ಬೆಂಗಳೂರು : ವಿದ್ಯುತ್ ಪ್ರವಹಿಸಿ ಇಂಜಿನಿಯರ್ ಒಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿ ಕೈಗಾರಿಕಾ ಪ್ರದೇಶದ ಖಾಸಗಿ ಕಂಪನಿಯಲ್ಲಿ ಈ ದುರ್ಘಟನೆ ನಡೆದಿದೆ.
ಹೌದು ವಿದ್ಯುತ್ ಪ್ರವಹಿಸಿ ಇಂಜಿನಿಯರ್ ಕೌಶಿಕ್ (27) ಎನ್ನುವವರು ಸಾವನ್ನಪ್ಪಿದ್ದಾರೆ. ಅವರು ಜಿಗಣಿ ಕೈಗಾರಿಕಾ ಪ್ರದೇಶದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ದುರ್ಘಟನೆ ಸಂಭವಿಸಿದೆ. ಮೃತ ಕೌಶಿಕ್ ಬೆಂಗಳೂರಿನ ನಿವಾಸಿಯಾಗಿದ್ದಾರೆ ಪ್ಯಾನಲ್ ಬೋರ್ಡ್ ಅಳವಡಿಸುವಾಗ ಈ ಒಂದು ದುರಂತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
ತಕ್ಷಣ ಕೌಶಿಕ್ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯ ಕೌಶಿಕ್ ಸಾವನಪ್ಪಿದ್ದಾರೆ. ಸುರಕ್ಷತಾ ಕ್ರಮ ಕೈಗೊಳ್ಳದಿದ್ದರಿಂದ ಈ ಒಂದು ದುರಂತ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ. ಜಿಗಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.