ಕೋಲಾರ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲಾಗುತ್ತದೆ ಎಂದು ವಿಪಕ್ಷ ನಾಯಕರು ಹೇಳುತ್ತಿದ್ದಾರೆ. ಇದರ ಮಧ್ಯ ಸಚಿವ ಭೈರತಿ ಸುರೇಶ್ 5 ಗ್ಯಾರಂಟಿಗಳಲ್ಲಿ ಯಾವುದೇ ರಿಯಾಯಿತಿನು ಇಲ್ಲ ಪರಿಷ್ಕರಣೆಯು ಇಲ್ಲ ಎಂದು ಸ್ಪಷ್ಟನೆ ನೀಡಿದರು.
ಕೋಲಾರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 5 ಗ್ಯಾರಂಟಿಗಳಲ್ಲಿ ಯಾವುದಕ್ಕೂ ರಿಯಾಯಿತಿ ಇಲ್ಲ. ಗ್ಯಾರಂಟಿಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ 5 ಗ್ಯಾರಂಟಿಗಳನ್ನು ಮರುಪರಿಶೀಲನೆ ಮಾಡುವುದಿಲ್ಲ ಸಿಎಂ ಸಿದ್ದರಾಮಯ್ಯನವರು ಈ ಕುರಿತು ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ ಎಂದು ತಿಳಿಸಿದರು.
ಇನ್ನೂ ಗ್ಯಾರೆಂಟಿ ಯೋಜನೆಗಳಿಗೆ ಅನುದಾನ ನೀಡಲು ಸರ್ಕಾರದ ಬಳಿ ಹಣವಿಲ್ಲ, ಖಜಾನೆ ಖಾಲಿಯಾಗಿದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೇಳಿಕೆಗೆ ನಮ್ಮ ಕೆಲವು ಸಚಿವರು ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಕುರಿತು ಹೇಳಿಕೆ ನೀಡಿದ್ದಾರೆ.ಇದು ಅವರ ವೈಯಕ್ತಿಕ ಅಭಿಪ್ರಾಯವಾಗಿದೆ. ಹಾಗಾಗಿ ಆರ್ ಅಶೋಕವರು ಈ ರೀತಿ ಹೇಳಿಕೆ ನೀಡಿದ್ದಾರೆ ಎಂದು ತಿರುಗೇಟು ನೀಡಿದರು.
ಗ್ಯಾರಂಟಿ ಯೋಜನೆಗಳನ್ನು ಬಡವರಿಗಾಗಿಯೇ ಜಾರಿಗೆ ಮಾಡಲಾಗಿದೆ. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಆರ್ ಅಶೋಕ್ ಇರುವುದೇ ಸುಳ್ಳು ಆಪಾದನೆ ಮಾಡುವುದಕ್ಕೆ ಹಾಗಾಗಿ ಯೋಜನೆಗಳು ಕುರಿತು ಅವರು ಸುಳ್ಳು ಆಪಾದನೆ ಮಾಡುತ್ತಿದ್ದಾರೆ. ಎಸಿ ರೂಮ್ ನಲ್ಲಿ ಕುಳಿತು ಮಾತನಾಡುವ ಅವರಿಗೆ ಅಭಿವೃದ್ಧಿ ಕಾರ್ಯಗಳ ಕುರಿತು ಏನು ಗೊತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.