ತುಮಕೂರು : ಆಸ್ತಿ ವಿಚಾರವಾಗಿ ತಂದೆ ಹಾಗೂ ಮಗನ ನಡುವೆ ಜಗಳ ಉಂಟಾಗಿದ್ದು, ಈ ವೇಳೆ ಜಗಳ ವಿಕೋಪಕ್ಕೆ ತಿರುಗಿ ಮಗ ಮಚ್ಚಿನಿಂದ ತಂದೆಯನ್ನು ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ತುಮಕೂರಿನ ಕೊರಟಗೆರೆ ತಾಲೂಕಿನ ಆಲಪನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಹೌದು ಸಿದ್ದಪ್ಪ (45) ಎನ್ನುವ ಮಗ, ವೆಂಕಟಪ್ಪ (75) ವಯಸ್ಸಿನ ತಂದೆಯನ್ನು ಮಚ್ಚಿನಿಂದ ಹೊಡೆದು ಭೀಕರ ಕೊಲೆ ಮಾಡಿದ್ದಾನೆ.ತಂದೆ ಮಗನ ಜೊತೆ ಹಲವು ಬಾರಿ ಗಲಾಟೆ ನಡೆದಿತ್ತು. ಗ್ರಾಮದ ಹಿರಿಯರ ಸಮ್ಮುಖದಲ್ಲಿ ಹಲವು ಬಾರಿ ನ್ಯಾಯ ಪಂಚಾಯತಿ ಕೂಡಾ ಮಾಡಲಾಗಿತ್ತು. ಹಾಗಿದ್ದರೂ ಮಗನಿಗೆ ಆಸ್ತಿ ಕೊಡದ ಕಾರಣ ಈ ಕೊಲೆ ನಡೆದಿದೆ.ಇತ್ತೀಚೆಗೆ ವೆಂಕಟಪ್ಪ ಜಮೀನು ಮಾರಾಟ ಮಾಡಿದ್ದ. ಮಾರಾಟ ಮಾಡಿ ಬಂದ ಜಮೀನಿನ 25 ಲಕ್ಷ ಹಣವನ್ನ ಮಗಳಿಗೆ ಕೊಟ್ಟಿದ್ದ.
ಜಮೀನನ್ನು ಸಹ ಮಗಳ ಹೆಸರಿಗೆ ಬರೆದುಕೊಟ್ಟಿದ್ದ ಎನ್ನಲಾಗಿದೆ. ಇದೇ ವಿಚಾರಕ್ಕೆ ತಂದೆ ಮಗನ ಜೊತೆ ಹಲವು ಬಾರಿ ಗಲಾಟೆ ನಡೆದಿತ್ತು. ಗ್ರಾಮದ ಹಿರಿಯರ ಸಮ್ಮುಖದಲ್ಲಿ ಹಲವು ಬಾರಿ ನ್ಯಾಯ ಪಂಚಾಯತಿ ಕೂಡಾ ಮಾಡಲಾಗಿತ್ತು. ನ್ಯಾಯ ಪಂಚಾಯತಿ ಮಾಡಿದ್ರು ಸಹ ಮಗನಿಗೆ ಆಸ್ತಿ, ಹಣ ನೀಡಲು ವೆಂಕಟಪ್ಪ ಹಿಂದೇಟು ಹಾಕಿದ್ದ.ಇದರಿಂದ ಬೇಸತ್ತು ಮಗ ವೆಂಕಟಪ್ಪನನ್ನು ಕೊಂದು ಪರಾರಿಯಾಗಿದ್ದು, ಇದೀಗ ಪೊಲೀಸರು ಆತನ ಬಂಧನಕ್ಕೆ ಬಲೆ ಬೀಸಿದ್ದಾರೆ.