಂದಿನ ಪೀಳಿಗೆ ನಮ್ಮನ್ನು ಖಂಡಿತಾ ಕ್ಷಮಿಸುವುದಿಲ್ಲ ಎಂದು ಈಶ್ವರ ಖಂಡ್ರೆ ತಿಳಿಸಿದರು.

BIG NEWS: ರಾಜ್ಯದ ‘6 ಗ್ರಾಮ ಪಂಚಾಯ್ತಿ ಅಧ್ಯಕ್ಷ’ರಿಗೆ ‘ಕೆಂಪುಕೋಟೆಯ ಸ್ವಾತಂತ್ರೋತ್ಸವ’ದಲ್ಲಿ ಪಾಲ್ಗೊಳ್ಳಲು ಆಹ್ವಾನ

ರಾಜ್ಯದ ರೈತರಿಗೆ ಗುಡ್ ನ್ಯೂಸ್ ; ಸೆಪ್ಟೆಂಬರ್ ನಿಂದ ‘ಪೋಡಿ’ ಅಭಿಯಾನಕ್ಕೆ ಚಾಲನೆ

Share. Facebook Twitter LinkedIn WhatsApp Email

Related Posts

ಸ್ವಾವಲಂಬಿ ಸಾರಥಿ ಯೋಜನೆಗೆ ಅರ್ಜಿ ಆಹ್ವಾನ: ನಿಮಗೆ ಸಿಗಲಿದೆ 4 ಲಕ್ಷ ಸಹಾಯಧನ

24/08/2025 5:41 PM1 Min Read

ಹೇಮಾವತಿ ನದಿಯ ನಾಲೆಗೆ ಕಾರು ಉರುಳಿ ಬಿದ್ದು ಇಬ್ಬರು ಸಾವು: ಕೊಚ್ಚಿ ಹೋದ ಮತ್ತಿಬ್ಬರು

24/08/2025 5:15 PM1 Min Read

ಕುಂಕುಮ ಇಡುವ ವೇಳೆ ಅನುಚಿತ ವರ್ತನೆ ಆರೋಪ: ದೇವಸ್ಥಾನದಲ್ಲೇ ಅರ್ಚಕನಿಗೆ ಹಿಗ್ಗಾಮುಗ್ಗಾ ಥಳಿತ

24/08/2025 4:42 PM1 Min Read
Recent News

ಸ್ವದೇಶಿ ವಾಯು ರಕ್ಷಣಾ ವ್ಯವಸ್ಥೆಯನ್ನು ಯಶಸ್ವಿಯಾಗಿ ಪರೀಕ್ಷಿಸಿದ DRDO

24/08/2025 5:46 PM

ಸ್ವಾವಲಂಬಿ ಸಾರಥಿ ಯೋಜನೆಗೆ ಅರ್ಜಿ ಆಹ್ವಾನ: ನಿಮಗೆ ಸಿಗಲಿದೆ 4 ಲಕ್ಷ ಸಹಾಯಧನ

24/08/2025 5:41 PM

ಹೇಮಾವತಿ ನದಿಯ ನಾಲೆಗೆ ಕಾರು ಉರುಳಿ ಬಿದ್ದು ಇಬ್ಬರು ಸಾವು: ಕೊಚ್ಚಿ ಹೋದ ಮತ್ತಿಬ್ಬರು

24/08/2025 5:15 PM

SHOCKING: ಋತುಚಕ್ರ ನಿಲ್ಲಿಸಲು ಮಾತ್ರೆ ಸೇವಿಸಿದ ವಿದ್ಯಾರ್ಥಿನಿ ಸಾವು | Period-Delaying Pills Side Effects

24/08/2025 5:02 PM
State News
KARNATAKA

ಸ್ವಾವಲಂಬಿ ಸಾರಥಿ ಯೋಜನೆಗೆ ಅರ್ಜಿ ಆಹ್ವಾನ: ನಿಮಗೆ ಸಿಗಲಿದೆ 4 ಲಕ್ಷ ಸಹಾಯಧನ

By kannadanewsnow0924/08/2025 5:41 PM KARNATAKA 1 Min Read

ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆಯಿಂದ ಬ್ಯಾಂಕ್ ಗಳ ಸಹಯೋಗದೊಂದಿಗೆ ಸ್ವಾವಲಂಬಿ ಸಾರಥಿ ಯೋಜನೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಯೋಜನೆಯ ಅಡಿಯಲ್ಲಿ…

ಹೇಮಾವತಿ ನದಿಯ ನಾಲೆಗೆ ಕಾರು ಉರುಳಿ ಬಿದ್ದು ಇಬ್ಬರು ಸಾವು: ಕೊಚ್ಚಿ ಹೋದ ಮತ್ತಿಬ್ಬರು

24/08/2025 5:15 PM

ಕುಂಕುಮ ಇಡುವ ವೇಳೆ ಅನುಚಿತ ವರ್ತನೆ ಆರೋಪ: ದೇವಸ್ಥಾನದಲ್ಲೇ ಅರ್ಚಕನಿಗೆ ಹಿಗ್ಗಾಮುಗ್ಗಾ ಥಳಿತ

24/08/2025 4:42 PM

SIT ತನಿಖೆಯಿಂದ ಧರ್ಮಸ್ಥಳದ ಅಪಪ್ರಚಾರ ಹಿಂದಿನ ಮುಖವಾಡ ಕಳಚಿ, ಸತ್ಯ ಬಯಲಿಗೆ: ಸಚಿವ ರಾಮಲಿಂಗಾರೆಡ್ಡಿ

24/08/2025 4:23 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.