Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಕಾಶ್ಮೀರದ ಕೃಷಿ ವಿಜ್ಞಾನ ವಿವಿಯ ವಿದ್ಯಾರ್ಥಿಗಳು ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್

11/05/2025 3:35 PM

BREAKING : ರಾಮನಗರದಲ್ಲಿ ಭೀಕರ ಅಪಘಾತ : ಮರಕ್ಕೆ ಕಾರು ಡಿಕ್ಕಿಯಾಗಿ ಓರ್ವ ಸಾವು, ನಾಲ್ವರು ಗಂಭೀರ

11/05/2025 3:22 PM

SHOCKING : ಕಾಡಿನಲ್ಲಿ ಸಿಗುವ ಆಹಾರ ಬಳಸೋ ಮುನ್ನ ಇರಲಿ ಎಚ್ಚರ : ‘ವಿಷ ಅಣಬೆ’ ಸೇವಿಸಿ 6 ಜನ ಸಾವು!

11/05/2025 3:01 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರೈತರೇ ಗಮನಿಸಿ : ಜಮೀನು ಮಾರಾಟದಲ್ಲಿ ವಂಚನೆ ತಡೆಯಲು `ಪಹಣಿ-ಆಧಾರ್’ ಜೋಡಣೆ ಕಡ್ಡಾಯ!
KARNATAKA

ರೈತರೇ ಗಮನಿಸಿ : ಜಮೀನು ಮಾರಾಟದಲ್ಲಿ ವಂಚನೆ ತಡೆಯಲು `ಪಹಣಿ-ಆಧಾರ್’ ಜೋಡಣೆ ಕಡ್ಡಾಯ!

By kannadanewsnow5716/08/2024 5:41 AM

ಬಳ್ಳಾರಿ : ಜಮೀನು ಮಾರಾಟದಲ್ಲಿ ವಂಚನೆ ತಡೆಯಲು ರೈತರು ತಪ್ಪದೇ ಪಹಣಿ-ಆಧಾರ್ ಜೋಡಣೆ ಮಾಡುವಂತೆ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.

ಜಿಲ್ಲಾಡಳಿತದಿಂದ ನಗರದ ವಿಮ್ಸ್ ಮೈದಾನದಲ್ಲಿ ಗುರುವಾರ ಏರ್ಪಡಿಸಿದ್ದ 78ನೇ ಸ್ವಾತಂತ್ರೋತ್ಸವದ ಧ್ವಜಾರೋಹಣಾ ನೆರವೇರಿಸಿ ಅವರು ಮಾತನಾಡಿದರು. ಜಮೀನು ಮಾರಾಟದಲ್ಲಿ ವಂಚನೆ ತಡೆಯಲು ಪಹಣಿ-ಆಧಾರ್ ಜೋಡಣೆ ಕೈಗೊಳ್ಳಲಾಗಿದೆ. ಒಬ್ಬರು ಮೂರ್ನಾಲ್ಕು ದಶಕಗಳಿಂದ ಜಮೀನು ಸಾಗುವಳಿ ಮಾಡುತ್ತಿದ್ದು, ಅದಕ್ಕೆ ಬೇರೆ ವ್ಯಕ್ತಿಗಳು ಭೂ ಮಂಜೂರಾತಿ ಮಾಡಿಸಿಕೊಳ್ಳುವ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಯೋಜನೆಯಲ್ಲಿ ಈಗಾಗಲೇ ಬಳ್ಳಾರಿ ಜಿಲ್ಲೆಯಲ್ಲಿ ಶೇ.80 ರಷ್ಟು 5,23,542 ರೈತರ ಜಮೀನು ಪೈಕಿ 4,12,084 ಭೂ ಮಾಲೀಕರ ಜಮೀನನ್ನು ಅವರ ಆಧಾರ ಸಂಖ್ಯೆಗೆ ಜೋಡಣೆ ಮಾಡಲಾಗಿದೆ ಎಂದರು.

ಭೂ ಸುರಕ್ಷಾ ಕಾರ್ಯಕ್ರಮದಡಿ ಎಲ್ಲ ದಾಖಲೆಗಳನ್ನು ಸ್ಕಾö್ಯನ್ ಮಾಡಿ, ಇಂಡೆಕ್ಸ್ ಮಾಡಿ ಡಿಜಿಟಲೀಕರಣ ಮಾಡಲಾಗಿದೆ. ಈವರೆಗೆ ಒಟ್ಟು 4,43,27,379 ಕೋಟಿ ಪುಟಗಳನ್ನು ಸ್ಕಾö್ಯನ್ ಮಾಡಲಾಗಿದೆ. 31 ತಾಲ್ಲೂಕಿನಲ್ಲಿ ಪ್ರಾಯೋಗಿಕವಾಗಿ ಕೈಗೆತ್ತಿಕೊಳ್ಳಲಾಗಿದ್ದು, ಉಳಿದ ತಾಲೂಕುಗಳಲ್ಲೂ ದಾಖಲೆಗಳನ್ನು ಸ್ಕಾö್ಯನ್ ಮಾಡಿ ಡಿಜಿಟಲೀಕರಣಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಮುಂದಿನ ಒಂದು ವರ್ಷದೊಳಗೆ ದಾಖಲೆಗಳ ಡಿಜಿಟಲೀಕರಣ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು. ಇದರಿಂದ ಸಾರ್ವಜನಿಕರಿಗೆ ದಾಖಲೆಗಳನ್ನು ಒದಗಿಸುವುದರ ಜೊತೆಗೆ, ದಾಖಲೆಗಳ ತಿರುಚುವಿಕೆ, ದಾಖಲೆಗಳ ನಾಪತ್ತೆ ಮೊದಲಾದವುಗಳನ್ನು ತಡೆಯಬಹುದಾಗಿದೆ. ಬಳ್ಳಾರಿ ಜಿಲ್ಲಾಧಿಕಾರಿಗಳ ಅಭಿಲೇಖನಾಲಯದ ಸೇರಿದಂತೆ ಈಗಾಗಲೇ 23,11,771 ಪುಟಗಳ ಮೌಲ್ಯಾಧಾರಿತ ರೈತರ ದಾಖಲೆಗಳನ್ನು ಗಣಕೀಕರಿಸಲಾಗಿದ್ದು, ರೈತರು ಇದರ ಸದುಪಯೋಗ ಪಡಿಸಿಕೊಳ್ಳಬಹುದು ಎಂದರು.

ರಾಜ್ಯದಲ್ಲಿ ಒಟ್ಟು 1.40 ಕೋಟಿ ಎಕರೆ ಸರ್ಕಾರಿ ಜಮೀನು ಇದ್ದು, ಲ್ಯಾಂಡ್ ಬೀಟ್ ಮೊಬೈಲ್ ತಂತ್ರಾAಶದ ಮೂಲಕ ಒಟ್ಟು 91,000 ಎಕರೆ ಜಮೀನುಗಳು ಒತ್ತುವರಿಯಾಗಿರುವುದನ್ನು ಗುರುತಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಹೇಳಿದರು.

ಜಿಲ್ಲಾಡಳಿತದಿಂದ ನಗರದ ವಿಮ್ಸ್ ಮೈದಾನದಲ್ಲಿ ಏರ್ಪಡಿಸಿದ್ದ 78 ನೇ ಸ್ವಾತಂತ್ರೋತ್ಸವದ ಧ್ವಜಾರೋಹಣಾ ನೆರವೇರಿಸಿದ ಬಳಿಕ ಸುದ್ದಿಗಾರರನ್ನುದ್ದೇಶಿಸಿ ಅವರು ಅವರು ಮಾತನಾಡಿದರು.

ಈಗಾಗಲೇ 14.32 ಲಕ್ಷ ಸರ್ಕಾರಿ ಜಮೀನುಗಳ ಸ್ಥಳ ಪರಿಶೀಲನೆಗೆ ಸೂಚಿಸಿದ್ದು, ಈ ಪೈಕಿ 13.04 ಲಕ್ಷ ಜಮೀನುಗಳಿಗೆ ಗ್ರಾಮಲೆಕ್ಕಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಇದರಲ್ಲಿ ಕಂದಾಯ ಇಲಾಖೆಯ 1.93 ಲಕ್ಷ ಜಮೀನುಗಳು ಇದ್ದು, ವಿವಿಧ 20 ಇಲಾಖೆಗಳ ಜಮೀನುಗಳನ್ನೂ ಗುರುತಿಸಲಾಗಿದೆ ಎಂದರು.

ಕೆರೆ ಮತ್ತು ಸ್ಮಶಾನಗಳ ಹೆಚ್ಚುವರಿ ಜವಾಬ್ದಾರಿ ತೆಗೆದುಕೊಂಡು, ಸಮೀಕ್ಷೆ ನಡೆಸಲಾಗಿದೆ. ಈಗಾಗಲೇ ಬಳ್ಳಾರಿ ಜಿಲ್ಲೆಯಲ್ಲಿ ಶೇ.80.27 ರಷ್ಟು  ಅಂದರೆ 55.638 ಸರ್ಕಾರಿ ಜಮೀನುಗಳ ಪೈಕಿ 48,786 ಆಸ್ತಿಗಳನ್ನು ಲ್ಯಾಂಡ್ ಬೀಟ್ ತಂತ್ರಾAಶಕ್ಕೆ ಒಳಪಡಿಸಲಾಗಿದೆ. ಆಗಸ್ಟ್ ತಿಂಗಳಿನಿAದ ಸರ್ವೇಯರ್ ಲಭ್ಯತೆ ನೋಡಿಕೊಂಡು ಒತ್ತುವರಿ ತೆರವು ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Farmers should note: 'Pahani-Aadhaar' linking mandatory to prevent fraud in sale of land ರೈತರೇ ಗಮನಿಸಿ : ಜಮೀನು ಮಾರಾಟದಲ್ಲಿ ವಂಚನೆ ತಡೆಯಲು `ಪಹಣಿ-ಆಧಾರ್’ ಜೋಡಣೆ ಕಡ್ಡಾಯ!
Share. Facebook Twitter LinkedIn WhatsApp Email

Related Posts

BIG NEWS : ಕಾಶ್ಮೀರದ ಕೃಷಿ ವಿಜ್ಞಾನ ವಿವಿಯ ವಿದ್ಯಾರ್ಥಿಗಳು ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್

11/05/2025 3:35 PM1 Min Read

BREAKING : ರಾಮನಗರದಲ್ಲಿ ಭೀಕರ ಅಪಘಾತ : ಮರಕ್ಕೆ ಕಾರು ಡಿಕ್ಕಿಯಾಗಿ ಓರ್ವ ಸಾವು, ನಾಲ್ವರು ಗಂಭೀರ

11/05/2025 3:22 PM1 Min Read

BREAKING : ಬಾಗಲಕೋಟೆಯಲ್ಲಿ ಭೀಕರ ಅಪಘಾತ : ಟಿಪ್ಪರ್ ಹರಿದು ಬೈಕ್ ಸವಾರ ದುರ್ಮರಣ

11/05/2025 2:28 PM1 Min Read
Recent News

BIG NEWS : ಕಾಶ್ಮೀರದ ಕೃಷಿ ವಿಜ್ಞಾನ ವಿವಿಯ ವಿದ್ಯಾರ್ಥಿಗಳು ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್

11/05/2025 3:35 PM

BREAKING : ರಾಮನಗರದಲ್ಲಿ ಭೀಕರ ಅಪಘಾತ : ಮರಕ್ಕೆ ಕಾರು ಡಿಕ್ಕಿಯಾಗಿ ಓರ್ವ ಸಾವು, ನಾಲ್ವರು ಗಂಭೀರ

11/05/2025 3:22 PM

SHOCKING : ಕಾಡಿನಲ್ಲಿ ಸಿಗುವ ಆಹಾರ ಬಳಸೋ ಮುನ್ನ ಇರಲಿ ಎಚ್ಚರ : ‘ವಿಷ ಅಣಬೆ’ ಸೇವಿಸಿ 6 ಜನ ಸಾವು!

11/05/2025 3:01 PM

BREAKING : ಕಾಶ್ಮೀರದಲ್ಲಿ 20ಕ್ಕೂ ಹೆಚ್ಚು ಸ್ಥಳಗಳ ಮೇಲೆ ‘SIA’ ದಾಳಿ : ಉಗ್ರರ ಜೊತೆ ಸಂಪರ್ಕ ಹೊಂದಿದ್ದ ಶಂಕಿತರು ವಶಕ್ಕೆ

11/05/2025 2:44 PM
State News
INDIA

BIG NEWS : ಕಾಶ್ಮೀರದ ಕೃಷಿ ವಿಜ್ಞಾನ ವಿವಿಯ ವಿದ್ಯಾರ್ಥಿಗಳು ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್

By kannadanewsnow0511/05/2025 3:35 PM INDIA 1 Min Read

ಶ್ರೀನಗರ : ಭಾರತ ಮತ್ತು ಪಾಕಿಸ್ತಾನದ ನಡುವೆ ಪರಿಸ್ಥಿತಿ ಉದ್ವಿಗ್ನವಾಗಿದ್ದು ಇದೇ ವೇಳೆ ಪಾಕಿಸ್ತಾನ ನಿರಂತರವಾಗಿ ಕಾಶ್ಮೀರ, ಪಂಜಾಬ್, ರಾಜಸ್ಥಾನ್…

BREAKING : ರಾಮನಗರದಲ್ಲಿ ಭೀಕರ ಅಪಘಾತ : ಮರಕ್ಕೆ ಕಾರು ಡಿಕ್ಕಿಯಾಗಿ ಓರ್ವ ಸಾವು, ನಾಲ್ವರು ಗಂಭೀರ

11/05/2025 3:22 PM

BREAKING : ಬಾಗಲಕೋಟೆಯಲ್ಲಿ ಭೀಕರ ಅಪಘಾತ : ಟಿಪ್ಪರ್ ಹರಿದು ಬೈಕ್ ಸವಾರ ದುರ್ಮರಣ

11/05/2025 2:28 PM

BREAKING : ಕರ್ನಾಟಕ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿಕನಿಂದಲೇ ‘ಹುಸಿ ಬಾಂಬ್’ ಕರೆ : ಆರೋಪಿ ಅರೆಸ್ಟ್

11/05/2025 2:21 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.