ತುಮಕೂರು : ಕಳೆದ ಬಾರಿ ಬರಗಾಲದಿಂದ ರಾಜ್ಯದ ಜನತೆ, ರೈತರು ಕಣ್ಗೆಟ್ಟಿದ್ದರು. ಆದರೆ ಈ ಬಾರಿ ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿದ್ದು ರೈತರ ಮೊಗದಲ್ಲಿ ಸಂತಸ ಕಾಣುತ್ತಿದೆ. ಇದರ ಮಧ್ಯ ಹಿಂದೂಗಳ ದೊಡ್ಡ ಹಬ್ಬ ಗಣೇಶ ಚತುರ್ಥಿ ಮುಂದಿನ ಸೆಪ್ಟೆಂಬರ್ ತಿಂಗಳಲ್ಲಿ ಆರಂಭವಗಲಿದ್ದು, ಗಣೇಶನ ಹೆಸರಲ್ಲಿ ಯಾರಾದರೂ ಕಾನೂನು ಕೈಗೆತ್ತಿಕೊಂಡರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಖಡಕ್ ಸೂಚನೇ ನೀಡಿದ್ದಾರೆ.
ರಾಜ್ಯದಲ್ಲಿ ಗಣೇಶೋತ್ಸವಕ್ಕೆ ಪೊಲೀಸ್ ಭದ್ರತೆ ವಿಚಾರವಾಗಿ ಇಂದುbತುಮಕೂರಿನಲ್ಲಿ ಗೃಹ ಇಲಾಖೆ ಸಚಿವ ಡಾ. ಜಿ ಪರಮೇಶ್ವರ್ ಹೇಳಿಕೆ ನೀಡಿದ್ದು, ಕಳೆದ ಬಾರಿ ಸೆಪ್ಟೆಂಬರ್ ನಲ್ಲಿ ಗಣೇಶೋತ್ಸವವನ್ನು ಆಚರಣೆ ಮಾಡಲಾಗಿತ್ತು. ಈ ಬಾರಿಯೂ ಸೆಪ್ಟೆಂಬರ್ 7 ರಂದು ಗಣಪತಿಯ ಉತ್ಸವ ಆರಂಭವಾಗುತ್ತದೆ. ರಾಜ್ಯದ ಜನತೆಗೆ ನಾನು ಮನವಿ ಮಾಡಿಕೊಳ್ಳುತ್ತೇನೆ, ಶಾಂತಿಯಿಂದ ಗಣೇಶೋತ್ಸವ ಆಚರಿಸೋಣ ಎಂದು ಮನವಿ ಮಾಡಿದರು.
ಅದಕ್ಕೆ ಬೇಕಾದಂತಹ ವಾತಾವರಣ ನಾವು ತಮಗೆ ಸೃಷ್ಟಿ ಮಾಡುತ್ತೇವೆ. ಗಣೇಶನ ಹೆಸರು ಹೇಳಿಕೊಂಡು ಯಾರೂ ಕಾನೂನು ಕೈಗೆತ್ತಿಕೊಳ್ಳಬಾರದು. ಯಾರಾದರೂ ಅಂತಹ ಪ್ರಯತ್ನ ಮಾಡಿದರೆ ಕಾನೂನು ಕ್ರಮ ಆಗುತ್ತದೆ. ನನಗೆ ವಿಶ್ವಾಸವಿದೆ ನಮ್ಮ ಕರ್ನಾಟಕದ ಜನತೆ ಶಾಂತಿ ಪ್ರಿಯರು ಅಂತಹ ಘಟನೆಗಳು ನಡೆಯುವುದಕ್ಕೆ ಬಿಡುವುದಿಲ್ಲ ಎಂದು ತುಮಕೂರಿನಲ್ಲಿ ಜಿ ಪರಮೇಶ್ವರ್ ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯದ ಜನರಿಗೆ ನಮ್ಮ ಸರ್ಕಾರ ಪ್ರಣಾಳಿಕೆಯಲ್ಲಿ ಭರವಸೆ ಕೊಟ್ಟಿತ್ತು. ಯಾವುದೇ ಅಹಿತಕರವಾದ ಘಟನೆಗಳು ನಡೆಯುವುದಕ್ಕೆ ನಾವು ಬಿಡುವುದಿಲ್ಲ. ಕರ್ನಾಟಕ ಸರ್ವ ಜನಾಂಗದ ಶಾಂತಿಯ ತೋಟ ಆಗಬೇಕು ಎಲ್ಲಾ ಸಮುದಾಯಗಳು ಶಾಂತಿಯಿಂದ ಬಾಳಬೇಕೆಂದು ನಾವು ಹೇಳಿದ್ದೆವು. ರಾಜ್ಯದಲ್ಲಿ ಕಳೆದ ಒಂದು ವರ್ಷದಿಂದ ಯಾವುದೇ ಕೋಮುಗಳಭೆಗಳಾಗಲಿ, ಅಹಿತಕರವಾದಂತಹ ಗಲಾಟೆಗಳನ್ನು ನಡೆಯುವುದಕ್ಕೆ ಅವಕಾಶ ಕೊಟ್ಟಿಲ್ಲ. ರಾಜ್ಯ ಸರ್ಕಾರ ಮತ್ತು ವಿಶೇಷವಾಗಿ ಗೃಹ ಇಲಾಖೆ ಅವಕಾಶ ಕೊಟ್ಟಿಲ್ಲ. ರಾಜ್ಯ ಜನರು ಸಹಕರಿಸಿದ್ದಾರೆ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದರು.