ಬೆಂಗಳೂರು : ದೇಶಾದ್ಯಂತ ಇಂದು 78 ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆ ಮಾಡಿದ್ದು, ಇಂದು ಬೆಂಗಳೂರಿನ ಮಾಣೆಕ್ ಷಾ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಿದ್ದಾರೆ.
ಧ್ವಜಾರೋಹಣದ ಬಳಿಕ ಮಾತನಾಡಿನ ಸಿಎಂ ಸಿದ್ದರಾಮಯ್ಯ, ನಾಡಿನ ಜನತೆಗೆ 78 ನೇ ಸ್ವಾತಂತ್ರ್ಯೋತ್ಸವದ ಶುಭಾಷಯಗಳನ್ನು ಕೋರಿದ್ದಾರೆ. ಕಳೆದ 77 ವರ್ಷಗಳಲ್ಲಿ ಕರ್ನಾಟಕ ಮಹತ್ವದ ಪಾತ್ರ ಹೊಂದಿದೆ. ನಮ್ಮ ಸರ್ಕಾರ 5 ಗ್ಯಾರಂಟಿ ಯೋಜನೆ ಜಾರಿಗೊಳಿಸುವ ಮೂಲಕ ಜನರ ಜೀವನ ಮಟ್ಟ ಸುದಾರಿಸುವಂತೆ ಮಾಡಿದೆ ಎಂದು ಹೇಳಿದ್ದಾರೆ.
ಗೃಹಲಕ್ಷ್ಮಿ ಯೋಜನೆಯಡಿ 1.20 ಕೋಟಿ ಮಹಿಳೆಯರಿಗೆ ಅನುಕೂಲ , ೀವರೆಗೆ 25,258 ಕೊಟಿ ಹಣ ನೇರವಾಗಿ ಬ್ಯಾಂಕ್ ಖಾತೆಗೆ ಜಮಾ ಆಗಿದೆ. ಈವರೆಗೆ 4.08 ಕೋಟಿ ಅನ್ನಭಾಗ್ಯ ಫಲಾನುಭವಿಗಳಿಗೆ ಪ್ರಯೋಜನೆ ಪಡೆದಿದ್ದಾರೆ. ಗೃಹಜ್ಯೋತಿ ಯೋಜನೆಗೆ 8,844 ಕೋಟಿ ರೂ. ನೀಡಲಾಗಿದೆ. ಯುವನಿಧಿ ಯೋಜನೆಗೆ 1.31 ಲಕ್ಷ ಪದವೀಧರ, ಡಿಪ್ಲೋಮಾ ನಿರುದ್ಯೋಗಿಗಳಿಗೆ ಸಹಾಯಧನ ನೀಡಲಾಗಿದೆ. ರಾಜ್ಯದಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಯೋಜನೆಗಳನ್ನು ಮುಂದುವರೆಸುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.
ಎಂದು ಹೇಳಿದ್ದಾರೆ.